ಮಾಗಿ ಉಳುಮೆಯತ್ತ ರೈತನ ಚಿತ್ತ

ಮುಂದಿನ ವರ್ಷದ ಕೃಷಿ ಚಟುವಟಿಕೆಗೆ ಈಗಿನಿಂದಲೇ ಹೊಲ ಸಜ್ಜುಗೊಳಿಸಲು ಯತ್ನ

Team Udayavani, Nov 22, 2019, 12:55 PM IST

21-November-11

„ಎಚ್‌.ಬಿ. ನಿರಂಜನ ಮೂರ್ತಿ
ಭರಮಸಾಗರ
: ಪ್ರಸಕ್ತ ವರ್ಷ ಬಿತ್ತನೆ ಮಾಡಿದ್ದ ಎರಡು ಬೆಳೆಗಳು ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಕೈಕೊಟ್ಟಿವೆ. ಹಾಗಾಗಿ ಇಲ್ಲೊಬ್ಬ ರೈತ ಜಮೀನಿನ ಮಾಗಿ ಉಳುಮೆ ಮಾಡುವ ಮೂಲಕ ಮುಂಬರುವ ವರ್ಷಕ್ಕೆ ಹೊಲವನ್ನು ಸಿದ್ಧಗೊಳಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ.

ಸಮೀಪದ ವಿಜಾಪುರ ಗ್ರಾಮದ ಪರಮೇಶ್ವರಪ್ಪ ಎಂಬುವವರು ಹೆದ್ದಾರಿ ಸನಿಹದಲ್ಲೇ ಇರುವ ಸುಮಾರು ಮೂರು ಎಕರೆ ಜಮೀನಿನಲ್ಲಿ ಜುಲೈ, ಆಗಸ್ಟ್‌ ತಿಂಗಳಲ್ಲಿ ಬಿದ್ದ ಅಲ್ಪ ಮಳೆಗೆ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಬಳಿಕ ಮಳೆ ಕೊರತೆ ಎದುರಾಗಿ ಮೆಕ್ಕೆಜೋಳ ಫಸಲು ತೆನೆಗಟ್ಟದೆ ಅರ್ಧಕ್ಕೆ ಬೆಳೆದು ನಷ್ಟಕ್ಕೆ ತುತ್ತಾಗಿತ್ತು.

ಇದರಿಂದ ವಿಚಲಿತರಾಗದ ಪರಮೇಶ್ವರಪ್ಪ, ಎರಡನೇ ಬಾರಿ ನವಣೆ ಬೆಳೆ ಬಿತ್ತನೆ ಮಾಡಿದ್ದರು. ಆದರೆ ನವಣೆ ಬೆಳೆ ಅತಿಯಾದ ಮಳೆಯಿಂದಾಗಿ ಕಾಳುಗಟ್ಟುವ ಹಂತದಲ್ಲಿ ಮಳೆಗೆ ಸಿಲುಕಿ ಹುಲ್ಲು ನೆಲಕ್ಕೆ ಬಿದ್ದು ನಷ್ಟ ಉಂಟು ಮಾಡಿತ್ತು. ಇದರಿಂದ ಎರಡೆರಡು ಬೆಳೆಗಳನ್ನು ಬೆಳೆಯುವ ಸಾಹಸಕ್ಕೆ ಕೈಹಾಕಿದ ರೈತ ಸಾಲದ ಸುಳಿಗೆ ಸಿಲುಕಬೇಕಾಯಿತು. ವಿಜಾಪುರ, ಲಕ್ಷ್ಮೀಸಾಗರ, ಬೀರಾವರ, ತಿಮ್ಮಪ್ಪನಹಳ್ಳಿ, ಕೆ.ಬಳ್ಳೇಕಟ್ಟೆ ಸೇರಿದಂತೆ ಹಿರೇಗುಂಟನೂರು ಹೋಬಳಿಯ ಬಹುತೇಕ ನಷ್ಟದ ಹಾದಿ ತುಳಿದಿದ್ದಾರೆ.

ಎರಡನೇ ಬಾರಿ ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯಲು ಮುಂದಾಗಿರುವವರು ಒಂದಿಷ್ಟು ಫಸಲು ಪಡೆದಿದ್ದಾರೆ. ಆದರೆ ಮೆಕ್ಕೆಜೋಳದ ಬಳಿಕ ನವಣೆ ಬೆಳೆಯಲು ಹೋದ ಪರಮೇಶ್ವರಪ್ಪ ಮಾತ್ರ ನಷ್ಟ ಅನುಭವಿಸಿದ್ದಾರೆ.

ಮಳೆ ಆಗಿದೆ ಎಂಬುದು ಎಷ್ಟು ಸತ್ಯವೋ ಮಳೆ ಸುರಿದ ಹಲವು ಕಡೆ ಬೆಳೆ ನಷ್ಟಕ್ಕೆ ತುತ್ತಾಗಿರುವ ಪರಮೇಶ್ವರಪ್ಪ ಅವರಂತಹ ರೈತರು ಹಲವರಿದ್ದಾರೆ. ಆದರೆ ಇಂತಹ ರೈತರನ್ನು ಗುರುತಿಸಿ ಬೆಳೆ ನಷ್ಟ ಪರಿಹಾರ ಒದಗಿಸುವ ಅಥವಾ ವಿಮೆ ಹಣವನ್ನಾದರೂ ರೈತನಿಗೆ ಬರುವಂತೆ ಮಾಡಬೇಕಾಗಿದೆ. ಆದರೆ ವ್ಯವಸ್ಥೆಯ ನಿರ್ಲಕ್ಷ್ಯದಿಂದ ರೈತರು ಸಂಕಷ್ಟ ಎದುರಿಸಬೇಕಾಗಿದೆ.

ಇಷ್ಟೆಲ್ಲಾ ನಷ್ಟ ಹಾಗೂ ಮಳೆ ಹಿಂದೆ ಸರಿದಿರುವ ನಡುವೆ ಬೆಳೆ ನಷ್ಟವಾದ ಜಮೀನಿನಲ್ಲಿ ಮಾಗಿ ಉಳುಮೆ ಮಾಡುವ ಮೂಲಕ ಮುಂಬರುವ ವರ್ಷಕ್ಕೆ ಜಮೀನನ್ನು ಸಿದ್ಧಪಡಿಸಿಕೊಳ್ಳುವ ಮೂಲಕ ಪರಮೇಶ್ವರಪ್ಪನವರು ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ಮಳೆ ಆಶ್ರಯದ ಭೂಮಿಯೊಂದಿಗೆ ಎರಡು ಎಕರೆ ಅಡಿಕೆ ತೋಟವಿದೆ. ತೋಟ ಉಳಿಸಿಕೊಳ್ಳಲು ಬೇಸಿಗೆಯಲ್ಲಿ ನೀರಿಗೆ ಭಗೀರಥ ಪ್ರಯತ್ನ ಮಾಡಿದ್ದೇವೆ. ಈ ನಡುವೆ ಮಳೆ ಆಶ್ರಯದ ಭೂಮಿಯಲ್ಲಿ ಒಮ್ಮೆ ಬೆಳೆ ಮಳೆ ಕೊರತೆಗೆ, ಮತ್ತೂಮ್ಮೆ ಹೆಚ್ಚು ಮಳೆಯಿಂದ ನಷ್ಟಕ್ಕೆ ಒಳಗಾಗಿದೆ. ಮಾಗಿ ಮಾಡಿದರೆ ಮುಂಬರುವ ವರ್ಷದ ಬೆಳೆಗೆ ಅನುಕೂಲವಾಗುತ್ತದೆ.
ಪರಮೇಶ್ವರಪ್ಪ,
ವಿಜಾಪುರ ಗ್ರಾಮದ ರೈತ 

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.