ಆರೋಗ್ಯ ಕಾರ್ಯಕ್ರಮ ಜನಜಾಗೃತಿ ವಸ್ತು ಪ್ರದರ್ಶನ
Team Udayavani, Sep 4, 2019, 11:40 AM IST
ಬೀದರ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು, ಕುಡಿಯುವ ನೀರು, ನೈರ್ಮಲ್ಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜನಜಾಗೃತಿ ವಸ್ತು ಪ್ರದರ್ಶನ ನಡೆಯಿತು.
ಬೀದರ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು, ಕುಡಿಯುವ ನೀರು, ನೈರ್ಮಲ್ಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜನಜಾಗೃತಿ ವಸ್ತು ಪ್ರದರ್ಶನ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಎಂ.ಎ.ಜಬ್ಟಾರ ಜನಜಾಗೃತಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಳೆಗಾಲದಲ್ಲಿ ಸಹಜವಾಗಿ ಕೆಲವು ಖಾಯಿಲೆಗಳು ಬರುತ್ತವೆ. ಆದ್ದರಿಂದ ಡೆಂಘೀ, ಚಿಕೂನ್ ಗುನ್ಯದಂತಹ ಖಾಯಿಲೆಗಳು ಬಾರದಂತೆ ಜನರು ಜಾಗೃತಿ ವಹಿಸಬೇಕು. ಈ ಜನಜಾಗೃತಿ ವಸ್ತು ಪ್ರದರ್ಶನ ಮಳಿಗೆಯಲ್ಲಿ ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ಹೆಚ್ಚು ರೀತಿಯಲ್ಲಿ ಮಾಹಿತಿ ಲಭ್ಯವಿದೆ. ಈ ಮಳಿಗೆಗೆ ಜನರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡಿ, ವಿವಿಧ ಆರೋಗ್ಯ ಯೋಜನೆ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಪ್ರಭಾರಿ ನಿಯಂತ್ರಣಾಧಿಕಾರಿ ಬಸವಂತಪ್ಪ, ಪ್ರಭಾರಿ ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಚಂದ್ರಶೇಖರ, ಆಪ್ತ ಸಹಾಯಕ ಪ್ರಭುಲಿಂಗ ಸ್ವಾಮಿ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಅನೀಲ ಚಿಂತಾಮಣಿ, ಡಾ| ರವೀಂದ್ರ ಸಿರಸಗೆ, ಡಾ| ರಾಜಶೇಖರ ಪಾಟೀಲ, ಡಾ| ಕೃಷ್ಣಾ ರೆಡ್ಡಿ, ಡಾ| ಶಿವಕುಮಾರ,ಡಾ| ಶಿವಶಂಕರ, ಡಾ| ಅಶೋಕ ಮೈಲಾರೆ, ಡಾ| ಶರಣಪ್ಪ ಮುಡಬಿ, ಡಾ| ಅನಿಲ ಚತುರೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುದಾಳೆ, ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ವಿಜಯಕೃಷ್ಣ ಸೊಲಪುರ, ತನ್ವೀರ್ ಇಖ್ಬಾಲ್, ನರೇಶಕುಮಾರ, ಬಿಂದುಸಾರ ಸೇರಿದಂತೆ ಇತರರು ಇದ್ದರು.