ಹುಟ್ಟಿ ಬೆಳೆದ ಹಳ್ಳಿಯತ್ತ ತಿರುಗಿ ನೋಡಿ


Team Udayavani, Nov 18, 2019, 6:40 PM IST

18-November-34

ಬೀದರ: ಭಾರತದ ಆತ್ಮ ಹಳ್ಳಿಯಲ್ಲಿದ್ದು, ಹಳ್ಳಿಯ ವಿಕಾಸ ಆಗದಿದ್ದರೆ ನಮ್ಮ ವಿಕಾಸ ಅಸಾಧ್ಯ. ಆದ್ದರಿಂದ ಇಲ್ಲಿಯ ಜನತೆ ತಮ್ಮ ಗ್ರಾಮವನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳುವಂತೆ ವಿಕಾಸ ಅಕಾಡೆಮಿಯ ಮುಖ್ಯ ಸಂಯೋಜಕರೂ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಕರೆ ನೀಡಿದರು.

ಬೆಂಗಳೂರಿನ ಗಾಂಧಿ  ಭವನದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಹಾಗೂ ವಿಕಾಸ ಅಕಾಡೆಮಿ ಆಶ್ರಯದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಪರಿವಾರ ಮಿಲನ-2019 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದಲ್ಲಿ ಶುದ್ಧವಾದ ಗಾಳಿ, ನೀರು ಹಾಗೂ ಆಹಾರ ಸಿಗದಿದ್ದರೆ ನಮ್ಮ ಜೀವನ ಅಂತ್ಯವಾಗಲಿದೆ. ಇವೆಲ್ಲವೂ ಸಿಗುವುದು ಹಳ್ಳಿಯಿಂದ ಮಾತ್ರ. ಅದಕ್ಕಾಗಿ ನಾವು ಹಳ್ಳಿಗಳ ಉದ್ಧಾರಕ್ಕಾಗಿ ಕೆಲಸ ಮಾಡಬೇಕೆಂದು ಹೇಳಿದರು. ಯುವಜನರು ಸರ್ಕಾರಿ ನೌಕರಿಯ ಹುಚ್ಚು ಬಿಟ್ಟು ತನ್ನ ಕಾಲ ಮೇಲೆ ತಾನು ನಿಲ್ಲುವ ಸಂಕಲ್ಪ ತೊಡಬೇಕು. ಆ ಹಿನ್ನೆಲೆಯಲ್ಲಿ ಹತ್ತು ವರ್ಷಗಳಿಂದ ಸಂಸ್ಥೆ ಹಾಗೂ ವಿಕಾಸ ಅಕಾಡೆಮಿಗಳು ಎಂಟು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿವೆ. ತಾವೆಲ್ಲರು ಹಳ್ಳಿ ಬಿಟ್ಟು ನಗರ ಸೇರಿದ್ದಿರಿ, ಮತ್ತೆ ಹುಟ್ಟಿ ಬೆಳೆದ ಹಳ್ಳಿ ಕಡೆ ತಿರುಗಿ ನೋಡಿ ಎಂದರು.

ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಐಎಎಸ್‌, ಕೆಎಎಸ್‌ ತರಬೇತಿ ಸೇರಿದಂತೆ ಇತರೆ ಯಾವುದೇ ತರಬೇತಿ ಪಡೆಯಲು ಬರುವ ಕಲ್ಯಾಣ ಕರ್ನಾಟಕದ ಜನರಿಗೆ ದೆಹಲಿಯ ಕರ್ನಾಟಕ ಭವನ ಮಾದರಿಯಲ್ಲಿ ಇಲ್ಲಿ ಕಲ್ಯಾಣ ಕರ್ನಾಟಕ ಭವನ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

2025ರೊಳಗೆ ಈ ಭಾಗದಲ್ಲಿ ಸುಮಾರು 10 ಕೋಟಿ ಬೆಲೆ ಬಾಳುವ ಸಾಹಿತ್ಯ ಮಾರಾಟ ಮಾಡಲಾಗುವುದು. 2025ನೇ ವರ್ಷ ಸೇಡಂನಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ನಡೆಯಲಿದ್ದು, ಆ ಉತ್ಸವದಲ್ಲಿ 20 ಲಕ್ಷಕ್ಕೂ ಮೇಲ್ಪಟ್ಟು ಜನರು ಬಂದು ಹೋಗುವ ನಿರೀಕ್ಷೆ ಇದೆ ಎಂದರು.

ಶ್ರೀ ಸದಾಶಿವ ಸ್ವಾಮಿಗಳು ಮಾತನಾಡಿದರು. ಶ್ರೀನಿವಾಸ ತಿವಾರಿ ಸ್ವಾಗತಿಸಿದರು. ರಾಜಕುಮಾರ ರಾಸುರೆ ನಿರೂಪಿಸಿದರು ಅನಿಲ ಹಾರಕುಡೆ ವಂದಿಸಿದರು. ಎಂಎಲ್‌ಸಿ ಶರಣಪ್ಪ ಮಟ್ಟೂರ್‌, ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಪ್ರಮುಖರಾದ ಧನರಾಜ ತಾಡಂಪಳ್ಳಿ, ಶಿವಶರಣಪ್ಪ ವಾಲಿ, ಸೇಡಂನ ಶಿವಯ್ಯ ಮಠಪತಿ, ಕೃಷಿ ಅಧಿಕಾರಿ ಶಾಂತರೆಡ್ಡಿ, ಸರ್ಕಾರದ ನಿವೃತ್ತ ಮುಖ್ಯ ಅಭಿಯಂತರ ಸದಾಶಿವರೆಡ್ಡಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.