ಉಸಿರಿರುವವರೆಗೂ ಪರಿಸರ ಕಾಪಾಡುವೆ: ನಿಂಗೇಗೌಡ

90ನೇ ವಯಸ್ಸಿನಲ್ಲೂ ನಿಂಗೇಗೌಡರಿಗೆ ಅಪಾರ ಪರಿಸರ ಕಾಳಜಿ •ಯುವಕರಲ್ಲಿ ಪರಿಸರ ಸಂರಕ್ಷಣೆ ಆಸಕ್ತಿ ಹೆಚ್ಚಲಿ

Team Udayavani, Jun 5, 2019, 2:53 PM IST

5-June-35

ಭಾರತೀನಗರದ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ ಗಿಡಗಳ ಪೋಷಣೆಯಲ್ಲಿ ತೊಡಗಿರುವ ನಿಂಗೇಗೌಡರು.

ಭಾರತೀನಗರ: ಆಧುನಿಕತೆ ಬೆಳೆದಂತೆ ಪರಿಸರ ಕ್ಷೀಣಿಸುತ್ತಿರುವುದು ಮುಂದಿನ ದಿನಗಳ ಅಪಾಯ ಮುನ್ಸೂಚನೆ. ಇಂದಿನ ದಿನಗಳಲ್ಲಿ ಅರಣ್ಯ ಮತ್ತು ಪರಿಸರ ಕಾಳಜಿ ಎಂಬುವುದು ಕೇವಲ ಭಾಷಣ, ಪ್ಲೆಕ್ಸ್‌, ಬ್ಯಾನರ್‌ಗಳಲ್ಲಿ ಮಾತ್ರ ಕಾಣಬಹುದು. ಇಂತಹ ಸಂದರ್ಭದಲ್ಲಿ ಒಂದಷ್ಟು ಜಾಗೃತ ಮನಸ್ಸುಗಳು ಪರಿಸರ ವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ.

ಆದರೆ, ದೇಶದ ಯುವಶಕ್ತಿ ಪರಿಸರದೆಡೆಗೆ ಆಸಕ್ತಿ ವಹಿಸದಿರುವುದು ವಿಷಾದ. ಇಂತಹ ಸನ್ನಿವೇಶದಲ್ಲಿ ಅನಕ್ಷರಸ್ತ ವೃದ್ಧರೊಬ್ಬರು ಯಾವುದೇ ಫ‌ಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಮನೋಭಾವದಿಂದ ಗಿಡಮರ ಬೆಳೆಸುತ್ತಿರುವುದು ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದೆ.

ಮಣಿಗೆರೆಯ 90 ವರ್ಷದ ನಿಂಗೇಗೌಡರು ಕೆರೆ ಏರಿಯ ಬಳಿ ಏರಿಬೊಮ್ಮಲಿಂಗೇಶ್ವರ ದೇವಾಲಯ ನಿರ್ಮಿಸಿ, ಅದರ ಸುತ್ತ-ಮುತ್ತ ಅರಳಿ, ಬನ್ನಿ ಮುಂತಾದ ಮರ, ದೇವರ ಪೂಜಾಕಾರ್ಯಕ್ಕೆ ಉಪಯುಕ್ತ ವಾಗುವ ಅನೇಕ ಹೂವು, ಬಾಳೆ ಗಿಡ ಬೆಳೆಸಿದ್ದಾರೆ. ಸುಮಾರು 25 ವರ್ಷಗಳಿಂದ ಪರಿಸರಕ್ಕಾಗಿಯೇ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ನಿಂಗೇಗೌಡರು ಮಣಿಗೆರೆಯಲ್ಲೂ ಪಟ್ಟಲದಮ್ಮನ ಗುಡಿ ನಿರ್ಮಿಸಿ ಆ ದೇಗುಲದ ಸುತ್ತಮುತ್ತ ಸುಮಾರು 250ಕ್ಕೂ ಹೆಚ್ಚು ಗಿಡಮರ ಬೆಳೆಸಿ ಈಗಲೂ ನೀರುಣಿಸುತ್ತಿದ್ದಾರೆ.

ತಮ್ಮ ವಯೋಸಹಜ ನಿಶಕ್ತಿ ಲೆಕ್ಕಿಸದೆ ಗಿಡಮರಗಳನ್ನು ಮಕ್ಕಳಂತೆ ಪ್ರೀತಿಸಿ ಪೊರೆಯುತ್ತಿರುವ ನಿಂಗೇಗೌಡರ ಮುಖದಲ್ಲಿ ಸಾರ್ಥಕ ಭಾವ ಕಂಡು ಬರುತ್ತದೆ. ಇದಲ್ಲದೆ ಸರ್ಕಾರಿ ಜಾಗಗಳಲ್ಲಿ ವಿವಿಧ ಜಾತಿಯ ಮರಗಳನ್ನು ಬೆಳೆಸಿದ್ದಾರೆ. ಬಿಸಿಲ ಬೇಗೆಯಲ್ಲಿ ಬೆಂದವರಿಗೆ ತಂಪಾದ ನೆರಳು ನೀಡುವ ಈ ಮರಗಳ ಹಿಂದೆ ನಿಂಗೇಗೌಡರ ಬೆವರ ಹನಿಗಳಿವೆ.

ಪ್ರಶಸ್ತಿ, ಸನ್ಮಾನ: ಇವರ ಈ ನಿಸ್ವಾರ್ಥ ಸೇವೆ ಗುರುತಿಸಿರುವ ಮದ್ದೂರು ತಾಲೂಕು ಆಡಳಿತ ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಅದರಂತೆ ತಾಲೂಕು ಕೃಷಿಕ ಸಮಾಜ ನಿಂಗೇಗೌಡರ ಸೇವೆಯನ್ನು ಪರಿಗಣಿಸಿ ಗೌರವಿಸಿದೆ.

ಇಷ್ಟೆಲ್ಲಾ ತಮ್ಮ ಸ್ವಂತ ಶಕ್ತಿಯಿಂದ ಸಾಧಿಸಿರುವ ನಿಂಗೇಗೌಡರು, ಈ ಪ್ರದೇಶದಲ್ಲಿ ಒಂದು ಕೊಳವೆಬಾವಿ ತೆಗೆಸಿಕೊಟ್ಟರೆ ಬಹಳ ಉಪಯೋಗ ವಾಗುತ್ತದೆ ಎನ್ನುತ್ತಾರೆ. ತಾಲೂಕು ಆಡಳಿತ ನಿಂಗೇಗೌಡರ ಬೇಡಿಕೆಯನ್ನು ಈಡೇರಿಸಿದರೆ ನಿಜಕ್ಕೂ ಈ ಭಾಗದ ಪರಿಸರ ಚಿತ್ರಣವನ್ನೇ ಬದಲಿಸುವ ಹುಮ್ಮಸ್ಸಿನಲ್ಲಿದ್ದಾರೆ.

ನಾನು ಯಾವುದೇ ಸ್ವಾರ್ಥಕ್ಕಾಗಿ ಗಿಡ ಮರ ಬೆಳೆಸ್ತಿಲ್ಲ. ಈ ದಿನ ಪರಿಸರ ಹಾಳಾಗ್ತಿದೆ. ಒಳ್ಳೆಯ ಗಾಳಿ, ಆಹಾರ ಜನರಿಗೆ ಸಿಗ್ತಿಲ್ಲ. ಈಗಿನವರಲ್ಲಿ ಗಿಡಮರ ಬೆಳೆಸುವ ಬಗ್ಗೆ ಆಲೋಚನೆಯೇ ಇಲ್ಲ.
ನಾನು ಬದುಕಿರುವವರೆಗೂ ಪರಿಸರ ಕಾಪಾಡ್ತೀನಿ.
● ಮಣಿಗೆರೆ ನಿಂಗೇಗೌಡ,
ಪರಿಸರ ಪ್ರೇಮಿ

ಪ್ರಸ್ತುತ ದಿನದಲ್ಲಿ ಪರಿಸರ ನಾಶಗೊಳ್ಳುತ್ತಿದೆ. ಇಳಿ ವಯಸ್ಸಿನಲ್ಲೂ ನಿಂಗೇಗೌಡರು ಪರಿಸರದ ಬಗ್ಗೆ ಇಟ್ಟಿರುವ ಕಾಳಜಿಯನ್ನು ಸಮಾಜ ಶ್ಲಾಘಿ ಸಬೇಕು. ಇಂತಹ ಮನೋಭಾವೆ ಪ್ರತಿಯೊಬ್ಬರು ಮೈಗೂಡಿಸಿಕೊಂಡಾಗ ಮಾತ್ರ ಪರಿಸರ ಉಳಿಯಲು ಸಾಧ್ಯ.
● ಮಹೇಂದ್ರಸಿಂಗ್‌ಕಾಳಪ್ಪ,
ಪರಿಸರ ಪ್ರೇಮಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.