ಜಾನಪದಕ್ಕೆ ಮಹತ್ವ ನೀಡಿದ ಜಿಲ್ಲೆ ಬೀದರ

ಜಾನಪದ ಶ್ರೀ ಪ್ರಶಸ್ತಿಗೆ ಭಾಜನರಾದ ಚಂದ್ರಪ್ಪಾಗೆ ಅಭಿನಂದನೆ•ಜಾನಪದ ಗಾಯನ-ಕಲಾವಿದರಿಗೆ ಸನ್ಮಾನ

Team Udayavani, Aug 14, 2019, 11:00 AM IST

14-AGUST-6

ಬೀದರ: ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಜಾನಪದ ಕಲಾವಿದರ ಬಳಗದಿಂದ ನಡೆದ ಸಮಾರಂಭದಲ್ಲಿ 2017ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ಭಾಜನರಾದ ಚಂದ್ರಪ್ಪಾ ಮಳಗೆ ಅವರನ್ನು ಸನ್ಮಾನಿಸಲಾಯಿತು.

ಬೀದರ: ಬೀದರ ಜಿಲ್ಲೆಯಲ್ಲಿ ಸಾಹಿತ್ಯ ಮತ್ತು ಜಾನಪದಕ್ಕೆ ಹೆಚ್ಚು ಮಹತ್ವ ಇದೆ. ಜಿಲ್ಲೆಯ ಎಲ್ಲಾಕಡೆಗಳಲ್ಲಿ ಜಾನಪದ ಸೊಗಡು ಅಡಗಿದೆ ಎಂದು ಮಾಜಿ ಸಚಿವ, ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪೂರ ಹೇಳಿದರು.

ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಜಾನಪದ ಕಲಾವಿದರ ಬಳಗದಿಂದ ಹಮ್ಮಿಕೊಂಡಿದ್ದ 2017ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ಭಾಜನರಾದ ಚಂದ್ರಪ್ಪಾ ಮಳಗೆ ಅವರ ಅಭಿನಂದನಾ ಹಾಗೂ ಜಾನಪದ ಗಾಯನ, ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬೀದರ ಜಿಲ್ಲೆಯ ಕನ್ನಡ ಭಾಷೆ ಬಹಳ ಅದ್ಭುತವಾಗಿದೆ. ಇಲ್ಲಿ ಸಾಹಿತ್ಯ ಮತ್ತು ಜಾನಪದದ ಸೊಗಡು ಅಡಗಿದೆ. ಅಧಿಕಾರ ಎಂದಿಗೂ ಶಾಶ್ವತ ಅಲ್ಲ. ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಕರ್ನಾಟಕ ಜಾನಪದ ಅಕಾಡೆಮಿಯ ತಂಡ ತನ್ನ ಅಧಿಕಾರವಧಿಯಲ್ಲಿ ಉತ್ತಮ ಕಾರ್ಯಗಳನ್ನು ಮಾಡಿದೆ. ಲೇಖಕಿ ಪಾರ್ವತಿ ಸೋನಾರೆ ಅವರು ಚಂದ್ರಶಾ ಮಾಳಗೆ ಅವರ ಕುರಿತು ಪುಸ್ತಕ ಬರೆಯಲು ಆರಂಭಿಸಬೇಕು. ಪುಸ್ತಕ ಪ್ರಕಟಣೆಗೆ ಬೇಕಾದ ಖರ್ಚು-ವೆಚ್ಚದ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಗುರು ಪಟ್ಟದ್ದೇವರು ಮಾತನಾಡಿ, ಅಶಾಂತಿಯ ಬದುಕಿಗೆ ಶಾಂತಿ ಹಾಗೂ ಸಮಾಧಾನ ನೀಡುವುದೇ ಜಾನಪದವಾಗಿದೆ. ಜಾನಪದ ಮನಸ್ಸನ್ನು ವಿಶಾಲವಾಗಿಸುತ್ತದೆ. ಹಳ್ಳಿಯಲ್ಲಿ ಗೀಗಿ ಪದ, ಕೋಲಾಟ ಸೇರಿದಂತೆ ಮೊದಲಾದ ಜಾನಪದ ಸೊಗಡು ನಶೀಸಿ ಹೋಗುತ್ತಿರುವ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಜಿಲ್ಲೆಯಲ್ಲಿ ಜನಪದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನಪದ ಕಲೆಯ ಕುರಿತು ಇಂದಿನ ಯುವ ಜನರಿಗೆ ತಿಳಿಸುವ ಕಾರ್ಯ ಆಗಬೇಕು ಎಂದರು.

ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಸದಸ್ಯ ಪ್ರಕಾಶ ಅಂಗಡಿ ಮಾತನಾಡಿ, ಬೀದರ ಜಿಲ್ಲೆಯ ಕಲಾವಿದರು ಹೃದಯ ಶ್ರೀಮಂತಿಕೆ ಉಳ್ಳವಾಗಿದ್ದಾರೆ. ಜಾನಪದ ಕಲಾವಿದರ ಕುರಿತು ಪುಸಕ್ತಗಳು ರಚನೆ ಆಗಬೇಕು. ಮುಂದಿನ ಯುವಕರಿಗೂ ಇಲ್ಲಿನ ಕಲಾವಿದರ ಕುರಿತು ಪರಿಚಯ ನೀಡುವ ಕೆಲಸ ಆಗಬೇಕು ಎಂದರು.

ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಅಂತಾರಾಷ್ಟ್ರೀಯ ಡೊಳ್ಳು ಕುಣಿತ ಕಲಾವಿದ ಬಿ.ಟಾಕಪ್ಪ ಕಣ್ಣೂರು ಮಾತನಾಡಿ, ನನ್ನ ಅಧಿಕಾರದ ಅವಧಿಯಲ್ಲಿ ಎಲೆಮರೆ ಕಾಯಿಯಂತಿರುವ ಕಲಾವಿದರನ್ನು ವಿಶೇಷವಾಗಿ ಬೀದರ ಜಿಲ್ಲೆಯ ಜಾನಪದ ಕಲಾವಿದರಾದ ಶರಣಪ್ಪ ಭೂತೆ ಮತ್ತು ಚಂದ್ರಶಾ ಮಾಳಗೆ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ದೊರೆಯುವಂತೆ ಮಾಡಿದ್ದು ನನಗೆ ಸಂತಸ ತಂದಿದೆ ಎಂದರು.

ಬೀದರ ಜಿಲ್ಲಾ ಜಾನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಶಾಸಕ ರಹೀಂಖಾನ, ಜ್ಯೋತಿಲಿಂರ್ಂಗ ಹೊನ್ನಶೆಟ್ಟಿ, ನಿರ್ಮಲಾ ಡಿ.ಆರ್‌., ಅರುಣಕುಮಾರ ಸಿ., ಸುರೇಶ ಚೆನ್ನಶೆಟ್ಟಿ, ಸುನೀಲ ಆರ್‌, ಪಾರ್ವತಿ ಸೋನಾರೆ, ಎಚ್. ಪ್ರಕಾಶ, ಮಾರುತಿ ಬೌದ್ಧೆ, ಫರ್ನಾಂಡೀಸ್‌ ಹಿಪ್ಪಳಗಾಂವ, ವೀರಶೆಟ್ಟಿ ಪಾಟೀಲ, ರಾಜಕುಮಾರ ಹೆಬ್ಟಾಳೆ, ಎಸ್‌.ವಿ. ಕಲ್ಮಠ, ವಸಂತಕುಮಾರ ನೌಬಾದೆ, ನಾಗೇಂದ್ರ ದಂಡೆ, ಎಂ.ಜಿ. ಗಂಗನಪಳ್ಳಿ, ಎಂ.ಜಿ. ದೇಶಪಾಂಡೆ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.