ಮಳೆಯಿಲ್ಲದೇ ಕಾರಂಜಾ ಖಾಲಿಖಾಲಿ

ಕುಡಿವ ನೀರಿಗೆ ಜನರು ತತ್ತರಿಸುವ ಸ್ಥಿತಿ•ಒಂದು ವಾರದಲ್ಲಿ ಮಳೆ ಸುರಿಯದಿದ್ದರೆ ಒಣಗಲಿವೆ ಬೆಳೆಗಳು

Team Udayavani, Aug 30, 2019, 10:42 AM IST

30-Agust-4

ಸಾಂದರ್ಭಿಕ ಚಿತ್ರ

ದುರ್ಯೋಧನ ಹೂಗಾರ
ಬೀದರ: ಬೀದರ, ಹುಮನಾಬಾದ, ಚಿಟಗುಪ್ಪ, ಹಳ್ಳಿಖೇಡ(ಬಿ), ಭಾಲ್ಕಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕುಡಿವ ನೀರು ಪೂರೈಸುತ್ತಿರುವ ಕಾರಂಜಾ ಜಲಾಶಯದಲ್ಲಿ ನೀರಿನ ಒಳ ಹರಿವು ಇಲ್ಲದೆ ಬರಡಾಗಿದೆ.

ಸದ್ಯ ಜಿಲ್ಲೆಯಲ್ಲಿ ಶೇ.63 ಮಳೆ ಸುರಿದರೂ ಕಾರಂಜಾ ಜಲಾಶಯಕ್ಕೆ 0.143 ಟಿಎಂಸಿ ನೀರು ಮಾತ್ರ ಒಳಹರಿವು ಬಂದಿದೆ. ಒಟ್ಟಾರೆ 1.262 ಟಿಎಂಸಿ ನೀರು ಸಂಗ್ರಹ ಇದೆ. ಆದರೆ, 0.375 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿಲ್ಲ. ಸದ್ಯ 0.887 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಮುಂದಿನ ಚಳಿಗಾಲದಲ್ಲಿ ಭೀಕರ ಬರಗಾಲ ಸ್ಥಿತಿ ನಿರ್ಮಾಣಗೊಂಡು ಕುಡಿಯುವ ನೀರಿಗೆ ಜನರು ತತ್ತರಿಸುವ ಸ್ಥಿತಿ ಬಂದೊದಗಲಿದೆ. ಇನ್ನೂ ಒಂದು ತಿಂಗಳ ಕಾಲ ಮಳೆಗಾಲ ಇದ್ದು, ಉತ್ತಮ ಮಳೆ ಸುರಿದರೆ ಮಾತ್ರ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪುತ್ತದೆ.

ಬೀದರ, ಭಾಲ್ಕಿ, ಹುಮನಾಬಾದ, ಚಿಟಗುಪ್ಪ, ಹಳ್ಳಿಖೇಡ, ಔರಾದ ಸೇರಿದಂತೆ ವಿವಿಧೆಡೆಗಳಲ್ಲಿ ನೀರಿನ ಆಭಾವ ಹೆಚ್ಚಾಗುತ್ತಿದ್ದು, ಆಯಾ ಭಾಗದಲ್ಲಿನ ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಈ ವರ್ಷ ಸರಾಸರಿ 572 ಮಿ.ಮೀ. ಮಳೆಯ ಪೈಕಿ 362 ಮಿ.ಮೀ ಮಳೆಯಾಗಿದೆ. ಸದ್ಯಕ್ಕೆ ಶೇ. 37 ಮಳೆ ಕೊರತೆ ಜಿಲ್ಲೆಗೆ ಕಾಡುತ್ತಿದೆ. ಶೇ.63 ಮಳೆಯಾಗಿದ್ದರೂ ಕೂಡ ಅಂತರ್ಜಲದಲ್ಲಿ ನೀರಿಲ್ಲ.

ಮುಂದಿನ ಒಂದು ವಾರದಲ್ಲಿ ಮಳೆ ಸುರಿಯದಿದ್ದರೆ ಬೆಳೆಗಳು ಒಣಗುವ ಹಂತ ಶುರುವಾಗುತ್ತದೆ. ಬೆಳೆಗಳಲ್ಲಿ ಕೀಟಬಾಧೆ ಕಂಡು ಬರುತ್ತಿದ್ದು, ರೈತರು ಕಿಟನಾಶಕಗಳು ಬಳಸುತ್ತಿದ್ದಾರೆ. ಸೆಪ್ಟೆಂಬರ್‌ ತಿಂಗಳಲ್ಲಿ 170 ಮಿ.ಮೀ ಮಳೆ ಆಗಬೇಕಿದ್ದು, ಸೂಕ್ತ ಮಳೆ ಆದರೆ ಮಾತ್ರ ರೈತರ ಬೆಳೆಗಳು ಉತ್ತಮವಾಗಿ ಬೆಳೆಯುತ್ತವೆ ಎನ್ನುತ್ತಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ವಿದ್ಯಾನಂದ ಹೇಳುತ್ತಾರೆ.

ಮಳೆಗಾಲ ಮುಗಿಯುತ್ತ ಬಂದರೂ ಸೂಕ್ತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ರೈತರು ಕೂಡ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿನ ಕೊಳವೆಬಾವಿಗಳು ಬೋರಲು ಬಿದ್ದಿವೆ.ಸದ್ಯದ ಸ್ಥಿತಿಯಲ್ಲಿ ಬೆಳೆಗಳು ಉತ್ತಮವಾಗಿದ್ದು, ಮಳೆ ಕೊರತೆ ಮುಂದುವರಿದರೆ ಬೆಳೆಗಳ ಸ್ಥಿತಿಕೂಡ ಹಾಳಾಗುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.

ಜಿಲ್ಲೆಯಲ್ಲಿ ಈವರೆಗೆ ಶೆ. 37 ಮಳೆ ಕೊರತೆ ಇದೆ. ಜಿಲ್ಲೆಯ ವಿವಿಧೆಡೆ ಹೆಸರು ಬೆಳೆಗಳ ಕಟಾವು ನಡೆಯುತ್ತಿದೆ. ಅಲ್ಲದೆ, ರೈತರಿಂದ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕನಿಷ್ಠ 7,050 ರೂ. ಬೆಲೆ ನಿಗದಿ ಮಾಡುವಂತೆ ಹಾಗೂ ಜಿಲ್ಲೆಯಲ್ಲಿ 30 ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
ಸಿ.ವಿದ್ಯಾನಂದ,
 ಕೃಷಿ ಇಲಾಖೆ ಜಂಟಿ ನಿರ್ದೇಶಕ

 

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.