ಮಾನವಂತ ಬದುಕಿಗೆ ಹೃದಯ ವೈಶಾಲ್ಯ ಬೇಕು

ಚಳಕಾಪೂರ ಗ್ರಾಮದ ಬ್ರಹ್ಮವಿದ್ಯಾಶ್ರಮದಲ್ಲಿ ಸಿದ್ಧಾರೂಢ ಸ್ವಾಮೀಜಿ 183ನೇ ಜಯಂತಿ ಮಹೋತ್ಸವ

Team Udayavani, Apr 14, 2019, 2:51 PM IST

14-April-19

ಭಾಲ್ಕಿ: ಚಳಕಾಪೂರ ಗ್ರಾಮದಲ್ಲಿ ನಡೆದ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ 183ನೇ ಜಯಂತಿ ಮಹೋತ್ಸವದ 6ನೇ ದಿನದ ಶಿವಾನುಭವ ಗೋಷ್ಠಿಯಲ್ಲಿ ಡಾ|ಶಿವಕುಮಾರ ಮಹಾಸ್ವಾಮಿಗಳ ಆರತಿ ಪೂಜೆ ನಡೆಯಿತು.

ಭಾಲ್ಕಿ: ಮನುಷ್ಯ ಸದಾಕಾಲ ಮಾನವಂತನಾಗಿ ಬದುಕಲು ಅಪೇಕ್ಷಿಸುತ್ತಾನೆ. ಮಾನವಂತನಾಗಿ ಬದುಕಬೇಕಾದರೆ ಹೃದಯ ವೈಶಾಲ್ಯತೆ ಹೊಂದಿರಬೇಕು ಎಂದು ಚಿದಂಬರಾಶ್ರಮ ಬೀದರಿನ ಡಾ|ಶಿವಕುಮಾರ ಸ್ವಾಮಿಗಳು ಹೇಳಿದರು.

ಚಳಕಾಪೂರ ಗ್ರಾಮದ ಬ್ರಹ್ಮವಿದ್ಯಾಶ್ರಮ ಶ್ರೀ ಸಿದ್ಧಾರೂಢ ಮಠದಲ್ಲಿ ನಡೆದ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ 183ನೇ ಜಯಂತಿ ಮಹೋತ್ಸವದ 6ನೇ ದಿನದ ಶಿವಾನುಭವ ಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಎಲ್ಲರೂ ಮಾನವಂತರಾಗಿ ಬದಕಬೇಕು ಎನ್ನುವ ಆಶಯ ಹೊಂದಿರುತ್ತಾರೆ. ಆದರೆ ಕೆಲವರು ಮಾನಕ್ಕಿಂತ ಮುಖ್ಯ ಧನಕ್ಕೆ ಆದ್ಯತೆ ಕೊಡುತ್ತಾರೆ.

ಇಂಥವರಿಗೆ ಶಾಸ್ತ್ರದಲ್ಲಿ ಅಧಮರು ಎನ್ನುವರು. ಇನ್ನೂ ಕೆಲವರು ಎಲ್ಲವನ್ನೂ ಕಳೆದುಕೊಂಡರೂ ಮಾನ ಕಳೆದುಕೊಳ್ಳುವುದಿಲ್ಲ. ಇಂತಹವರು ಶ್ರೇಷ್ಠರು. ಸತ್ಯ ಹರಿಶ್ಚಂದ್ರ ಮಹಾರಾಜ ತನ್ನ ಮಾನಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ಉದಾಹರಣೆ ನಮ್ಮ ಮುಂದಿದೆ. ನಾವು ಧರಿಸುವ ವಸ್ತ್ರ, ಪರಿಶುದ್ಧ ಶರೀರ, ಉತ್ತಮ ಮನಸ್ಸು, ನಮ್ಮಲ್ಲಿರುವ ವಿದ್ಯೆ ಇವೆಲ್ಲವೂ ನಮ್ಮನ್ನು ಮಾನವಂತರಾಗಿ ಬದುಕಲು ಸಹಕಾರಿಯಾಗಿವೆ ಎಂದು ಹೇಳಿದರು.

ಮುಚಳಂಬಿಯ ನಾಗಭೂಷಣ ಶಿವಯೋಗಿ ಮಠದ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು ಮಾತನಾಡಿ, ಗೌರವ ನಮ್ಮ ವ್ಯಕ್ತಿತ್ವವನ್ನು ಆಶ್ರಯಿಸಿದೆ. ಮನಸ್ಸು ಸ್ವಚ್ಚವಾಗಿದ್ದು, ಹೃದಯ
ವೈಶಾಲತೆ ಹೊಂದಿದ್ದರೆ ನಮಗೆ ಗೌರವ ಸಿಗುತ್ತದೆ ಎಂದು ಹೇಳಿದರು.

ಜಡಿಸಿದ್ಧ ಮಹಾಸ್ವಾಮಿಗಳು, ಶ್ರದ್ಧಾನಂದ ಸ್ವಾಮಿಗಳು, ಗುರುಲಿಂಗ ಸ್ವಾಮಿಗಳು, ಶಂಕರಾನಂದ ಸ್ವಾಮಿಗಳು, ಡಾ|ಸ್ವರೂಪಾನಂದ ಸ್ವಾಮಿಗಳು, ದಯಾನಂದ ಸ್ವಾಮಿಗಳು, ಅದ್ವೈತಾನಂದ ಸ್ವಾಮಿಗಳು, ಪರಮಾನಂದ ಸ್ವಾಮಿಗಳು, ಸೋಮೇಶ್ವರಾನಂದ ಸ್ವಾಮಿಗಳು, ಸದ್ರೂಪಾನಂದ ಸ್ವಾಮಿಗಳು, ಮಾತೋಶ್ರೀ ಲಕ್ಷ್ಮೀದೇವಿತಾಯಿ, ಮಾತೋಶ್ರೀ ಸಿದ್ದೇಶ್ವರಿ ತಾಯಿ, ಮಾತೋಶ್ರೀ ಆನಂದಮಯಿತಾಯಿ, ಸುಶಾಂತಾ ತಾಯಿ, ಶಶಿಕಲಾ ತಾಯಿ, ವಿದ್ಯಾವತಿ ತಾಯಿ ಪ್ರಸ್ತುತ ವಿಷಯ ಕುರಿತು ಮಾತನಾಡಿದರು.

ಇದೇ ವೇಳೇ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಮೂರ್ತಿ ತುಲಾಭಾರ, ಸದ್ಗುರು ಶ್ರೀ ಶಿವಕುಮಾರ ಮಹಾಸ್ವಾಮಿಗಳ ತುಲಾಭಾರ ಸೇವೆ ಹಾಗೂ ವೈಭವ ಆರತಿ ಪೂಜೆ ನಡೆಯಿತು. ಬೆಳಗ್ಗೆ ಸಾವಿರಾರು ಭಕ್ತಾದಿಗಳಿಂದ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಸಾಮೂಹಿಕ ಗ್ರಂಥ ಪಾರಾಯಣ ನಡೆಯಿತು. ಮತ್ತು ವಿವಿಧ ಸಂಗೀತ ಕಲಾವಿದರಿಂದ ಸಂಗೀತ ಸೇವೆ ನಡೆಯಿತು. ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಶ್ರೀಮಠದಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಜು ಐಹೊಳೆ, ಜೈಶ್ರೀ ಶಿವರಾಜ ಭೀಮಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ವಸಂತ ಹುಣಸನಾಳೆ, ವಿಜಯಕುಮಾರ ಗೌಡಗಾವೆ, ವೈಜಿನಾಥಪ್ಪ ದಾಬಶೆಟ್ಟೆ, ಡಾ| ಬಸವರಾಜ ಎಲ್ಲಡಗಿ, ನಾಗಯ್ನಾ ಸ್ವಾಮಿ, ಮಠ್ ಸೋಮಯ್ನಾ, ಚಿದಂಬರ ಶಿಕ್ಷಣ ಸಂಸ್ಥೆಯ ನಿರ್ದೇಶ ಶಿವಶರಣಪ್ಪಾ ಸಾವಳಗಿ, ರಮೇಶ ಮಠಪತಿ ಉಪಸ್ಥಿತರಿದ್ದರು. ಬ್ರಹ್ಮವಿದ್ಯಾಶ್ರಮ ಶ್ರೀ ಸಿದ್ಧಾರೂಢ ಮಠ ಚಳಕಾಪೂರದ ಶ್ರೀ ಶಂಕರಾನಂದ ಮಹಾಸ್ವಾಮಿಗಳು ಸ್ವಾಗತಿಸಿದರು. ಶ್ರೀ ಗಣೇಶಾನಂದ ಮಹಾರಾಜರು ನಿರೂಪಿಸಿದರು. ಹುಮನಾಪಾದಿನ ಪ್ರಾಂಶುಪಾಲ ಶಿವಾನಂದ ಮಠಪತಿ ವಂದಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.