ಬಿಎಸ್‌ಎಸ್‌ಕೆ ಶಾಶ್ವತ ಬಂದ್‌?

50 ಕೋಟಿ ಕೊಡುವುದಾಗಿ ಹೇಳಿದ್ದ ಬಿಎಸ್‌ವೈಸಾಲ ಕೊಟ್ಟರೂ ಉದ್ಧಾರ ಆಗಲ್ಲ ಎಂದ್ರು ಸಚಿವ ರವಿ

Team Udayavani, Nov 17, 2019, 11:30 AM IST

17-November-4

ಶಶಿಕಾಂತ ಬಂಬುಳಗೆ
ಬೀದರ:
ಕಬ್ಬು ಕೃಷಿಂಗ್‌ ನಿಲ್ಲಿಸಿರುವ ಬೀದರ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಈಗ ಶಾಶ್ವತವಾಗಿ ಬಾಗಿಲು ಮುಚ್ಚಿಕೊಳ್ಳುವ ಸ್ಥಿತಿಗೆ ತಲುಪಿದೆ. ಆರ್ಥಿಕ ಸಂಕಷ್ಟದಲ್ಲಿರುವ ಬಿಎಸ್‌ಎಸ್‌ಕೆಗೆ ಹಣದ ನೆರವು ನೀಡುವುದು ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತೆ ಎಂದು ಸಕ್ಕರೆ ಸಚಿವ ಸಿ.ಟಿ. ರವಿ ಹೇಳಿರುವುದು ಕಾರ್ಖಾನೆ ಪುನಶ್ಚೇತನ ವಿಷಯದಲ್ಲಿ ಸರ್ಕಾರ ಕೈ ಚೆಲ್ಲುವುದು ಸ್ಪಷ್ಟವಾದಂತಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರ ಅಧಿ ಕಾರಕ್ಕೆ ಬಂದರೆ ಬಿಎಸ್‌ ಎಸ್‌ಕೆ ಕಾರ್ಖಾನೆಗೆ ವಿಶೇಷ ಪ್ಯಾಕೇಜ್‌ ಕಲ್ಪಿಸಿ ಪುನಶ್ಚೇತನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಆದಿಯಾಗಿ ಪಕ್ಷದ ನಾಯಕರು ವಾಗ್ಧಾನ ಮಾಡಿದ್ದರು. ಆದರೆ, ಈಗ ಅಧಿಕಾರಕ್ಕೆ ಬಂದ ಮೇಲೆ ಬಾಯಿಗೆ ಬೀಗ ಹಾಕಿಕೊಂಡಿದ್ದು, ಕಾರ್ಖಾನೆಗೆ ಆರ್ಥಿಕ ನೆರವು ನೀಡುವುದು ವ್ಯರ್ಥ ಎಂಬಂಥ ನಿಲವು ಹೊಂದಿದೆ. ಇದು ಜಿಲ್ಲೆಯ ಕಬ್ಬು ಬೆಳೆಗಾರರಲ್ಲಿ ಆತಂಕ ಹೆಚ್ಚಿಸಿದೆ.

ಆರು ದಶಕಗಳ ಹಿಂದೆ ಸ್ಥಾಪನೆಗೊಂಡು ರಾಜ್ಯದಲ್ಲೇ ಹಳೆಯ ಮತ್ತು ಅತ್ಯುತ್ತಮ ಕಾರ್ಖಾನೆ ಎಂದೆನಿಸಿಕೊಂಡಿದ್ದ ಬಿಎಸ್‌ಎಸ್‌ಕೆ ಈಗ ಸಾಲದ ಸುಳಿಗೆ ಸಿಲುಕಿದೆ. ಕಳೆದ ವರ್ಷ ಸಮ್ಮಿಶ್ರ ಸರ್ಕಾರ ಕಾರ್ಖಾನೆಗೆ 20 ಕೋಟಿ ರೂ. ಒದಗಿಸಿದ್ದರಿಂದ ಕೃಷಿಂಗ್‌ ನಡೆಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಕೃಷಿಂಗ್‌ ಸಹ ನಿಂತಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಇದರ ಗಂಭೀರತೆಯನ್ನು ಅರಿತು ಸರ್ಕಾರದ ಗಮನ ಸೆಳೆಯಬಹುದು, ತಡವಾಗಿಯಾದರೂ ಕೃಷಿಂಗ್‌ ಆರಂಭ ಆಗಬಹುದೆಂದು ರೈತರು ನಿರೀಕ್ಷೆ ಹೊಂದಿದ್ದರು. ಆದರೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ವೇಳೆ ಸಕ್ಕರೆ ಸಚಿವ ಸಿ.ಟಿ. ರವಿ ಅವರು ಬಿಎಸ್‌ಎಸ್‌ಕೆಗೆ ಹಣಕಾಸಿನ ನೆರವು ನೀಡಿದರೂ ಪುನಶ್ವೇಚನ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿರುವುದು ಕಾರ್ಖಾನೆಗೆ ಸರ್ಕಾರದಿಂದ ಹಣಕಾಸಿನ ಸಹಾಯ ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಇದು ಕಾರ್ಖಾನೆ ವಿಷಯದಲ್ಲಿ ಜಿಲ್ಲೆಯ ಬಿಜೆಪಿ ನಾಯಕರ ಬದ್ಧತೆಯನ್ನು ತೋರಿಸಿಕೊಟ್ಟಿದೆ.

ಬಿಎಸ್‌ಎಸ್‌ಕೆ ಮೇಲೆ ಸುಮಾರು 307 ಕೋಟಿ ರೂ. ಸಾಲ ಇದೆ. ಕಾರ್ಖಾನೆಯ ಆಸ್ತಿಗಿಂತಲೂ ಸಾಲವೇ ಹೆಚ್ಚಿದೆ. ಆಧುನಿಕರಣ ಆಗದಿರುವುದು, ಭ್ರಷ್ಟಾಚಾರ ಈ ದುಸ್ಥಿತಿಗೆ ಕಾರಣ. ಹಿಂದಿನ ಸಮ್ಮಿಶ್ರ ಸರ್ಕಾರ ಪುನಶ್ಚೇತನಕ್ಕಾಗಿ ನೀಡಿರುವ 20 ಕೋಟಿ ರೂ. ಅನುದಾನದಿಂದ ಯಾವುದೇ ಲಾಭ ಆಗಲಿಲ್ಲ. ಇದು ರಾಜ್ಯದ ತೆರಿಗೆ ಹಣ, ಇದಕ್ಕೆ ಯಾರು ಜವಾಬ್ದಾರರು? ಸಾಲ ಕೊಟ್ಟರೂ ಸಹ ಯಾವುದೇ ಉದ್ಧಾರ ಆಗುವ ಲಕ್ಷಣಗಳಿಲ್ಲ.

ನಾನು ಉದ್ಧಾರ ಮಾಡುತ್ತೇನೆ ಎಂದು ಅಗತ್ಯ ಪ್ರಸ್ತಾವನೆ ಬಂದರೆ ಸರ್ಕಾರ ಅವರಿಗೆ ನೆರವು ಕೊಡುತ್ತದೆ ಎಂದು ಹೇಳುವ ಮೂಲಕ ಸಚಿವ ರವಿ ಬಿಎಸ್‌ಎಸ್‌ಕೆ ವಿಷಯದಲ್ಲಿ ಕೈ ಚಲ್ಲಿದ್ದಾರೆ. ಕಾರ್ಖಾನೆಯ ಕಾರ್ಮಿಕರು ಕಳೆದೆರಡು ವರ್ಷಗಳಿಂದ ವೇತನ ಇಲ್ಲದೇ ಪರದಾಡುತ್ತಿದ್ದಾರೆ. ಮತ್ತೂಂದೆಡೆ ಬಿಎಸ್‌ ಎಸ್‌ಕೆಯ ಆರ್ಥಿಕ ಸ್ಥಿತಿಯಿಂದಾಗಿ ಸಾಲ ನೀಡಿರುವ ಡಿಸಿಸಿ ಬ್ಯಾಂಕ್‌, ಅಪೆಕ್ಸ್‌ ಬ್ಯಾಂಕ್‌ಗೂ ಸಹ ಅಸಲು- ಬಡ್ಡಿ ಹೇಗೆ ಬರುತ್ತದೆ ಎಂಬ ಭಯ ಕಾಡುತ್ತಿದೆ. ಈಗ ಸರ್ಕಾರದಿಂದ ವಿಶೇಷ ಪ್ಯಾಕೇಜ್‌ನ ನೆರವು ಸಿಗುವುದು ಅನುಮಾನ ಮೂಡಿಸಿರುವುದು ಕಾರ್ಮಿಕರು ಮತ್ತು ಬ್ಯಾಂಕ್‌ಗಳ ಸಂಕಷ್ಟ ದುಪ್ಪಟ್ಟುಗೊಳಿಸಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.