ಹಾಸ್ಟೇಲ್‌ ಅವ್ಯವಸ್ಥೆಗೆ ಸಚಿವರ ಅಸಮಾಧಾನ

ನೌಬಾದ್‌ನ ಪದವಿ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಭೇಟಿಸಂಬಂಧಿಸಿದ ಅಧಿಕಾರಿಗಳು-ಸಿಬ್ಬಂದಿಗೆ ತರಾಟೆ

Team Udayavani, Jan 1, 2020, 1:45 PM IST

1–January-13

ಬೀದರ: ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು “ಛೀ ಛೀ ಇಂತಹ ವಾತಾವರಣದಲ್ಲಿ ಮಕ್ಕಳು ಹೇಗೆ ಕಲಿಯಬೇಕು? ಎಂದು ಸಚಿವ ಪ್ರಭು ಚವ್ಹಾಣ ಅವರು ಬೇಸರ ವ್ಯಕ್ತಪಡಿಸಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.

ನಗರದಲ್ಲಿ ದೀಢೀರ್‌ ಭೇಟಿ ಕಾರ್ಯಕ್ರಮ ವೇಳೆ ನೌಬಾದ್‌ನ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುವ ಪದವಿ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಭೇಟಿ ನೀಡಿದರು. ಆ ವಸತಿ ನಿಲಯದ ಹೊರಾಂಗಣದಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದನ್ನು ಮತ್ತು ಕೊಳಚೆ ನೀರು ಹಾಸ್ಟೇಲ್‌ ಆವರಣ ಸೇರುತ್ತಿರುವುದನ್ನು ಕಂಡು ಸಚಿವರು ರೋಷಗೊಂಡರು. “ಛೀ ಛೀ ಇಂತಹ ವಾತಾವರಣದಲ್ಲಿ ವಿದ್ಯಾರ್ಥಿಗಳು ಹೇಗಿರಬೇಕೆಂದು’ ಬೇಸರ ವ್ಯಕ್ತಪಡಿಸಿದರು.

ಸ್ಥಳಕ್ಕೆ ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗವಾರ ಅವರನ್ನು ಕರೆಯಿಸಿ, ಖುದ್ದು ತಾವೇ ಅಲ್ಲಿದ್ದ ಗಲೀಜನ್ನು ಸಿಇಒ ಅವರಿಗೆ ತೋರಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ದೂರವಾಣಿಯೊಂದಿಗೆ ಮಾತನಾಡಿ, ಈ ಅವ್ಯವಸ್ಥೆ ತಮ್ಮ ಗಮನಕ್ಕೆ ಇಲ್ಲವೇ? ಎಂದು ಕೇಳಿದರು. ಅಧಿಕಾರ ಸ್ವೀಕರಿಸಿ ವಾರವಷ್ಟೇ ಆಗಿದೆ. ಈ ಬಗ್ಗೆ ಪರಿಶೀಲಿಸುವೆ ಎಂದು ಅಧಿಕಾರಿ ಪ್ರತಿಕ್ರಿಯಿಸಿದರು.

ತಾಲೂಕಾ ಧಿಕಾರಿಗೆ ಎಚ್ಚರಿಕೆ: ಈ ವೇಳೆ ಸ್ಥಳಕ್ಕಾಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಅನೀಲಕುಮಾರ ಅವರಿಗೆ ಅಲ್ಲಿನ ಗಟಾರು ನೀರನ್ನು ತೋರಿಸಿದ ಸಚಿವರು, ತಾವು ಏನು ಮಾಡುತ್ತೀರಿ?, ವಸತಿ ನಿಲಯಗಳಿಗೆ ಯಾವಾಗ ಭೇಟಿ ನೀಡಿದ್ದೀರಿ? ಎಂದು ಕೇಳಿ, ಸರಿಯಾಗಿ ಕೆಲಸ ಮಾಡುವಂತೆ ಅವರಿಗೆ ಎಚ್ಚರಿಕೆ ನೀಡಿದರು. ಸುತ್ತಲಿನ ಕೊಳಚೆಯನ್ನು ವಾರದೊಳಗೆ ತೆಗೆಯುವಂತೆ ಗಡುವು ವಿಧಿಸಿದರು.

ಹಾಸ್ಟೇಲ್‌ ಆವರಣವನ್ನು ಶುಚಿಯಾಗಿಡುವಂತೆ ತಿಳಿಸಿದರು. ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಬೀದರ ಟೌನ್‌ಗೆ ಭೇಟಿ ನೀಡಿದ ಸಚಿವರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಊಟ ಮಾಡುತ್ತಿದ್ದ ವಿದ್ಯಾರ್ಥಿಗಳ ಜೊತೆ ಕುಳಿತು ಅಡುಗೆಯನ್ನು ಪರೀಕ್ಷಿಸಿದರು. ಈ ಹಾಸ್ಟೇಲ್‌ ವಾರ್ಡನ್‌ ಅವರು ಒಂದು ವಾರ ಇಲ್ಲವೇ 15 ದಿನಕ್ಕೊಮ್ಮೆ ಹಾಸ್ಟೇಲ್‌ಗೆ ಬರುತ್ತಾರೆ. ಮೆನುವಿನಂತೆ ಊಟ ನೀಡುತ್ತಿಲ್ಲ. ಕಾಳು, ಮೊಟ್ಟೆ ಕೊಡುವುದಿಲ್ಲ ಎಂದು ಅಲ್ಲಿನ ವಿದ್ಯಾರ್ಥಿಗಳು ಸಚಿವರ ಎದುರು ದೂರಿದರು. 10 ತಿಂಗಳಾದರೂ ನಮಗೆ ವೇತನ ನೀಡಿಲ್ಲ ಎಂದು ಅಡುಗೆ ಸಿಬ್ಬಂದಿ ತಿಳಿಸಿದರು.

ಇದರಿಂದ ಸಿಡಿಮಿಡಿಗೊಂಡ ಸಚಿವರು, ಹಾಸ್ಟೆಲ್‌ ವಾರ್ಡನ್‌ ಅವರನ್ನು ಸ್ಥಳಕ್ಕೆ ಕರೆಯಿಸಿ, ಮಕ್ಕಳ ಹಾಜರಾತಿ ವಹಿ, ದಾಸ್ತಾನು ವಹಿ ಹಾಗೂ ಇನ್ನಿತರೆ ದಾಖಲಾತಿಗಳನ್ನು ಪರಿಶೀಲಿಸಿದರು. ಅವುಗಳ ನಿರ್ವಹಣೆ ಸಮರ್ಪಕವಾಗಿ ಇಲ್ಲದ್ದನ್ನು ಕಂಡು ವಾರ್ಡನ್‌ ಎಂ.ಡಿ. ಹಪೀಜ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳಿಗೆ ದಿನವಹಿ ಖರ್ಚು ಮಾಡಿದ ಬಿಲ್ಲುಗಳು, ವಸತಿ ನಿಲಯಗಳಿಗೆ ಸರಬರಾಜು ಆಗುವ ಆಹಾರ ಧಾನ್ಯಗಳಿಗೆ ಸಂಬಂಧಿಸಿದ ದಾಸ್ತಾನುವಹಿ ಅಸಮರ್ಪಕವಾಗಿರುವುದನ್ನು ಖುದ್ದು ಸಚಿವರು, ಸಿಇಒ ಅವರಿಗೆ ತೋರಿಸಿದರು.

ಸಿಇಒ ಎಚ್ಚರಿಕೆ: ತಾಲೂಕು ಅಧಿ ಕಾರಿಯಾಗಿ ನಿಮ್ಮ ಕೆಲಸವೇನು?, ನೀವು ಕಾಲಕಾಲಕ್ಕೆ ವಸತಿ ನಿಲಯಕ್ಕೆ ಭೇಟಿ ನೀಡಿದ್ದೀರಾ?, ಎಂದು ಸಿಇಒ ಗಂಗವಾರ್‌ ಅವರು ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿಯನ್ನು ಪ್ರಶ್ನಿಸಿದರು.

ಮಕ್ಕಳ ಹಾಜರಾತಿ ವಹಿ, ಆಹಾರ ದಾಸ್ತಾನು ವಹಿಗಳನ್ನು ಸರಿಯಾಗಿ ನಿರ್ವಹಿಸಿಲ್ಲ ಯಾಕೆ ಎಂದು ವಾರ್ಡನ್‌ ಅವರಿಗೆ ಸಿಇಒ ಅವರು ಪ್ರಶ್ನಿಸಿದರು. ತಾವು ಬಂದು ನಾಲ್ಕು ತಿಂಗಳಾಗಿದ್ದು, ಇನ್ಮುಂದೆ ಸರಿಯಾಗಿ ಕೆಲಸ ನಿರ್ವಹಿಸುವೆ ಎಂದು ವಾರ್ಡನ್‌ ಪ್ರತಿಕ್ರಿಯಿಸಿದರು.

ದೂರು ದಾಖಲಿಸಲು ಸೂಚನೆ: ವಸತಿ ನಿಲಯದ ಆವರಣದಲ್ಲಿ ಲಾರಿಯೊಂದು ನಿಂತಿದ್ದರ ಬಗ್ಗೆ ಅಲ್ಲಿನ ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಈ ರೀತಿ ಆಗಾಗ ವಾಹನಗಳು ಇಲ್ಲಿ ನಿಂತು ನಮಗೆ ತೊಂದರೆಯಾಗುತ್ತಿದೆ ಎಂದು ಅಲ್ಲಿನ ವಿದ್ಯಾರ್ಥಿಗಳು ತಿಳಿಸಿದರು. ಈ ವಾಹನದ ಬಗ್ಗೆ ದೂರು ದಾಖಲಿಸುವಂತೆ ತಾಲೂಕು ಅಧಿಕಾರಿಗೆ ಸಚಿವರು ನಿರ್ದೇಶನ ನೀಡಿದರು. ಈ ಬಗ್ಗೆ ಕ್ರಮ ವಹಿಸುವಂತೆ ಸ್ಥಳದಲ್ಲಿದ್ದ ಪೊಲೀಸ್‌ ಅಧಿಕಾರಿಗಳಿಗೂ ಕೂಡ ಇದೇ ವೇಳೆ ಸಚಿವರು ಸೂಚಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.