ನಿರೀಕ್ಷಿತ ಗುಂಪು ಬೇಸಾಯ ಯೋಜನೆಗೆ ಸಿಗುತ್ತಾ ಆದ್ಯತೆ?


Team Udayavani, Jun 27, 2019, 10:28 AM IST

Udayavani Kannada Newspaper

ದುರ್ಯೋಧನ ಹೂಗಾರ
ಬೀದರ:
ರೈತರ ಸಾಲಮನ್ನಾ ಯೋಜನೆಗೆ ಪ್ರೇರಣೆ ನೀಡಿದ ಬೀದರ ಜಿಲ್ಲೆಗೆ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಹು ನಿರೀಕ್ಷಿತ ರೈತರ ಗುಂಪು ಬೇಸಾಯ ಯೋಜನೆ ಕುರಿತು ರೈತರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ರೈತರ ಗುಂಪು ಬೇಸಾಯ ಯೋಜನೆ ಅನುಷ್ಠಾನ ಮಾಡುವುದಾಗಿ ಕಳೆದ ನವೆಂಬರ್‌ನಲ್ಲಿ ನಗರದಲ್ಲಿ ನಡೆದ ರೈತ ಸ್ಪಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಇದೀಗ ಗ್ರಾಮೀಣ ಪ್ರದೇಶಗಳ ಕಡೆಗೆ ಮುಖ ಮಾಡಿರುವ ಮುಖ್ಯಮಂತ್ರಿಗಳು ರೈತರ ಗುಂಪು ಬೇಸಾಯಕ್ಕೆ ಮಹತ್ವ ನೀಡಿ ರೈತರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ 75 ಲಕ್ಷ ರೈತರ ಸರಿ ಸುಮಾರು 10 ಲಕ್ಷ ಗುಂಪು ರಚನೆ ಮಾಡುವ ಗುರಿ ಇದ್ದು, ಆ ಎಲ್ಲ ಗುಂಪುಗಳ ಸದಸ್ಯರಿಗೆ ಸರ್ಕಾರದಿಂದ‌ ವಿವಿಧ ಸೌಲಭ್ಯ ನೀಡುವುದಾಗಿ ಅಂದು ಸಿಎಂ ಭರವಸೆ ನೀಡಿದ್ದರು.

ಆಯಾ ಗ್ರಾಮಗಳಲ್ಲಿ ಅಲ್ಲಿನ ರೈತರು ಸಭೆ ನಡೆಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ರೈತರು ಕೆಲಸ ಮಾಡಬೇಕು. ಬೆಳೆ ಸಾಲಕ್ಕಾಗಿ ಬ್ಯಾಂಕ್‌ಗೆ ಹೊಗುವುದು ಬೇಡ. ಸರ್ಕಾರವೇ ಹಣ ನೀಡುತ್ತದೆ. ಸ್ವ ಸಹಾಯ ಸಂಘಗಳಂತೆ ರೈತರ ಗುಂಪುಗಳಿಗೆ ಸರ್ಕಾರವೇ ಹಣ ಒದಗಿಸುವ ಯೋಜನೆ ಇದೆ. ಆದರೆ, ರೈತರು ಸಂಘಟಿತರಾಗ¸ಬೇಕು. ಹಳೇ ಪದ್ಧತಿಯಾದ ಗುಂಪು ಕೃಷಿ ಮುಂದಿನ ದಿನಗಳಲ್ಲಿ ಜಾರಿಯಾಗಬೇಕಾಗಿದೆ ಎಂದು ಅಂದು ಮುಖ್ಯಮಂತ್ರಿಗಳು ರೈತರಿಗೆ ಮನವರಿಕೆ ಮಾಡಿದ್ದರು. ಇದೀಗ ಗ್ರಾಮೀಣ ಪ್ರದೇಶದಲ್ಲಿ ವಾಸ್ತವ್ಯ ನಡೆಸುತ್ತಿರುವ ಮುಖ್ಯಮಂತ್ರಿಗಳು ರೈತರ ಹಿತ ದೃಷ್ಟಿಯಿಂದ ಹೊಸ ಯೋಜನೆಗೆ ಬುನಾದಿ ಹಾಕುವ ಸಾಧ್ಯತೆ ಇದೆ.

ಈಡೇರದ ಸಿಎಂ ಭರವಸೆಗಳು: ಕಳೆದ ವರ್ಷ ನವೆಂಬರ್‌ಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಏರ್ಪಡಿಸಲಾಗಿದ್ದ ರೈತ ಸ್ಪಂದನ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜಿಲ್ಲೆಗ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೀಡಿದ ಭರವಸೆಗಳು ಇಂದಿಗೂ ಈಡೇರಿಲ್ಲ. ಕಳೆದ ವರ್ಷ ನವೆಂಬರ್‌ 15ರಂದು ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ನಡೆದ ರೈತ ಸ್ಪಂದನಾ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರೈತ ಅನೀಲಕುಮಾರ, ಬಸವಕಲ್ಯಾಣ ತಾಲೂಕಿನಲ್ಲಿ ಸೋಯಾ ಬೆಳೆ ಹೆಚ್ಚಿಗೆ ಬೆಳೆಯಲಾಗುತ್ತಿದೆ. ಬಸವಕಲ್ಯಾಣದಲ್ಲಿ ಸೋಯಾ ಬೆಳೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದರು. ಈ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಕುರಿತು ಅಧಿಕಾರಿಗಳು ಪರಿಶೀಲಿಸಿ ಮಾಹಿತಿ ಪಡೆದುಕೊಂಡು ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಬಸವಕಲ್ಯಾಣ ತಾಲೂಕಿನಲ್ಲಿ ಸೋಯಾ ಬೆಳೆ ಸಂಶೋಧನಾ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಈ ವರೆಗೆ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರಂಭವಾಗಿಲ್ಲ ಕೃಷಿ ಕಾಲೇಜು: ರೈತ ಸಂವಾದ ಕಾರ್ಯಕ್ರಮದಲ್ಲಿ ಪ್ರಗತಿ ಪರ ರೈತ ಕಾಶಿಲಿಂಗ ಅಗ್ರಹಾರ ಮಾತನಾಡಿ, ಜಿಲ್ಲೆಯಲ್ಲಿ ಒಣ ಬೇಸಾಯ ಮಾಡುವ ರೈತರ ಸಂಖ್ಯೆ ಹೆಚ್ಚಿದೆ. ಕೃಷಿ ಕ್ಷೇತ್ರದ ಕುರಿತು ವಿದ್ಯಾಭ್ಯಾಸ ಮಾಡಲು ಬೀದರ ತಾಲೂಕಿನಲ್ಲಿ ಕೃಷಿ ಕಾಲೇಜು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗಳಗೆ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಕೃಷಿ ಕಾಲೇಜು ಸ್ಥಾಪನೆ ಕುರಿತು ಸರ್ಕಾರದ ಗಮನಕ್ಕೆ ಬಂದಿದೆ. ಮುಂದಿನ ವರ್ಷದಿಂದ ಕೃಷಿ ಕಾಲೇಜು ಪ್ರಾರಂಭಿಸುವ ಕುರಿತು ಭರವಸೆ ನೀಡಿದ್ದರು. ಆದರೆ, ಈ ವರೆಗೆ ಕೃಷಿ ಕಾಲೇಜು ಸ್ಥಾಪನೆ ಬಗ್ಗೆ ಯಾವ ಒಬ್ಬ ಅಧಿಕಾರಿಗಳು ಮಾತನಾಡುತ್ತಿಲ್ಲ. ಎಲ್ಲಿ ಕಾಲೇಜು ಸ್ಥಾಪನೆ ಮಾಡುತ್ತಾರೆ. ಯಾವ ವರ್ಷದಿಂದ ಕಾಲೇಜು ಶುರುವಾಗುತ್ತೆ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.