ಸಂಸತ್ನಲ್ಲಿ ಬಸವಣ್ಣನ ಸ್ಮರಣೆಗೆ ಹರ್ಷ
ಬಸವಣ್ಣನ ಸಾಹಿತ್ಯ ವಿಶ್ವದೆಲ್ಲೆಡೆ ಪ್ರಚುರಪಡಿಸಲಿ •ಕೇಂದ್ರ ಬಜೆಟ್ಗೆ ಗಣ್ಯರ ಪ್ರತಿಕ್ರಿಯೆ
Team Udayavani, Jul 6, 2019, 10:17 AM IST
ಬೀದರ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಶುಕ್ರವಾರ ಮಂಡಿಸಿದ ಬಜೆಟ್ನಲ್ಲಿ ಕಲ್ಯಾಣ ನಾಡಿನ ಅಣ್ಣ ಬಸವಣ್ಣನವರ ಹೆಸರು ಪ್ರಸ್ತಾಪಿಸಿ ಮಾತನಾಡಿರುವುದು ಗಡಿ ಜಿಲ್ಲೆಯ ಬಸವ ಭಕ್ತರಲ್ಲಿ ಸಂತಸ ಮೂಡಿಸಿದೆ.
ಕೌಶಲ್ಯಾಭಿವೃದ್ಧಿ ಯೋಜನೆಯ ವಿವರ ನೀಡುವ ಸಂದರ್ಭದಲ್ಲಿ ಸಚಿವೆ ನಿರ್ಮಲಾ ಸಿತಾರಾಮನ್ ಮಹಾತ್ಮ ಬಸವೇಶ್ವರರ ಆಶಯದಂತೆ ಕೇಂದ್ರ ಸರ್ಕಾರ ಕೆಲಸ ನಿರ್ವಹಿಸುತ್ತಿದೆ ಎಂದು, ‘ಕಾಯಕವೇ ಕೈಲಾಸ’ ಎಂಬ ಸಂದೇಶ ಪ್ರತಿಪಾದಿಸಿ ಮಾತನಾಡಿರುವುದು ಭಸವ ಭಕ್ತರಲ್ಲಿ ಹರ್ಷ ಮೂಡಿಸಿದೆ. ಬಸವಣ್ಣನವರ ಹೆಸರು, ಅವರ ಸಾಹಿತ್ಯ ವಿಶ್ವದ ಎಲ್ಲ ಕಡೆಗಳಲ್ಲಿ ಪಸರಿಸುವಂತೆ ಕೇಂದ್ರ ಸರ್ಕಾರ ಮಾಡಬೇಕು ಎಂಬ ಆಸೆ ಈ ಭಾಗದ ಜನರದಾಗಿದೆ.
ಮಹಿಳೆಯರ ಸ್ವಸಹಾಯ ಸಂಘಗಳಿಗೆ ವಿಶೇಷ ಧನಸಹಾಯ, ಜನಧನ ಖಾತೆದಾರರಿಗೆ ಸೌಲಭ್ಯ ಕಲ್ಪಿಸುವುದರ ಮೂಲಕ ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಿರುವುದು ಮಹಿಳೆಯರಲ್ಲಿ ಹೊಸ ಕನಸು ಹುಟ್ಟುವಂತೆ ಮಾಡಿದೆ. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ನಿಟ್ಟಿನ ಮೊದಲ ಹೆಜ್ಜೆಯಾಗಿ ಮುಂಗಾರು ಹಂಗಾಮಿನ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡುವ ಭರವಸೆ ರೈತರಲ್ಲಿ ಹೊಸ ಸಂಚಲನ ಮೂಡಿಸುವಂತೆ ಮಾಡಿದೆ. ಅಲ್ಲದೆ, 60 ವಯಸ್ಸು ದಾಟಿದ ಪ್ರತಿಯೊಬ್ಬ ಕಾರ್ಮಿಕರಿಗೆ ಹಾಗೂ ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೆ ಕರ್ಮಯೋಗಿ ಮಾನ್ ಸಮ್ಮಾನ್ ಯೋಜನೆಯಡಿ ಮಾಸಿಕ 3,000 ರೂ. ಪಿಂಚಣಿ ಘೋಷಣೆ ಮಾಡಿರುವುದು ಮಹತ್ವ ನಿರ್ಧಾರ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ ದೇಶದಲ್ಲಿನ ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಹಾಕಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ಬಜೆಟ್ನಲ್ಲಿ ನಿರುದ್ಯೋಗಿ ಯುವಕರ ಬಗ್ಗೆ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕಿತ್ತು ಎಂದು ಯುವಕರು ಅಭಿಪ್ರಾಯ ವ್ಯಕ್ತಪಡಿಸಿದ್ದು, ದೇಶದ ಪ್ರತಿಯೊಂದು ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡುವ ಮೂಲಕ ಆಯಾ ಭಾಗದ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆ ನೀಡಬೇಕಿತ್ತು ಎಂಬ ಅಭಿಪ್ರಾಯಗಳು ಕೇಳಿ ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ