ಜಿಲ್ಲೆಗೆ 125.39 ಕೋಟಿ ಅನುದಾನ

ಫಸಲ್ ಬಿಮಾ ಯೋಜನೆಯಿಂದ 55 ಸಾವಿರ ರೈತರು ದೂರ

Team Udayavani, Jul 26, 2019, 10:34 AM IST

26-July-6

ದುರ್ಯೋಧನ ಹೂಗಾರ
ಬೀದರ:
2018ರ ಮುಂಗಾರು ವಿವಿಧ ಬೆಳೆಗಳಿಗೆ ರೈತರು ಮಾಡಿಸಿದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ 1,29,903 ರೈತರಿಗೆ 125.39 ಕೋಟಿ ಅನುದಾನ ಮಂಜೂರಾಗಿದ್ದು, 55 ಸಾವಿರ ರೈತರು ವಿಮೆ ಯೋಜನೆ ಲಾಭದಿಂದ ದೂರ ಇರುವಂತಾಗಿದೆ.

ಸಮೀಕ್ಷೆ ಆಧಾರದಲ್ಲಿ ಪಾವತಿ: 2018ರಲ್ಲಿ ಜಿಲ್ಲೆಯ 1.84 ಲಕ್ಷ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 1.29 ಲಕ್ಷ ರೈತರಿಗೆ ವಿಮಾ ಯೋಜನೆ ಲಾಭ ಬರುತ್ತಿದ್ದು, ಇನ್ನುಳಿದ 55 ಸಾವಿರ ರೈತರು ಯೋಜನೆ ಲಾಭದಿಂದ ದೂರ ಇರುವಂತಾಗಿದೆ. ಬೆಳೆ ಹಾನಿ ಸಮೀಕ್ಷೆ ಆಧಾರದಲ್ಲಿ ಬೆಳೆ ವಿಮೆ ಪಾವತಿಯಾಗಿದ್ದು, ಯಾವ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿಲ್ಲ. ಅಂತಹ ರೈತರಿಗೆ ಬೆಳೆ ವಿಮೆ ಬಂದಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈತರ ಖಾತೆಗೆ ಹಣ ಜಮಾ: ತಾಲೂಕುವಾರು ವಿಮಾ ಹಣ ಮಂಜೂರಾಗಿದ್ದು, ರೈತರ ಖಾತೆಗೆ ವಿಮಾ ಹಣ ಪಾವತಿಸುವ ಕಾರ್ಯ ಆರಂಭಗೊಂಡಿದೆ. ಮುಂಗಾರು ಹಂಗಾಮಿನ ಉದ್ದು, ಹೆಸರು, ತೊಗರಿ, ಭತ್ತ, ಜೋಳ, ಸೂರ್ಯಕಾಂತಿ, ಮೆಕ್ಕೆಜೋಳ‌, ಸಜ್ಜೆ ಸೇರಿದಂತೆ ಇತರೆ ಬೆಳೆಗಳಿಗೆ ಬೆಳೆವಿಮೆ ಮಂಜೂರಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ. ವಿದ್ಯಾನಂದ ಮಾಹಿತಿ ನೀಡಿದ್ದಾರೆ.

ಕಡಿಮೆ ಅನುದಾನಕ್ಕೆ ಆಕ್ರೋಶ: 2018ರ ವಿಮಾ ಪರಿಹಾರ ಪಡೆಯುವಲ್ಲಿ ಬೀದರ ಜಿಲ್ಲೆ ರಾಜ್ಯದಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅತೀ ಹೆಚ್ಚು ರೈತರು ವಿಮಾ ಯೋಜನೆಯಲ್ಲಿ ನೋಂದಣಿಯಾಗಿದ್ದು, ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಕಡಿಮೆ ಮೊತ್ತದ ಪರಿಹಾರ ಬಂದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಬೇರೆ ಜಿಲ್ಲೆಗಳಲ್ಲಿ ರೈತರ ಸಂಖ್ಯೆ ಕಡಿಮೆ ಇದ್ದರೂ ಹೆಚ್ಚಿನ ಪರಿಹಾರ ನೀಡಲಾಗಿದೆ. ಮಳೆ ಬಾರದೇ ವ್ಯಾಪಕ ಬರಗಾಲ ಬಿದ್ದು, ಬೆಳೆಗಳು ಸಂಪೂರ್ಣ ಹಾಳಾಗಿದ್ದರೂ ಜಿಲ್ಲೆಗೆ ಸೂಕ್ತ ಪ್ರಮಾಣದ ವಿಮಾ ಪರಿಹಾರ ಕಲ್ಪಿಸುವಲ್ಲಿ ವಿಮಾ ಕಂಪನಿಗಳು ಮುಂದಾಗಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಬಿತ್ತಿದ ಬೆಳೆಗೆ ವಿಮೆ ಮಾಡಿಸಿ: ಪ್ರಸಕ್ತ ವರ್ಷದಲ್ಲಿ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ತುಂಬಲು ಜು.31 ಕೊನೆ ದಿನ ಎಂದು ಈಗಾಗಲೇ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೈತರು ಹೊಲಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ ಮಾತ್ರ ವಿಮೆ ಮಾಡಿಸಬೇಕು. ಬಿತ್ತನೆ ಮಾಡದ ಬೆಳೆಗಳಿಗೆ ವಿಮೆ ಮಾಡಿಸಬಾರದು ಎಂದು ಸೂಚಿಸಿದೆ. ಈ ವರ್ಷ ಬೆಳೆ ವಿಮೆ ಆನ್‌ಲೈನ್‌ ವ್ಯವಸ್ಥೆಗೆ ಒಳಪಟ್ಟಿದ್ದು, ಬೆಳೆ ಹಾನಿ ಸಂಭವಿಸಿದ ಸಂದರ್ಭದಲ್ಲಿ ರೈತರ ಹೊಲದಲ್ಲಿ ಆ ಬೆಳೆ ಇಲ್ಲವಾದರೆ ವಿಮೆ ಹಣ ಮಂಜೂರು ಆಗುವುದಿಲ್ಲ ಎಂದು ಅಧಿಕಾರಿಗಳು ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

2018ರಲ್ಲಿ ಬೆಳೆ ವಿಮೆ ಮಾಡಿಸಿದ ಜಿಲ್ಲೆಯ 1.84 ಲಕ್ಷ ರೈತರ ಪೈಕಿ 1.29 ಲಕ್ಷ ರೈತರಿಗೆ ಬೆಳೆ ವಿಮೆ ಮಂಜೂರಾಗಿದ್ದು, ಹಣ ವರ್ಗಾವಣೆ ಆಗುತ್ತಿದೆ. ಪ್ರಸಕ್ತ ವರ್ಷದ ಬೆಳೆ ವಿಮೆ ಶುರುವಾಗಿದ್ದು, ಜು.31 ಕೊನೆ ದಿನ. ಕಳೆದ ವರ್ಷ ಬೆಳೆ ಹಾನಿ ಸಂಭವಿಸಿದ ಪ್ರದೇಶಗಳಲ್ಲಿನ ರೈತರ ಹೊಲದಲ್ಲಿನ ಬೆಳೆಗಳ ಇಳುವರಿ ಆಧಾರದಲ್ಲಿ ವಿಮೆ ಪಾವತಿಸಲಾಗಿದೆ. ಈ ವರ್ಷ ಆನ್‌ಲೈನ್‌ ವ್ಯವಸ್ಥೆ ಇದ್ದು, ರೈತರು ಬಿತ್ತಿದ ಬೆಳೆಗೆ ವಿಮೆ ಮಾಡಿಸಿ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಬೇಕು.
ಸಿ. ವಿದ್ಯಾನಂದ,
ಕೃಷಿ ಇಲಾಖೆ ಜಂಟಿ ನಿರ್ದೇಶಕ, ಬೀದರ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.