ಮೊಬೈಲ್ ಯುಗದಲ್ಲಿ ಸೊರಗಿದೆ ಜಾನಪದ

ಬಾಲಕಿಯರ ವಸತಿ ನಿಲಯದಲ್ಲಿ ಗುರು ಶಿಷ್ಯ ಪರಂಪರೆ ಜಾನಪದ ಸಂಗೀತ ತರಬೇತಿ ಕಾರ್ಯಕ್ರಮ

Team Udayavani, Sep 6, 2019, 7:13 PM IST

6-Septecember-33

ಬೀದರ: ಪ್ರತಾಪ ನಗರದ ಮೆಟ್ರಕ್‌ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ನಡೆದ ಗುರುಶಿಷ್ಯ ಪರಂಪರೆ ಜಾನದಪ ಸಂಗೀತ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮಸಾಗರ ದಾಂಡೇಕರ್‌ ಮಾತನಾಡಿದರು.

ಬೀದರ: ಇಂದಿನ ಮೊಬೈಲ್ ಯುಗದಲ್ಲಿ ಜಾನಪದ ಸಂಸ್ಕೃತಿ ಸೊರಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು.

ಪ್ರತಾಪ ನಗರದ ಮೆಟ್ರಕ್‌ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಮ್ಮಿಕೊಂಡಿದ್ದ ಗುರುಶಿಷ್ಯ ಪರಂಪರೆ ಜಾನದಪ ಸಂಗೀತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆದರೆ ಯುವ ವಿದ್ಯಾರ್ಥಿಗಳನ್ನು ಜಾನಪದದ ಸೊಗಡಿನತ್ತ ಸೆಳೆಯಲು ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದರು.

ಹಾಲಹಳ್ಳಿ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕಿ ಡಾ| ಮಹೇಶ್ವರಿ ಹೇಡೆ ಉಪನ್ಯಾಸ ನೀಡಿ, ಗುರು ಎಂದರೆ ದೀಪ. ಆ ದೀಪ ನೂರಾರು ಮನೆಗಳನ್ನು ಬೆಳಗುತ್ತದೆ. ಜನಪದ ಅಂದರೆ ಅದೊಂದು ಖುಷಿ. ಅದು ಸಹಜವಾಗಿ ಬಂದ ಸಾಹಿತ್ಯವಾಗಿದೆ. ಸಂಗೀತ ಕಲೆಗೆ ನಮ್ಮಲ್ಲಿ ವಿಶೇಷ ಮಾನ್ಯತೆ ಇದೆ. ಇದಕ್ಕೆ ಯಾವುದೇ ಅಕ್ಷರ ಜ್ಞಾನ ಕೂಡ ಬೇಕಿಲ್ಲ. ಉತ್ತಮವಾದ ಸಂಗೀತ ಪ್ರತಿಭೆಗೆ ಒಂದಿಲ್ಲೊಂದು ದಿನ ಉತ್ತಮ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಅದಕ್ಕೆ ನಾವು ಯಾವುದೇ ಸಿದ್ಧತೆ ಮಾಡಿಕೊಳ್ಳಬೇಕಿಲ್ಲ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಎಸ್‌.ಎಂ. ಜನವಾಡಕರ್‌ ಮಾತನಾಡಿ, ಮನುಷ್ಯ ಭೂಮಂಡಲದಲ್ಲಿ ಜನ್ಮತಾಳಿದ ದಿನದಿಂದಲೇ ಅವನ ಜೊತೆಗೆ ಸಂಗೀತವೂ ಬಂದಿದೆ. ಸಂಗೀತದಿಂದ ಚಿತ್ತ ಶುದ್ಧಿಯಾಗುತ್ತದೆ. ಮನುಷ್ಯ ನೆಮ್ಮದಿಯಿಂದ ಬದುಕುತ್ತಾನೆ ಎಂದು ಹೇಳಿದರು.

ಹಿರಿಯ ಜಾನಪದ ಕಲಾವಿದ ಶಂಭುಲಿಂಗ ವಾಲದೊಡ್ಡಿ ಮಾತನಾಡಿ, ನಾನು ಸುತ್ತಿದ ದೇಶಗಳಲ್ಲಿ ಕಂಡಂತೆ ಶೇ.50ರಷ್ಟು ಮಹಿಳೆಯರು, ಗಂಡಸರು ನಾಚುವ ರೀತಿಯಲ್ಲಿ ತಮ್ಮ ವೈವಿಧ್ಯಮಯ ಕಲೆ ಪ್ರದರ್ಶನ ಮಾಡಿದ್ದಾರೆ. ಆ ಸಾಮರ್ಥ್ಯ ಮಹಿಳೆಯರಲ್ಲಿದೆ. ಯಾವುದಕ್ಕೂ ಹೆದರದೆ ಆಸಕ್ತಿಯಿಂದ ಕಲಿತು ತಾವು ಕಲಾವಿದರಾದಲ್ಲಿ ಜಗತ್ತಿನ ಯಾವುದೇ ಮೂಲೆಗಾದರೂ ಹೋಗಿ ಕಲೆಗಳ ಪ್ರದರ್ಶನ ಮಾಡಬಹುದು ಎಂದು ತಿಳಿಸಿದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮಸಾಗರ ದಾಂಡೇಕರ್‌ ಮಾತನಾಡಿ, ವಸತಿ ಶಾಲೆಯ ಮಕ್ಕಳಿಗೆ ಇದೊಂದು ಒಳ್ಳೆಯ ಅವಕಾಶ ಸಿಕ್ಕಿದೆ. ನಮ್ಮ ಜಿಲ್ಲೆಯ ವಿಶೇಷ ಕಲೆಗಳನ್ನು ವಿಶೇಷವಾಗಿ ವಿದ್ಯಾರ್ಥಿನಿಯರಿಗೆ, ಜಿಲ್ಲೆಯ ಹಿರಿಯ, ಅನುಭವಿ ಗುರುಗಳಿಂದ ಕಲಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳಿಂದಲೇ ಕಲಾ ಪ್ರದರ್ಶನ ನಡೆಸಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ನರಸಾ ಗೊಂಡ, ಸಂಗೀತ ಕಲಾವಿದ ರಾಮುಲು ಗಾದಗಿ, ತ್ರಿವೇಣಿ ರಮೇಶ ಕೋಳಾರ್‌, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನೀಲಕುಮಾರ, ಸಂಘಟಿಕ ಮಹೇಶ ಗೋರನಾಳಕರ, ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕ‌ ಸಂಗಮ್ಮ ಮತ್ತು ಗೀತಾ, ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿರೂಪಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.