ಭೂಮಿ ಪಡೆದು ಕೈಗಾರಿಕೆ ಮರೆತರು!

ಫಂಕ್ಷನ್‌ ಹಾಲ್, ಹೋಟೆಲ್, ಬಾರ್‌-ರೆಸ್ಟೋರೆಂಟ್ ನಿರ್ಮಾಣ •ಕೆಐಡಿಬಿ ನೋಟಿಸ್‌ ಜಾರಿ

Team Udayavani, Aug 25, 2019, 1:12 PM IST

25-Agust-24

ದುರ್ಯೋಧನ ಹೂಗಾರ
ಬೀದರ:
ಕೈಗಾರಿಕಾ ಇಲಾಖೆ ನಿಯಮ ಉಲ್ಲಂಘಿಸಿ ಕೈಗಾರಿಕಾ ಪ್ರದೇಶದ ಭೂಮಿಯಲ್ಲಿ ಫಂಕ್ಷನ್‌ ಹಾಲ್, ಹೋಟೆಲ್, ಬಾರ್‌ ಮತ್ತು ರೆಸ್ಟೋರೆಂಟ್ ನಿರ್ಮಿಸಿಕೊಂಡ 8 ಜನ ಭೂ ಮಾಲೀಕರಿಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ|ಎಚ್.ಆರ್‌. ಮಹಾದೇವ ಅವರ ಆದೇಶದ ಹಿನ್ನೆಲೆಯಲ್ಲಿ ಕೆಐಡಿಬಿ ಅಧಿಕಾರಿಗಳು ನೌಬಾದ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಟಿ.ಎಚ್ ಪ್ರಕಾಶ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆ ನಡೆಸುವುದಾಗಿ ಹೇಳಿ ಭೂಮಿ ಪಡೆದ ಸ್ಥಳಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ವಿವಿಧ ಇತರೆ ಉದ್ದೇಶಕ್ಕಾಗಿ ಜಮೀನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಿದ್ದಾರೆ.

ಮಂಡಳಿಯಿಂದ ನಿವೇಶನ ಪಡೆದ ಮಾಲೀಕರು ಕಾರ್ಖಾನೆ ಸ್ಥಾಪಿಸಬೇಕೆಂಬ ಒಡಂಬಡಿಕೆ ಮೇರೆಗೆ ನಿವೇಶನ ನೀಡಲಾಗುತ್ತದೆ. ಆದರೆ, ಅರ್ಜಿಯಲ್ಲಿ ಎಲ್ಲಾ ನಿಯಮಗಳಿಗೆ ಒಪ್ಪಿಕೊಂಡು ನಿವೇಶನ ಪಡೆದ ಮಾಲೀಕರು ಕೈಗಾರಿಕೆ ನಡೆಸುವ ಬದಲಿಗೆ ಇತರೆ ಉದ್ಯೋಗ ನಡೆಸುತ್ತಿದ್ದಾರೆ. ಕೈಗಾರಿಕೆ ನಡೆಯಬೇಕಾದ ಸ್ಥಳದಲ್ಲಿ ಬಾರ್‌-ರೆಸ್ಟ್ರೋರೆಂಟ್, ಫಂಕ್ಷನ್‌ ಹಾಲ್ ಹಾಗೂ ಮನೆಗಳನ್ನು ನಿರ್ಮಿಸಿ ಸರ್ಕಾರಕ್ಕೆ ಮೋಸ ಮಾಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ನಿಟ್ಟಿನಲ್ಲಿ ಕೆಲ ಕಡೆಗಳಲ್ಲಿ ಮಾತ್ರ ಸರ್ವೇ ಮಾಡಿ ಪಟ್ಟಿ ತಯಾರಿಸಿದ್ದಾರೆ.

ಯಾರಿಗೆ ನೋಟಿಸ್‌?: ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ನಿವೇಶನ ಪಡೆದ ಭೂ ಮಾಲೀಕರು ಕೈಗಾರಿಕಾ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ನೋಟಿಸ್‌ ನೀಡಿದ್ದಾರೆ. ಸೌರಭ ದಾಲ್ ಬೇಸನ್‌ ಇಂಡಸ್ಟ್ರೀಯಲ್ ಮಾಲೀಕ ಸೋಮನಾಥ ರಾಜಪ್ಪಾ ಹೂಗಾರ್‌ (ನಿವೇಶನ ಸಂಖ್ಯೆ 49), ಆರ್ಕೆ ಹೋರ್ಡಿಂಗ್‌ ಮನಿಫೆಕ್ಚರಿಂಗ್‌ ಯೂನಿಟ್ ಪಾಲುದಾರರಾದ ರಾಮಕೃಷ್ಣ, ನಾಗರಾಜ, ಮೌನೇಶ್ವರ, ರಾಜಕಿರಾನ ಸುತಾರ (ನಿವೇಶನ ಸಂಖ್ಯೆ21), ರಾಜಕುಮಾರ ಅಗ್ರವಾಲ್ (ನಿವೇಶನ ಸಂಖ್ಯೆ 8,9, 10), ಬಾಲಾಜಿ ಮುರಮುರಾ ಇಂಡಸ್ಟ್ರೀಜ್‌ನ ರಮೇಶ ರಾಚಪ್ಪ ಹೂಗಾರ (ನಿವೇಶನ ಸಂಖ್ಯೆ 49, 51), ರಾಜೇಶ್ವರ ವಿಠಯಹ ಗುಜವಾರ (ನಿವೇಶನ ಸಂಖ್ಯೆ 20-ಇ), ಬೆಲ್ದಾಳೆ ಎಂಟರಪ್ರೈಸೆಸ್‌ ಪಾಲುದಾರ ಸಂತೋಷ ಕಾಶೀನಾಥ ಬೆಲ್ದಾಳೆ, ನೀತಾ ಶೈಲೇಂದ್ರ ಬೆಲ್ದಾಳೆ (ನಿವೇಶನ ಸಂಖ್ಯೆ 46, 47), ರಾಜೇಶ್ವರ ವಿಠಲಯಹ ಗುಜವಾರ (ನಿವೇಶನ ಸಂಖ್ಯೆ 20-ಇ), ಬಸವರಾಜ ದೇವಿದಾಸ್‌ ಅರವಿಂದ ಹೋಟೆಲ್ (ನಿವೇಶನ ಸಂಖ್ಯೆ-43-ಎ) ಇವರುಗಳಿಗೆ ಕಳೆದ ತಿಂಗಳು 17-07-2019ರಂದು ನೋಟಿಸ್‌ ನೀಡಲಾಗಿದ್ದು, ಈ ವರೆಗೆ ಯಾವುದೇ ಭೂ ಮಾಲೀಕರು ನೋಟಿಸ್‌ಗೆ ಉತ್ತರಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಕೈಗಾರಿಕಾ ಪ್ರದೇಶದ ನಿಯಮ: ಕೈಗಾರಿಕಾ ಪ್ರದೇಶದಲ್ಲಿ ಕೇವಲ ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ಹಂಚಿಕೆ ಮಾಡಲಾಗುತ್ತದೆ. ಭೂಮಿ ಪಡೆದ ಭೂ ಮಾಲೀಕರು ಕಡ್ಡಾಯವಾಗಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬ ನಿಯಮ ಕೂಡ ಇದೆ. 15 ವರ್ಷಗಳ ಕಾಲ ನಿರಂತರ ಕಾರ್ಖಾನೆ ನಡೆಸುವ ಮಾಲೀಕರು ಕೈಗಾರಿಕಾ ಪ್ರದೇಶದಲ್ಲಿ ಪಡೆದ ಭೂಮಿಗೆ ಹಕ್ಕುದಾರರು ಆಗುತ್ತಾರೆ. ಭೂಮಿಯ ಹಕ್ಕು ಪಡೆದುಕೊಂಡಿದ್ದರೆ ಬೇರೆ ಯಾವುದೇ ಉದ್ಯೋಗ ಅಥವಾ ಬೇರೆ ಉದ್ದೇಶಕ್ಕೆ ಭೂಮಿ ಬಳಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಂದ್‌ ಮಾಡಿಸುತ್ತೇವೆ
ಕೈಗಾರಿಕಾ ಭೂಮಿಯಲ್ಲಿ ಕಾನೂನು ಉಲ್ಲಂಘನೆ ಮಾಡಿ ಬೇರೆ ಉದ್ದೇಶಕ್ಕೆ ನಿವೇಶನ ಬಳಸುತ್ತಿರುವ ಮಾಲೀಕರಿಗೆ ನೋಟಿಸ್‌ ನೀಡಲಾಗಿದೆ.ನೋಟಿಸ್‌ಗೆ ಸೂಕ್ತ ಉತ್ತರ ಬರದ ಸಂದರ್ಭದಲ್ಲಿ ಅವುಗಳನ್ನು ಮುಚ್ಚುವ ಕಾರ್ಯವನ್ನು ಇಲಾಖೆ ಮಾಡಲಿದೆ. ಅಲ್ಲದೆ, ಇನ್ನೂ ಕೆಲವು ಕಾರ್ಖಾನೆಗಳ ಕುರಿತು ಕೂಡ ದೂರುಗಳಿದ್ದು, ಅವುಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಟಿ.ಎಚ್. ಪ್ರಕಾಶ,
ಕೆಐಡಿಬಿ ಅಧಿಕಾರಿ ಕೆಐಡಿಬಿ ಬೀದರ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.