ಉತ್ತಮ ಕಾರ್ಯವೇ ಜನರ ಪ್ರೀತಿಗೆ ಮಾರ್ಗ

ಜನಪ್ರತಿನಿಧಿಗಳಿಗೆ ಕರ್ತವ್ಯಗಳ ಕಾಳಜಿ ಇರಲಿ: ಸ್ವಾಮೀಜಿ •ಸಂಸದ ಭಗವಂತ ಖೂಬಾಗೆ ಸನ್ಮಾನ

Team Udayavani, Jul 14, 2019, 10:15 AM IST

14-JULY-6

ಬೀದರ: ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನಾಗರಿಕ ಸಮಿತಿ ವತಿಯಿಂದ ಸಂಸದ ಭಗವಂತ ಖೂಬಾ ಅವರನ್ನು ಸನ್ಮಾನಿಸಲಾಯಿತು.

ಬೀದರ: ಈ ಕಾಲದಲ್ಲಿ ದುಡ್ಡಿನಿಂದ ಜನರ ಪ್ರೀತಿ, ವಿಶ್ವಾಸ ಗಳಿಸಲು ಸಾಧ್ಯವಿಲ್ಲ. ಚುನಾಯಿತ ಜನ ಪ್ರತಿನಿಧಿಗಳು ಅವರ ಕಾಲ ಅವಧಿಯಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ, ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಂಡರೆ ಸಾಕು ಜನರು ಅವರನ್ನು ಮರೆಯುವುದಿಲ್ಲ ಎಂದು ಚಿದಂಬರಾಶ್ರಮದ ಡಾ| ಶಿವಕುಮಾರ ಸ್ವಾಮೀಜಿ ನುಡಿದರು.

ನಗರದ ರಂಗ ಮಂದಿರದಲ್ಲಿ ನಾಗರಿಕ ಸಮಿತಿ ಹಮ್ಮಿಕೊಂಡಿದ್ದ ಸಂಸದ ಭಗವಂತ ಖೂಬಾ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಐದು ವರ್ಷದಲ್ಲಿ ಸಂಸದ ಭಗವಂತ ಖೂಬಾ ಉತ್ತಮ ಕೆಲಸ ಮಾಡಿದ್ದಾರೆ ಎಂದು ಇಂದು ನಡೆದ ಸಮಾರಂಭದಲ್ಲಿ ಹೆಚ್ಚು ಜನರು ಸೇರಿದ್ದಾರೆ. ಜನರ ಮಧ್ಯೆ ಉಳಿದುಕೊಂಡು ಜನರ ಸೇವೆ ಮಾಡುವವರಿಗೆ ಜನರು ಗೌರವ ನೀಡುತ್ತಾರೆ. ಜನಪ್ರತಿನಿಧಿಗಳು ತಮ್ಮ ಕರ್ತವ್ಯಗಳ ಬಗ್ಗೆ ಕಾಳಜಿ ವಹಿಸಬೇಕು. ನಿಗದಿತ ಅವಯಲ್ಲಿ ವಿವಿಧ ಯೋಜನೆಗಳು ಜನರಿಗೆ ಮುಟ್ಟುವಂತೆ ಮಾಡುವ ಗುರಿ ಹೊಂದಬೇಕು. ಗುರಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಆಗ ಮಾತ್ರ ರಾಜಕಾರಣಿಗಳು ಜನರ ಮಧ್ಯೆ ಉಳಿದುಕೊಳ್ಳಲು ಸಾಧ್ಯ ಎಂದರು.

ಭಾಲ್ಕಿ ಹಿರೇಮಠದ ಶ್ರೀ ಗುರುಬಸವ ಪಟ್ಟದೇವರು ಮಾತನಾಡಿ, ಮನುಷ್ಯನ ಜೀವನದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ ಎಂಬುದನ್ನು ಸಂಸದ ಭಗವಂತ ಖೂಬಾ ತಮ್ಮ ಕಾರ್ಯಗಳ ಮೂಲಕ ಮಾಡಿದ್ದಾರೆ. ಮೌನ ಕ್ರಾಂತಿಯ ಮೂಲಕ ಕೆಲಸ ಮಾಡಿ ಜನರಿಂದ ಚಪ್ಪಾಳೆ ಹಾಕಿಸಿಕೊಳ್ಳುವ ಕೆಲಸವನ್ನು ಸಂಸದರು ಮಾಡುತ್ತಿರುವುದು ಜನರಿಗೆ ಸಂತಸ ತಂದಿದೆ ಎಂದರು.

ಬಸವಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಮಾತನಾಡಿ, ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ ಅದೃಷ್ಟ ಬೇಕಾಗುತ್ತದೆ. ಒಂದು ಚುನಾವಣೆ ಎದುರಿಸುವ ಮೂಲಕ ದೇಶದ ಆಡಳಿತದ ಒಂದು ಭಾಗವಾಗಿ ಭಾಗವಹಿಸುವುದು ಸುಲಭದ ಮಾತಲ್ಲ. ಇಂತಹ ಅವಕಾಶಗಳು ಎಲ್ಲರಿಗೂ ದೊರೆಯುವುದಿಲ್ಲ. ಅಧಿಕಾರ ಸಿಕ್ಕವರು ಸೂಕ್ತವಾಗಿ ನಿಭಾಯಿಸುವ ಮೂಲಕ ಜನರ ಸೇವೆಗೆ ಅಣಿಯಾಗಬೇಕು ಎಂದು ತಿಳಿಸಿದರು.

ಶಾಹೀನ ಕಾಲೇಜಿನ ಅಧ್ಯಕ್ಷ ಅಬ್ದುಲ್ ಖದೀರ್‌ ಮಾತನಾಡಿ, ಅನೇಕ ಜನ ಪ್ರತಿನಿಧಿಗಳು ತಮ್ಮ ಮೊಬೈಲ್ ಕರೆ ಸ್ವೀಕರಿಸುವುದಿಲ್ಲ. ಆದರೆ, ಸಂಸದ ಭಗವಂತ ಖೂಬಾ ಜನಸಾಮಾನ್ಯರ ಕರೆಗಳನ್ನೂ ಸ್ವೀಕರಿಸಿ ಮಾತನಾಡುವ ವ್ಯಕ್ತಿತ್ವ ಜನರಿಗೆ ಇಷ್ಟವಾಗಿದೆ. ಅಲ್ಲದೆ, ಬೀದರ ಜಿಲ್ಲೆಯ ಅಭಿವೃದ್ಧಿಗಾಗಿ, ಜಿಲ್ಲೆಯ ಯುವರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ದೊಡ್ಡ ಕೈಗಾರಿಕ ಕಂಪನಿಗಳನ್ನು ಜಿಲ್ಲೆಯಕಡೆಗೆ ತರುವ ಕೆಲಸವನ್ನು ಸಂಸದರು ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆರ್‌ಇ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಅಷ್ಟೂರ ಮಾತನಾಡಿ, ಕೇಂದ್ರ ಸರ್ಕಾರದ ನೂರಾರು ಯೋಜನೆಗಳನ್ನು ಬೀದರ ಜಿಲ್ಲೆಯ ಜನರಿಗೆ ಮುಟ್ಟಿಸುವ ಕೆಲಸವನ್ನು ಸಂಸದರು ಮಾಡಿದ್ದಾರೆ. ಅನೇಕ ಹೊಸ ರೈಲು ಸಂಚಾರ ಪ್ರಾರಂಭಿಸಿ ಜನ ಸಾಮಾನ್ಯರಿಗೆ ಅನುಕೂಲ ಮಾಡಿದ್ದಾರೆ. ಇದೀಗ ಜಿಲ್ಲೆಯ ಜನರ ಆಸೆಯಂತೆ ಬೀದರ್‌-ಕಲಬುರಗಿ-ಬೆಂಗಳೂರು ರೈಲು ಸಂಚಾರವನ್ನು ಕೂಡಲೆ ಪ್ರಾರಂಭಿಸಲು ಸಂಸದರು ಮುಂದಾಗಬೇಕು ಎಂದು ತಿಳಿಸಿದರು.

ಸಂಸದ ಭಗವಂತ ಖೂಬಾ ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಬಡವರ ಕಾಳಜಿ ಹೊಂದಿದೆ. ಮೋದಿ ಅವರು ರೂಪಿಸಿದ ಅನೇಕ ಯೋಜನೆಗಳ ಲಾಭವನ್ನು ಜಿಲ್ಲೆಯ ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಂದೆಯೂ ಕೂಡ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳು, ಸಂಘಟನೆಗಳು, ವಿವಿಧ ಸಮುದಾಯದ ಜನರು ಸಂಸದ ಖೂಬಾ ಅವರನ್ನು ಸನ್ಮಾನಿಸಿದರು. ಆರ್‌ಆರ್‌ಕೆ ಶಿಕ್ಷಣಸಂಸ್ಥೆ ಅಧ್ಯಕ್ಷ ರಮೇಶಕುಮಾರ ಪಾಂಡೆ, ದರಬಾರ ಸಿಂಗ್‌, ಸೋಮಶೇಖರ ಪಾಟೀಲ ಗಾದಗಿ, ಗುರುನಾಥ ಕೊಳ್ಳುರ, ಬಸವರಾಜ ಧನ್ನೂರ, ಅಶೋಕ ಪಾಟೀಲ, ಶಿವಶರಣಪ್ಪ ವಾಲಿ, ಚನ್ನಬಸವ ಹಾಲಹಳ್ಳಿ, ಸುರೇಶ ಚನ್ನಶೆಟ್ಟಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.