ಸಂವಿಧಾನ ಜಾಗೃತಿಗಾಗಿ ಸೈಕಲ್‌ ಯಾತ್ರೆ


Team Udayavani, Dec 11, 2019, 5:47 PM IST

11-December-25

ಬೀದರ: ಜನಸಾಮಾನ್ಯರಲ್ಲಿ ಭಾರತದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು ಇಬ್ಬರು ಮಹಿಳೆಯರು ರಾಜಧಾನಿ ಬೆಂಗಳೂರಿನಿಂದ ಹಮ್ಮಿಕೊಂಡಿದ್ದ ಸೈಕಲ್‌ ಯಾತ್ರೆಯು ಮಂಗಳವಾರ ಗಡಿ ಜಿಲ್ಲೆ ಬೀದರಗೆ ಆಗಮಿಸಿ ಕೊನೆಗೊಂಡಿತು.

ಬೆಂಗಳೂರಿನ ಕವಿತಾ ರೆಡ್ಡಿ ಹಾಗೂ ಮಹಾರಾಷ್ಟ್ರದ ಜಿಗ್ನಾಮೂಡ ಅವರೇ ಸೈಕಲ್‌ ಯಾತ್ರೆ ಮೂಲಕ ಸಂವಿಧಾನದ ಜಾಗೃತಿ ಮೂಡಿಸುತ್ತಿರುವ ಸಾಹಸಿಗರು. ನ. 26ರಂದು ಬೆಂಗಳೂರಿನಿಂದ ಸೈಕಲ್‌ ರ್ಯಾಲಿ ಆರಂಭಿಸಿ, ಕರ್ನಾಟಕದ 10 ಜಿಲ್ಲೆಗಳಲ್ಲಿ 817 ಕಿ.ಮೀ. ಸಂಚರಿಸಿದ್ದಾರೆ.

ಸಂವಿಧಾನ ಅಂಗೀಕಾರದ 70ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಯಾತ್ರೆ ಕೈಗೊಂಡಿದ್ದರು. ನಿತ್ಯ 40 ರಿಂದ 70 ಕಿ.ಮೀ. ಕ್ರಮಿಸಿ 6ರಿಂದ 8 ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಮಾಹಿತಿ ನೀಡಿದ್ದಾರೆ. ನ್ಯಾ| ನಾಗಮೋಹನದಾಸ್‌ ಅವರು ಬರೆದ ಸಂವಿಧಾನ ಓದು ಪುಸ್ತಕಗಳನ್ನು ಸಹ ವಿತರಣೆ ಮಾಡಿದ್ದಾರೆ.

ಯಾತ್ರೆಯ ಸಮಾರೋಪ ವೇಳೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕವಿತಾ ರೆಡ್ಡಿ, ಸಂವಿಧಾನಕ್ಕೆ ಧಕ್ಕೆ ಬಂದರೆ ಪ್ರಜಾಪ್ರಭುತ್ವ ನಾಶವಾಗುತ್ತದೆ. ಅಂಬೇಡ್ಕರ ಅವರು ನೀಡಿರುವ ಹಕ್ಕನ್ನು ಸಂರಕ್ಷಿಸಬೇಕಾಗಿದೆ. ಮಹಿಳೆಯರು ತಮ್ಮ ಸುರಕ್ಷತೆ ಕಾಪಾಡಿಕೊಳ್ಳುವ ಶಕ್ತಿ ನಮ್ಮಲ್ಲಿದೆ ಎಂಬುದನ್ನು ತೋರಿಸುವ ಉದ್ದೇಶದಿಂದಲೂ ನಾವು ಸೈಕಲ್‌ ತುಳಿದು ಸಂಚರಿಸಿದ್ದೇವೆ ಎಂದು ಹೇಳಿದರು.

ಬೆಂಗಳೂರಿನಿಂದ ದಾಸಕೊಪ್ಪರ, ಸಿದ್ದಗಂಗಾ, ಶಿರಾ, ಹಿರಿಯೂರು, ಚಳ್ಳಕೇರೆ, ಸಿರಗುಪ್ಪ, ಪೋತನಾಳ, ಮಾನ್ವಿ, ದೇವದುರ್ಗ, ಸೇಡಂ, ಚಿಂಚೋಳಿ ಮೂಲಕ ಬೀದರ್‌ಗೆ ತಲುಪಿದ್ದೇವೆ. ಬೆಂಗಳೂರಿನಲ್ಲಿ ಎನ್‌ಜಿಒ ನಡೆಸುತ್ತಿರುವ ನಾವು ಸುಮಾರು 14 ದಿನಗಳ ಸೈಕಲ್‌ ಯಾತ್ರೆ ಸಂದರ್ಭದಲ್ಲಿ ಪ್ರವಾಸಿ ಮಂದಿರಗಳಲ್ಲಿ, ಸ್ನೇಹಿತರ ಮನೆಗಳಲ್ಲಿ ವಾಸ ಮಾಡಿದ್ದೇವೆ ಎಂದರು.

ಸಾಹಸಿಗರಿಗೆ ಸನ್ಮಾನಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಇಬ್ಬರು ಸಾಹಸಿ ಮಹಿಳೆಯರು ರಾಜ್ಯಾದ್ಯಂತ ಸೈಕಲ್‌ ಮೇಲೆ 800ಕ್ಕೂ ಹೆಚ್ಚು ಕಿ.ಮೀ. ಕ್ರಮಿಸಿ ಸಂವಿಧಾನದ ಬಗ್ಗೆ ಜನಜಾಗೃತಿ ಮೂಡಿಸಿದ್ದು ದೊಡ್ಡ ಸಾಧನೆ. ಶಾಲೆ ಮಕ್ಕಳಿಗೆ ಸಂವಿಧಾನ ಕುರಿತು ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ. ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.