ಕಸ ಚೆಲ್ಲುವಲ್ಲಿ ರಂಗೋಲಿ ಬಿಡಿಸಿ ಜಾಗೃತಿ

ರಸ್ತೆ ಬದಿ ತಾಜ್ಯದಿಂದ ಅನೈರ್ಮಲ್ಯಸ್ವಚ್ಛ ನಗರಕ್ಕಾಗಿ ವಿನೂತನ ಪ್ರಯೋಗ! ನಗರಸಭೆಯಿಂದ ಕ್ರಮ

Team Udayavani, Dec 14, 2019, 11:45 AM IST

14-December-5

„ಶಶಿಕಾಂತ ಬಂಬುಳಗೆ
ಬೀದರ:
“ಸ್ವಚ್ಛ ಮತ್ತು ಸುಂದರ’ ಬೀದರ ನಗರಕ್ಕಾಗಿ ಪಣ ತೊಟ್ಟಿರುವ ನಗರಸಭೆ ಇಲ್ಲಿನ ರಸ್ತೆಬದಿಗಳಲ್ಲಿ ಕಸ ಹಾಕುವುದನ್ನು ತಡೆಗಟ್ಟಲು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಕಸ ಹಾಕುವ ಸ್ಥಳವನ್ನು ಸ್ವಚ್ಛಗೊಳಿಸಿ, ಅಲ್ಲಿ ರಂಗೋಲಿ ಬಿಡಿಸುವ ಮೂಲಕ ಜಾಗೃತಿಗೆ ಮುಂದಾಗಿದೆ.

ದಿನ ನಿತ್ಯ ರಸ್ತೆಗಳನ್ನು ಶುಚಿಗೊಳಿಸುವ ಕಾಯಕದಲ್ಲಿ ತೊಡಗುವ ಪೌರ ಕಾರ್ಮಿಕರು ಗುರುವಾರದಿಂದ ಬಣ್ಣ ಬಣ್ಣದ ರಂಗೋಲಿಯ ಚಿತ್ತಾರ ಬಿಡಿಸುತ್ತಿದ್ದಾರೆ. ಇದಕ್ಕೆ ಮಹಿಳಾ ಸಿಬ್ಬಂದಿ ಸಾಥ್‌ ನೀಡುತ್ತಿದ್ದಾರೆ. ದಿನಕ್ಕೊಂದು ವಾರ್ಡ್‌ನಲ್ಲಿ ಈ ಜಾಗೃತಿ ಕಾರ್ಯ ನಡೆಸುತ್ತಿದ್ದಾರೆ. ತ್ಯಾಜ್ಯ ಎಸೆಯೋ ಮುನ್ನ ಒಮ್ಮೆ ಈ ರಂಗೋಲಿನಾದ್ರು ನೋಡ್ರಪ್ಪಾ, ನಿಮಗೆ ಕಸ ಬಿಸಾಡುವ ಮನಸ್ಸು ಆಗುವುದಿಲ್ಲ ಎಂದು ಹೇಳುತ್ತಾ ನಿತ್ಯ ತ್ಯಾಜ್ಯ ಎಸೆಯುವ ಜಾಗದಲ್ಲಿ ರಂಗೋಲಿ ಬಿಡಿಸಿ ಅರಿವು ಮೂಡಿಸುತ್ತಿದ್ದಾರೆ.

ನಗರದ ಕೆಇಬಿ ರಸ್ತೆಯ ಬಳಿ ಗುರುವಾರ ವಿನೂತನ ಪ್ರಯೋಗ ಮಾಡಿದ್ದ ನಗರಸಭೆ ಶುಕ್ರವಾರ ಇಲ್ಲಿನ ಜನವಾಡಾ ರಸ್ತೆಯಲ್ಲಿ ಕೈಗೊಂಡಿದೆ. ಕಸ ಚೆಲ್ಲುವ ಗಲ್ಲಿ ಜಾಗದಲ್ಲಿ ರಂಗೋಲಿ ಬಿಡಿಸಿ ಸುತ್ತಮುತ್ತಲಿನ ಮನೆಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ತಾಜ್ಯದಿಂದ ನೈರ್ಮಲ್ಯ ವ್ಯವಸ್ಥೆ ಹದಗೆಡುವುದುರ ಜತೆಗೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಕಸವನ್ನು ನಗರಸಭೆ ವಾಹನದಲ್ಲಿ ಹಾಕಿ, ನಿಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ ಎಂದು ತಿಳಿ ಹೇಳಿದ್ದಾರೆ.

ಕಾರ್ಮಿಕರು-ನಿರೀಕ್ಷಕರಿಗೆ ಸನ್ಮಾನ: ನಗರಸಭೆಯ ವಿನೂತನ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅಲ್ಲಿನ ಸ್ಥಳೀಯ ಜನರು ಆರೋಗ್ಯ ನಿರೀಕ್ಷಕರು ಮತ್ತು ಪೌರ ಕಾರ್ಮಿಕರಿಗೆ ಹೂ ಹಾರ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ. ಇನ್ನುಮುಂದೆ ರಸ್ತೆ ಬದಿಗಳಲ್ಲಿ ಕಸವನ್ನು ಹಾಕುವುದಿಲ್ಲ ಎಂದು ಭರವಸೆ ಕೊಟ್ಟಿದ್ದಾರೆ.

ಕಸದ ರಾಶಿಯಿಂದಾಗಿ ಸದಾ ಗಬ್ಬು ನಾರುತ್ತಿದ್ದ ಪ್ರದೇಶಗಳಲ್ಲಿ ಜನ ಮೂಗು ಮುಚ್ಚಿಕೊಂಡು ಹೋಗಬೇಕಾದ ಪರಿಸ್ಥಿತಿ ಇತ್ತು. ಆದರೆ, ಗುರುವಾರ ನಗರಸಭೆಯ ವಿಶೇಷ ಕಾರ್ಯಕ್ರಮದಿಂದಾಗಿ ಈ ತಾಣಗಳ ಪರಿಸ್ಥಿತಿ ಕೊಂಚ ಬದಲಾಗಿತ್ತು. ಕಸ ಮಾಯವಾಗಿ ಅಲ್ಲಿ ಬಣ್ಣ ಬಣ್ಣದ ರಂಗೋಲಿ ಕಂಗೊಳಿಸುತ್ತಿತ್ತು. ಜನರಲ್ಲಿ ಪರಿಸರದ ಬಗೆಗೆ ಜಾಗೃತಗೊಂಡು, ನಗರಸಭೆ ಆರಂಭಿಸಿರುವ ವಿನೂತನ ಪ್ರಯತ್ನಕ್ಕೆ ಕೈಜೋಡಿಸಬೇಕಿದೆ. ಆಗ ಮಾತ್ರ ಮತ್ತೆ ಸ್ವಚ್ಛ ಬೀದರರನ್ನಾಗಿ ಕಾಣಲು ಸಾಧ್ಯವಿದೆ.

ಸ್ವಚ್ಛ ಬೀದರಗೆ ಅಪಖ್ಯಾತಿ
ಪ್ರವಾಸೋದ್ಯಮ ನಗರಿ ಬೀದರ ಈ ಹಿಂದೆ ಭಾರತದ 22ನೇ ಸ್ವಚ್ಛ ನಗರ ಮತ್ತು ಕರ್ನಾಟಕ ರಾಜ್ಯದ 5ನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಡೆದಿತ್ತು. ಆದರೆ, ನಂತರದ ದಿನಗಳಲ್ಲಿ ಎಲ್ಲೆಂದರಲ್ಲಿ ರಾಶಿ ರಾಶಿ ತ್ಯಾಜ್ಯ, ಅದರ ನಿರ್ವಹಣೆ ಕೊರತೆಯಿಂದಾಗಿ ಬೀದರ ಈಗ ಅಸ್ವಚ್ಚತೆ ನಗರ ಎಂಬ ಅಪಖ್ಯಾತಿಗೆ ಒಳಗಾಗಿದೆ. ಮುಖ್ಯ ರಸ್ತೆ ಮತ್ತು ಜನನಿಬಿಡ ರಸ್ತೆಗಳ ಬದಿಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿನ ಕಸ ತಂದು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ನಗರಸಭೆಯಿಂದ ಕಸ ಸಂಗ್ರಹಿಸಲು ವಾಹನಗಳ ಮನೆ ಬಾಗಿಲಿಗೆ ಬಂದರೂ ಜನ ಮಾತ್ರ ಕಸವನ್ನು ಬೀದಿಗೆ ಚಲ್ಲುತ್ತಾರೆ. ಇದರಿಂದ ಕಸದ ರಾಶಿಗಳು ತುಂಬಿ ದುರ್ವಾಸನೆ ಬೀರುತ್ತಿದೆ. ಹಾಗಾಗಿ ಇದೀಗ ನಗರಸಭೆ ಕಸಮುಕ್ತ ಬೀದರರನ್ನಾಗಿ ಮಾಡಲು ಗುರುವಾರದಿಂದ ರಸ್ತೆ ಬದಿಗಳಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದೆ. ರಸ್ತೆ ಬದಿಗಳಲ್ಲಿ ತಾಜ್ಯ ಹಾಕುವ ಜಾಗಗಳನ್ನು ಗುರುತಿಸಿ ಅಲ್ಲಿನ ಕಸವನ್ನು ಸ್ವಚ್ಛ ಮಾಡಿ, ಸಾರ್ವಜನಿಕರು ಮತ್ತೆ ಕಸ ಸುರಿಯದಂತೆ ಜಾಗೃತಿ ಮೂಡಿಸಲು ಆ ಸ್ಥಳದಲ್ಲಿ ನಗರಸಭೆಯ ಪೌರಕಾರ್ಮಿಕರಿಂದಲೇ ರಂಗೋಲಿ ಹಾಕಿಸಿ ರಸ್ತೆಯನ್ನು ಸುಂದರಗೊಳಿಸಿ ಗಮನ ಸೆಳೆಯಲಾಗುತ್ತಿದೆ.

ತಾಜ್ಯ ನಿರ್ವಹಣೆ ನೀಗಿಸಲು ರಂಗೊಲಿ ಒಂದು ಹೊಸ ಅಸ್ತ್ರವಾಗಿದೆ. ಕಸದ ರಾಶಿಯನ್ನು ಪೌರ ಕಾರ್ಮಿಕರು ಎಷ್ಟೇ ಬಾರಿ ತೆರವು ಮಾಡಿದರೂ ಜನ ಮತ್ತೆ ಅಲ್ಲಿ ಕಸ ಹಾಕುತ್ತಾರೆ. ಆದರೆ, ಅದೇ ಜಾಗದಲ್ಲಿ ರಂಗೋಲಿ ಇದ್ದರೆ, ದೈವಿಕ ಭಾವನೆಯಿಂದಾದರೂ ಕಸ ಹಾಕಲು ಯಾರಿಗೂ ಮನಸ್ಸು ಬರುವುದಿಲ್ಲ. ಈ ಪ್ರಯತ್ನ ಕೆಲವು ದಿನ ಮುಂದುವರೆದರೆ ರಸ್ತೆ ಬದಿಗಳಲ್ಲಿ ಕಸದ ರಾಶಿ ಉಂಟಾಗುವುದು ತಪ್ಪಬಹುದು ಎಂಬುದು ನಗರಸಭೆ ಉದ್ದೇಶ.
ಬಿ. ಬಸಪ್ಪ,
ನಗರಸಭೆ ಆಯುಕ್ತ, ಬೀದರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.