ನೆಲಕ್ಕುರುಳಿದ “ಚೌಡಮ್ಮ ನ ಬೇವಿನ ಮರ’

ಕೊಳಹಾಳು ಚೌಡಮ್ಮ ದೇಗುಲಕ್ಕೆ ಹೊಂದಿಕೊಂಡಿದ್ದ ಬೇವಿನ ಮರ ರಸ್ತೆ ಅಗಲೀಕರಣಕ್ಕೆ ಬಲಿ

Team Udayavani, Dec 22, 2019, 1:36 PM IST

22-Decemebrer-12

ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ಕೊಳಹಾಳು ಚೌಡಮ್ಮ ದೇಗುಲವನ್ನು ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ನೆಲಸಮಗೊಳಿಸಲಾಗಿದೆ. ಇದರ ಬೆನ್ನಲ್ಲೇ ಸುಮಾರು 120 ವರ್ಷಗಳಷ್ಟು ಹಳೆಯದಾದ ಹಾಗೂ ದೇಗುಲಕ್ಕೆ ಹೊಂದಿಕೊಂಡಿದ್ದ “ಚೌಡಮ್ಮನ ಮರ’ ಎಂದೇ ಪ್ರಸಿದ್ಧಿ ಪಡೆದಿದ್ದ ಬೇವಿನ ಮರವನ್ನು ಶನಿವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೆಲಕ್ಕುರುಳಿಸಿತು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಚಿತ್ರದುರ್ಗದಿಂದ ದಾವಣಗೆರೆವರೆಗಿನ ಮರಗಳನ್ನು ಕಡಿದು ಉರುಳಿಸಲಾಗಿತ್ತು. ಹೀಗೆ ನೆಲಕ್ಕುರುಳಿದ ಸುಮಾರು 100 ವರ್ಷಗಳ ಹಳೆಯದಾದ ಮರಗಳ ಸಂಖ್ಯೆ ನೂರರ ಗಡಿ ದಾಟಿತ್ತು. ಇದೇ ವೇಳೆ ಕೊಳಹಾಳು ಚೌಡಮ್ಮ ದೇಗುಲಕ್ಕೆ ಹೊಂದಿಕೊಂಡ ಬೇವಿನ ಮರವನ್ನು ಕೂಡ ಕಡಿಯಲು ಉದ್ದೇಶಿಸಲಾಗಿತ್ತು. ಆದರೆ ಗುತ್ತಿಗೆದಾರರು ದೇವಿ ಮಹಿಮೆಗೋ ಅಥವಾ ದೇವಿಯ ಕೃಪೆಗಾಗಿಯೋ ಇಲ್ಲಿನ ಮರಗಳನ್ನು ಕಡಿಯದೆ ದೇಗುಲಕ್ಕೆ ಐದು ಸಾವಿರ ರೂ. ಕಾಣಿಕೆ ನೀಡಿ ಮರ ಕಡಿಯುವುದಿಲ್ಲ ಎಂದು ತಿಳಿಸಿ ದೇವಿ ಆರ್ಶೀವಾದ ಪಡೆದು ಹೋಗಿದ್ದನ್ನು ಕೊಳಹಾಳು ಗ್ರಾಮದ ತಿಪ್ಪೇಸ್ವಾಮಿ ನೆನಪಿಸಿಕೊಂಡರು.

ಹೆದ್ದಾರಿ ಉದ್ದಗಲಕ್ಕೂ ಇದ್ದ ಮರಗಳ ಮಾರಣಹೋಮವೇ ನಡೆದು ಹೋದರೂ ಚೌಡಮ್ಮ ದೇಗುಲದ ಬೇವಿನ ಮರ ಮಾತ್ರ ಉಳಿದಿತ್ತು. ಹೀಗಾಗಿ ಕಳೆದ 15 ವರ್ಷಗಳ ಹಿಂದೆಯೇ ಕಡಿತಲೆಗೆ ಆಹುತಿ ಆಗಬೇಕಿದ್ದ ಈ ಬೇವಿನ ಮರದ ಸಾವಿನ ಅವಧಿ 15 ವರ್ಷಗಳಿಗೆ ವಿಸ್ತರಣೆ ಆಗಿತ್ತು. ಖ್ಯಾತ ಜ್ಯೋತಿಷಿಗಳ ಮೊರೆ ಹೋಗಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಆಗಬಹುದಾದ ಅಡ್ಡಿ ಆತಂಕಗಳನ್ನು ಪೂಜೆ, ಹೋಮ ಹವನಗಳನ್ನು ನಡೆಸಿ ನಿವಾರಿಸಿಕೊಂಡು ದೇಗುಲ ಸ್ಥಳಾಂತರಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದರು. ಶನಿವಾರ ಅಂತಿಮವಾಗಿ ಬೇವಿನಮರವನ್ನು ನೆಲಕ್ಕೆ ಉರುಳಿಸಿದ್ದಾರೆ.

ಇಡೀ ದೇಗುಲವನ್ನು ಕೆಡವಿದ ಬಳಿಕ ಬೇವಿನ ಮರ ಅನಾಥವಾದಂತೆ ತೋರುತ್ತಿತ್ತು. ಜೆಸಿಬಿ ಬಳಸಿ ಮರದ ಎಲ್ಲಾ ಕೊಂಬೆಗಳನ್ನು ಒಂದೊಂದಾಗಿ ಉರುಳಿಸಲಾಯಿತು. ಸಂಜೆ ವೇಳೆಗೆ ಇಡೀ ಮರ ನೆಲಕ್ಕೆ ಬಿತ್ತು.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.