ಜಿಲ್ಲೆಯ ನೀರಾವರಿಗೆ 800 ಕೋಟಿ ರೂ.

ಮುಂದಿನ 5-6 ತಿಂಗಳಲ್ಲಿ ಯೋಜನೆಗಳು ಕಾರ್ಯ ರೂಪಕ್ಕೆ: ಸಿಎಂ ಕುಮಾರಸ್ವಾಮಿ ವಿಶ್ವಾಸ

Team Udayavani, Jun 28, 2019, 12:07 PM IST

28-June-15

ಬಸವಕಲ್ಯಾಣ: ಉಜಳಂಬ ಗ್ರಾಮದಲ್ಲಿ ಗುರುವಾರ ನಡೆದ ಗ್ರಾಮ ವಾಸ್ತವ್ಯ ಹಾಗೂ ಜನಸ್ಪಂದನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಸಚಿವರಾದ ಬಂಡೆಪ್ಪ ಖಾಶೆಂಪುರ, ರಾಜಶೇಖರ ಪಾಟೀಲ, ರಹೀಂಖಾನ್‌ ಇದ್ದರು.

ಬೀದರ: ಜಿಲ್ಲೆಯ ನೀರಾವರಿ ಉದ್ದೇಶಕ್ಕಾಗಿ 800 ಕೊಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಸವಕಲ್ಯಾಣ ತಾಲೂಕು ಉಜಳಂಬ ಗ್ರಾಮದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಣ್ಣ ನೀರಾವರಿ ಹಾಗೂ ಜಲಸಂಪನ್ಮೂಲ ಇಲಾಖೆ ಯೋಜನೆ ಗಳಿಗಾಗಿ 800 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ 5-6 ತಿಂಗಳಲ್ಲಿ ಈ ಯೋಜನೆಗಳು ಕಾರ್ಯ ರೂಪಕ್ಕೆ ಬರಲಿವೆ. ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕು ಗಳಿಗೆ 75 ಕೋಟಿ ರೂ. ವೆಚ್ದದಲ್ಲಿ ಮಾಂಜ್ರಾ ನದಿಗೆ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಈ ಪ್ರದೇಶದ ರೈತರಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಲೋಕೋಪಯೋಗಿ ಇಲಾಖೆಯಿಂದ ವಿವಿಧ ಕಾಮಗಾರಿಗಳಗಾಗಿ 317 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಹಕಾರ ಇಲಾಖೆಯಿಂದ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅವಧಿ ಹಾಗೂ ಮೈತ್ರಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಅನುಷ್ಠಾನವಾದ ಸಾಲಮನ್ನಾ ಯೋಜನೆಯಿಂದ ಬೀದರ್‌ ಜಿಲ್ಲೆಯ ರೈತರಿಗೆ 1045 ಕೋಟಿ ಸಾಲಮನ್ನಾ ಆಗಿದೆ. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆದ 11,756 ರೈತರ 43 ಕೋಟಿ ರೂ. ಮನ್ನಾ ಮಾಡಲಾಗಿದೆ ಎಂದು ಹೇಳಿದರು. ಹೈದ್ರಾಬಾದ ಕಾರ್ನಾಟಕ ಭಾಗದ ಆರೋಗ್ಯ ಹಾಗೂ ಶೈಕ್ಷಣಿಕ ಅಭಿವೃದ್ಧಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ 8 ದಿನಗಳಲ್ಲಿ ವಿಶೇಷ ಸಭೆ ನಡೆಸಿ, ಈ ಭಾಗದ ಪ್ರತಿಯೊಂದು ಗ್ರಾಮಗಳಲ್ಲಿನ ಶಾಲೆಗಳ ಸ್ಥಿತಿಗತಿ, ದುರಸ್ತಿ, ಶಿಕ್ಷಕರ ಕೊರತೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಬೀದರ್‌ ನಗರದ ಬ್ರಿಮ್ಸ್‌ ಬೋಧಕ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆಯಾಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಈ ಕುರಿತು ಈಗಾಗಲೇ ಆರೋಗ್ಯ ಖಾತೆ ಸಚಿವ ಶಿವಾನಂದ ಪಾಟೀಲ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಇ.ತುಕಾರಾಮ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಸ್ಪತ್ರೆಯಲ್ಲಿನ ಲೋಪಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲ್ಲಿದೆ ಎಂದು ಹೇಳಿದರು.

ಬರದಿಂದ ತತ್ತರಿಸುತ್ತಿರುವ ಗಡಿ ಭಾಗದ ರೈತರು ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಸರ್ಕಾರ ನೀಡುವ ಸೌಲಭ್ಯ ಪಡೆದುಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕು. ಇಸ್ರೇಲ್ ಮಾದರಿ ಕೃಷಿ ಹಾಗೂ ನೆರೆ ರಾಜ್ಯ ಮಹಾರಾಷ್ಟ್ರದ ಕಡಗಂಚಿ ಗ್ರಾಮದಲ್ಲಿನ ಕೃಷಿ ಯೋಜನೆ ನೋಡಿಕೊಂಡು ಪ್ರಗತಿ ಹೊಂದಬೇಕು. ಕೃಷಿ ಸಾಲಕ್ಕಾಗಿ ಬ್ಯಾಂಕ್‌ಗಳ ಕಡೆಗೆ ಹೋಗಬಾರದು. ಸರ್ಕಾರವೇ ಎಲ್ಲ ರೀತಿಯ ಸಹಕಾರ ನೀಡಲು ಮುಂದಾಗಿದೆ. ಸಹಾಯ ಧನ ಪಡೆದುಕೊಂಡು ರೈತರು ಆಧುನಿಕ ಕೃಷಿಗೆ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದ ರೈತರಿಗೆ ಋಣಮುಕ್ತ ಪತ್ರ ನೀಡಲಾಯಿತು.

ಸಹಕಾರ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ, ಕ್ರೀಡಾ ಖಾತೆ ಸಚಿವ ರಹೀಂಖಾನ್‌, ಅರಣ್ಯ ನಿಗಮ ಅಧ್ಯಕ್ಷ ಹಾಗೂ ಶಾಸಕ ಬಿ.ನಾರಾಯಣರಾವ, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ವಿಧಾನ ಪರಿಷತ್‌ ಸದಸ್ಯರಾದ ಡಾ| ಚಂದ್ರಶೇಖರ ಪಾಟೀಲ, ವಿಜಯಸಿಂಗ್‌, ಜಿಲ್ಲಾಧಿಕಾರಿ ಎಚ್.ಆರ್‌. ಮಹಾದೇವ, ಜಿಪಂ ಸಿಇಒ ಮಹಾಂತೇಶ ಬೀಳಗಿ ಇದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.