ಅಡಿಕೆ ಮರ ರಕ್ಷಣೆಗೆ ಸುಣ್ಣ ಲೇಪನ!

4-5 ಅಡಿವರೆಗೆ ಸುಟ್ಟ ಸುಣ್ಣ ಬಳಿಯುತ್ತಿರುವ ಬೆಳೆಗಾರರು ಬಿಸಿಲಿನ ಝಳದಿಂದ ಅಡಿಕೆ ಮರ ಬಾಡದಂತೆ ಈ ಕ್ರಮ

Team Udayavani, Jan 5, 2020, 11:24 AM IST

5-January-03

ಭರಮಸಾಗರ: ಅಡಿಕೆ ಮರಗಳ ಉತ್ತಮ ಪೋಷಣೆಗಾಗಿ ಕಾಂಡದ ನಾಲ್ಕಾರು ಅಡಿ ಎತ್ತರದವರೆಗೆ ನಾನಾ ವಸ್ತುಗಳ ಮಿಶ್ರಣದೊಂದಿಗೆ ಸುಣ್ಣವನ್ನು ಲೇಪಿಸಲಾಗುತ್ತಿದೆ. ಈ ಮೂಲಕ ಬೆಳೆಗಾರರು ಮರಗಳ ರಕ್ಷಣೆಗೆ ತಮ್ಮದೇ ಐಡಿಯಾ ಮಾಡುತ್ತಿರುವುದು ಕಂಡುಬರುತ್ತಿದೆ.

ಕಳೆದ ನಾಲ್ಕಾರು ವರ್ಷಗಳಿಂದ ಮಳೆ ಕೈಕೊಟ್ಟ ವೇಳೆ ಬೆಳೆಗಾರರ ಪಾಡು ಹೇಳತೀರದಾಗಿತ್ತು. ಸಾಲಗಾರರಾಗಿ ಹನಿ ನೀರಿಗೂ ಪರಿತಪಿಸಿದ್ದರು. ಪ್ರಸಕ್ತ ವರ್ಷದ ಮಳೆ ಬೆಳೆಗಾರರ ಹಿಂದಿನ ಕಷ್ಟಗಳನ್ನು ಮರೆಸಿದ್ದು, ಹೆಚ್ಚಿನ ಇಳುವರಿಗಾಗಿ ಪ್ರಯತ್ನ ಮಾಡುವಂತೆ ಮಾಡಿದೆ.

ಲೇಪನ ಹೇಗೆ?: ಕೋಳಿ ಗೊಬ್ಬರ ಪೂರೈಕೆ ಸೇರಿದಂತೆ ಬೇಸಿಗೆಯ ಬಿಸಿಲ ಝಳಕ್ಕೆ ಮರ ಒಡೆಯದಂತೆ ನೋಡಿಕೊಳ್ಳಲಾಗುತ್ತಿದೆ. ಕಾಂಡಕ್ಕೆ ಉತ್ತಮ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ 4 ರಿಂದ 5 ಅಡಿ ಎತ್ತರದವರೆಗೆ ಸ್ವಾಭಾವಿಕ ಸುಟ್ಟ ಸುಣ್ಣದಿಂದ ಲೇಪನ ಮಾಡಿ ಮರಗಳನ್ನು ರಕ್ಷಿಸುತ್ತಿರುವುದು ಎಲ್ಲೆಡೆ ಕಂಡುಬರುತ್ತಿದೆ. ಸುಣ್ಣ ಲೇಪನದಿಂದ ಮರಗಳು ಮೃದುವಾಗುತ್ತವೆ ಎನ್ನಲಾಗುತ್ತದೆ. ಸುಣ್ಣದ ನೀರಿನೊಂದಿಗೆ ಹದಕ್ಕೆ ತಕ್ಕಷ್ಟು ಮೈದಾ ಹಿಟ್ಟು, ಹರೆಳೆಣ್ಣೆ, ಕುದಿಸಿ ಆರಿಸಿದ ಬೆಲ್ಲದ ಪಾನಕವನ್ನು ಮಿಶ್ರಣ ಮಾಡಿ ಪ್ರತಿ ಮರಕ್ಕೆ ಬಣ್ಣ ಬಳಿಯುವ ಬ್ರಶ್‌ ಬಳಸಿ ಲೇಪಿಸಲಾಗುತ್ತದೆ.

25 ರಿಂದ 30 ಕೆಜಿ ಕಲ್ಲು ಸುಣ್ಣ ಸುಮಾರು 600 ರಿಂದ 700 ಮರಗಳಿಗೆ ಬಳಿಯಲು ಬಳಕೆ ಆಗುತ್ತದೆ. ಸುಣ್ಣದ ಲೇಪನ ಮಾಡದೇ ಹೋದರೆ ನೀರಿನ ಕೊರತೆ ಇರುವ ತೋಟಗಳಾಗಿದ್ದಲ್ಲಿ ಬಿಸಿಲಿನ ಪರಿಣಾಮ ಮರದ ಕಾಂಡದ ಮೇಲೂ ಉಂಟಾಗಿ ಮರದ ಕಾಂಡ ಹಳದಿಗಟ್ಟುತ್ತದೆ. ಆಗ ಮರದ ಪೋಷಣೆ ಕ್ಷೀಣಿಸುತ್ತದೆ. ಮುಂದೆ ಅಡಿಕೆ ಇಳುವರಿಯಲ್ಲೂ ದುಷ್ಪರಿಣಾಮ ಉಂಟಾಗುತ್ತದೆ ಎಂಬುದು ಬೆಳೆಗಾರರ ಅಭಿಪ್ರಾಯ.

ಕೆಲವು ರೈತರು ಅಡಿಕೆ ತೋಟದ ಸುತ್ತಲಿನ ಮರಗಳ ಮೇಲೆ ಬಿಸಿಲ ಝಳದ ಪರಿಣಾಮ ತಪ್ಪಿಸಲು ಸುತ್ತಲೂ ತೇಗ, ಬೀಟೆ, ಅರಬೇವು ಸೇರಿದಂತೆ ಇತರೆ ಮರಗಳನ್ನು ನೆರಳಿನ ಉದ್ದೇಶದಿಂದ ಬೆಳೆಯುತ್ತಿದ್ದಾರೆ. ಹಲವರು ಕಾಂಡದ ಸುಮಾರು 5-6 ಅಡಿವರೆಗೂ ತೆಂಗಿನ ಗರಿಗಳಿಂದ ಹೆಣೆದು ನೆರಳು ನೀಡುವ ಪ್ರಯತ್ನ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಸತತ ಬರದಿಂದ ಕಂಗಾಲಾಗಿದ್ದ ಅಡಿಕೆ ಬೆಳೆಗಾರರು, ಈ ಬಾರಿ ಆದ ಉತ್ತಮ ಮಳೆಯಿಂದ ಅಡಿಕೆ ಮರಗಳನ್ನು ರಕ್ಷಿಸಿಕೊಂಡು ಉತ್ತಮ ಇಳುವರಿ ಪಡೆಯುವತ್ತ ಚಿತ್ತ ಹರಿಸಿದ್ದಾರೆ.

ಕಳೆದ ವರ್ಷ ಮಳೆಯಿಲ್ಲದೆ ಟ್ಯಾಂಕರ್‌ ನೀರಿನಿಂದ ತೋಟವನ್ನು ಉಳಿಸಿಕೊಂಡಿದ್ದೇವೆ. ಈ ವರ್ಷ ಕೊಳವೆ ಬಾವಿಗಳಲ್ಲಿ ನೀರು ಉತ್ತಮವಾಗಿದೆ. ಈ ಹಿನ್ನೆಲೆಯಲ್ಲಿ ತೋಟದ ಅಭಿವೃದ್ಧಿಗಾಗಿ ಉತ್ತಮ ನೀರು ಪೂರೈಕೆಯೊಂದಿಗೆ ಮರಗಳ ರಕ್ಷಣೆಗಾಗಿ ಸುಣ್ಣ ಬಳಿಯುವ ಕೆಲಸ ಮಾಡುತ್ತಿದ್ದೇವೆ. ಇದರಿಂದ ಮರಗಳಿಗೆ ಹಲವು ರೀತಿಯಲ್ಲಿ ಅನುಕೂಲಗಳಿವೆ.
ಕಣಮಪ್ಪ,
ಅಡಿಕೆ ಬೆಳೆಗಾರರು, ಹಳವುದರ

„ಎಚ್‌.ಬಿ. ನಿರಂಜನ ಮೂರ್ತಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.