ಜನ್ಮದಿನದಂದು ಸಸಿ ನೆಟ್ಟು ಪರಿಸರ ಉಳಿಸಿ: ಚಿದ್ರಿ


Team Udayavani, Jul 6, 2019, 4:09 PM IST

06-July-31

ಬೀದರ: ಬಗದಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಉದ್ಘಾಟಿಸಿದರು.

ಬೀದರ: ಮನೆಗೊಂದು ಮರ ಊರಿಗೊಂದು ವನವಾಗಬೇಕು. ವಿದ್ಯಾರ್ಥಿಗಳು ಅವರ ಜನ್ಮದಿನದಂದು ಸಸಿಗಳನ್ನು ನೆಟ್ಟು ಪರಿಸರ ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಸಲಹೆ ನೀಡಿದರು.

ಬಗದಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ವಿಭಾಗ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಯುಕ್ತಾಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ದಿನೇದಿನೆ ನಾಶವಾಗುತ್ತಿದೆ. ಅರಣ್ಯ ಪ್ರದೇಶಕ್ಕೆ, ರೈತರ ಬೆಳೆಗಳಿಗೆ ಮತ್ತು ಕುಡಿಯಲು ನೀರಿಲ್ಲದಂತಾಗುತ್ತಿದೆ. ಇದು ಅತ್ಯಂತ ನೋವಿನ ಸಂಗತಿ. ನಾವು ಮರಗಳನ್ನು ಕಡಿಯುತ್ತ ಅರಣ್ಯ ನಾಶ ಮಾಡುತ್ತಿರುವುದೇ ಇದಕ್ಕೆ ಕಾರಣ. ಇದು ಬದಲಾಗಬೇಕು. ಪರಿಸರ ನಮ್ಮ ಜೀವ ಇದ್ದಂತೆ. ಅದನ್ನು ಉಳಿಸಿಬೆಳೆಸುವ ಹೊಣೆ ಎಲ್ಲರ ಮೇಲಿದೆ ಎಂದು ಹೇಳಿದರು.

ಪರಿಸರ ಉಳಿಯಲು ಮಾಡಬೇಕಾದ ಮೊದಲ ಕಾರ್ಯ ಏನೆಂದರೆ ನಾವು ಪ್ರತಿಯೊಬ್ಬರು ಸಸಿಗಳನ್ನು ನೆಡಬೇಕು. ಯಾವುದೇ ಕಾರ್ಯಕ್ರಮ ಇರಲಿ ಆ ವೇಳೆ ನಾವು ಸಸಿ ನೆಡುವಂತಹ ಒಳ್ಳೆಯ ಪರಿಪಾಠ ರೂಢಿಸಿಕೊಳ್ಳಬೇಕು. ನಾನು ಸಸಿ ನೆಡುವ ಕೆಲಸವನ್ನು ತಪ್ಪದೇ ಮಾಡುತ್ತೇನೆ ಎಂದು ಪ್ರತಿಯೊಬ್ಬರು ಶಪತ ಮಾಡಿದಲ್ಲಿ ಖಂಡಿತಾ ಪರಿಸರ ಉಳಿಯಲು ಸಾಧ್ಯವಾಗುತ್ತದೆ ಎಂದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ.ಗಾಮನಗಟ್ಟಿ ಮಾತನಾಡಿ, ಇಡೀ ದೇಶದಲ್ಲಿ ಈ ಒಂದು ವಾರ ಅರಣ್ಯದ ಹಬ್ಬವಿದ್ದಂತೆ. ಜುಲೈ 1ರಿಂದ 7ರ ವರೆಗೆ ಸಸಿಗಳನ್ನು ನೆಡುವ ಮೂಲಕ ಅರಣ್ಯ ಸಂರಕ್ಷಣೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ಈ ವರ್ಷ ಜಿಲ್ಲೆಯ ಸೀಮಿತ ಅರಣ್ಯ ಪ್ರದೇಶದಲ್ಲಿ 3 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ರಸ್ತೆ ಬದಿಯ ನೆಡುತೋಪ ಮತ್ತು ನಗರ ಪ್ರದೇಶದ ರಸ್ತೆಗಳಲ್ಲಿ ಎತ್ತರವಾದ ಪ್ರದೇಶಗಳಲ್ಲಿ ಎತ್ತರವಾದ ಒಂದು ಲಕ್ಷ ಸಸಿಗಳನ್ನು ನೆಟ್ಟು ಪೋಷಿಸುವ ಗುರಿ ಹೊಂದಲಾಗಿದೆ. ಮತ್ತು ಕೃಷಿ ಅರಣ್ಯ ನೆಡುತೋಪುಗಾಗಿ ರೈತರಿಗೆ ಹಾಗೂ ಸಾರ್ವಜನಿರಿಗೆ ವಿತರಣೆಗಾಗಿ 6 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ. ಮಳೆಗಾಲದಲ್ಲಿ ಎಲ್ಲ ಸಸಿಗಳನ್ನು ನೆಟ್ಟು ಗುರಿ ಸಾಧಿಸಲಾಗುತ್ತದೆ ಎಂದು ತಿಳಿಸಿದರು.

ಮರಗಳ ಸಂರಕ್ಷಣೆಯಿಂದ ಮಣ್ಣಿನ ತೇವಾಂಶ ಹೆಚ್ಚಲಿದೆ. ಮರಗಳಿಂದಾಗುವ ಲಾಭಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಗಿಡಗಳನ್ನು ಬೆಳೆಸುವುದರ ಮೂಲಕ ಅರಣ್ಯ ಪ್ರದೇಶವನ್ನು ವಿಸ್ತರಿಸುತ್ತೇವೆ ಎಂದು ಹೇಳಿದರು.

ಪ್ರಾದೇಶಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಶಿವಶಂಕರ್‌ ಮಾತನಾಡಿ, ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಬೇಕು. ಇಲ್ಲಿನ ವಿದ್ಯಾರ್ಥಿಗಳಿಗೆ 100 ಸಸಿಗಳು ಕೊಡುತ್ತೇವೆ. ಯಾವ ವಿದ್ಯಾರ್ಥಿಗಳು ಅವುಗಳನ್ನು ಸರಿಯಾಗಿ ಬೆಳೆಸುತ್ತಾರೋ ಅವರಿಗೆ ಚಿಂಚೋಳಿ ಅರಣ್ಯ ಪ್ರದೇಶಕ್ಕೆ ಪ್ರವಾಸ ಕರೆದುಕೊಂಡು ಹೋಗುವುದಾಗಿ ಹೇಳಿದರು.

ಬಗದಲ್ ಜಿಲ್ಲಾ ಪಂಚಾಯತ ಸದಸ್ಯ ಅಫ್ರೂೕಜ್‌ ಖಾನ್‌, ಚಿಟ್ಟಾ ಜಿಲ್ಲಾ ಪಂಚಾಯತ್‌ ಕ್ಷೇತ್ರ ಸದಸ್ಯ ಶಕುಂತಲಾ ಕಾಶೀನಾಥ್‌ ಬೆಲ್ದಾಳೆ, ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ, ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿಗಳಾದ ಶಿವರಾಜ ಮೇಟಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೆಡೆ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.