ಮಕ್ಕಳ ಭವಿಷ್ಯಕ್ಕಾಗಿ ಸಮಯ ನೀಡಿ
ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮ
Team Udayavani, May 12, 2019, 1:30 PM IST
ಬೀದರ: ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಾರ್ಯಲಯದಲ್ಲಿ ಸಿಬ್ಬಂದಿಗಳ ಮಕ್ಕಳು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಬೀದರ: ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಾರ್ಯಾಲಯದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಿಬ್ಬಂದಿಗಳ ಮಕ್ಕಳು ಹಾಗೂ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ| ರಾಜಶೇಖರ ಪಾಟೀಲ ಮಾತನಾಡಿ, ಮಕ್ಕಳ ಭವಿಷ್ಯ ಉಜ್ವಲವಾಗಲು ಪಾಕರು ಮಕ್ಕಳಿಗೆ ಸಮಯ ನೀಡಬೇಕು. ಇಂದಿನ ದಿನಗಳಲ್ಲಿ ಮಕ್ಕಳು ಒಂದು ಕಡೆ ಆದರೆ, ಪಾಲಕರ ನಡೆ ಇನ್ನೊಂದು ಕಡೆ ಆಗುತ್ತಿದೆ. ಹಣ ಗಳಿಸುವ ನಿಟ್ಟಿನಲ್ಲಿ ಹತ್ತಾರು ಚಿಂತನೆ ಮಾಡುವ ಪಾಲಕರು ಮಕ್ಕಳ ಭವಿಷ್ಯದ ಕಡೆಗೂ ಗಮನ ಹರಿಸಿದರೆ ಮಾತ್ರ ಮಕ್ಕಳು ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳುತ್ತಾರೆ. ಇಲ್ಲವಾದರೆ ದುಷ್ಟ ದಾರಿಗೆ ಹೋಗುವ ಸಾಧ್ಯತೆಗಳು ಕೂಡ ಇರುತ್ತವೆ ಎಂದರು.
ತಾಲೂಕು ಕಸಾಪ ಕೋಶಾಧ್ಯಕ್ಷ ವೀರಶೆಟ್ಟಿ ಚೆನ್ನಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಅವರಿಗೆ ಉತ್ತಮ ಮಾರ್ಗದರ್ಶನ ನೀಡುವುದರೊಂದಿಗೆ ಉತ್ತಮ ವಿದ್ಯಾರ್ಥಿಗಳಾಗಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರೋತ್ಸಾಹಿಸಬೇಕು. ನಮ್ಮ ಇಲಾಖೆಯ ಸಿಬ್ಬಂದಿಯವರ ಮಕ್ಕಳನ್ನು ಗೌರವಿಸುವುದು ನಮಗೆ ಹೆಮ್ಮೆ. ಇದರಿಂದ ಎಲ್ಲರೊಂದಿಗೆ ಭಾವನಾತ್ಮಕವಾದ ಸಂಬಂಧ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಈ ವೇಳೆ ರೋನಕ್ ರಾಜಶೇಖರ ಪಾಟೀಲ, ಸುಮಾ ಕಾಶೀನಾಥ ಸಪಾಲ, ಸೋಹಮ್ ಸಂಜಯ ಮಲ್ಗಿಕರ, ಪ್ರಜ್ವಲ ಸೂರ್ಯಕಾಂತ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ರಮೇಶ, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಕಾಶೀನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುಧಾಳೆ, ಸಂಗಪ್ಪಾ ಕಾಂಬ್ಳೆ, ಶ್ರಾವಣ ಜಾಧವ, ಓಂಕಾರ ಮಲ್ಕೆಕರ, ಪ್ರವೀಣಕುಮಾರ, ಜಿಲ್ಲಾ ಕಚೇರಿಯ ಸಿಬ್ಬಂದಿ ಗೋರಕನಾಥ, ರಾಜೇಶ, ರಮೇಶ, ಇಮಾನವೆಲ್, ಅಬ್ದುಲ್ ಹೈ, ಸಂಜೀವಕುಮಾರ, ಸೂರ್ಯಕಾಂತ ಪಾಟೀಲ, ಕಾಶೀನಾಥ ಕಿರಣಕುಮಾರ, ಪಂಢರಿನಾಥ ಪೂಜಾರಿ, ಶಾಮರಾವ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…