ಯುವಕರು ದೇಶ ರಕ್ಷಣೆಗೆ ಶ್ರಮಿಸಲಿ
ಎಲ್ಲರಿಗೂ ದೊರೆಯದು ದೇಶ ಸೇವೆ ಅವಕಾಶ •ಯುದ್ಧದಲ್ಲಿ ಸೈನಿಕರ ತ್ಯಾಗ ಸ್ಮರಣೀಯ
Team Udayavani, Jul 27, 2019, 3:36 PM IST
ಬೀದರ: ಸಿದ್ಧಾರೂಢ ಸೇವಾ ಸಂಘದಿಂದ ನಡೆದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಬಕ್ಕಪ್ಪ ನಾಯಕ ದಂಪತಿಗಳನ್ನು ಸನ್ಮಾನಿಸಲಾಯಿತು
ಬೀದರ: ಇಂದಿನ ದಿನಗಳಲ್ಲಿ ಯುವಕರಲ್ಲಿ ಸೇನೆ ಬಗ್ಗೆ ಆಸಕ್ತಿ ಕಡಿಮೆ ಆಗುತ್ತಿರುವುದು ಸರಿಯಲ್ಲ. ಯುವಕರು ದೇಶ ಪ್ರೇಮ ಬೆಳೆಸಿಕೊಂಡು, ದೇಶ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸೈನಿಕ ಬಕ್ಕಪ್ಪ ನಾಯಕ ಹೇಳಿದರು.
ನಗರದಲ್ಲಿ ಸಿದ್ಧಾರೂಢ ಸೇವಾ ಸಂಘದಿಂದ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಯುವಕರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಎಲ್ಲರಿಗೂ ದೇಶ ಸೇವೆ ಮಾಡುವ ಅವಕಾಶ ದೊರೆಯುವುದಿಲ್ಲ. ಆದರೆ, ದೇಶ ಸೇವೆ ಮಾಡಲು ಅರ್ಹ ಯುವಕರು ತಪ್ಪದೇ ಅವಕಾಶ ಕಳೆದುಕೊಳ್ಳದೆ ಸೇನೆ ಸೇರಿ ದೇಶ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಗಿಲ್ ಯುದ್ಧ ಗೆಲ್ಲಬೇಕಾದರೆ ದೇಶದ ಸೈನಿಕರು ಅನೇಕ ರೀತಿಯ ನೋವುಗಳನ್ನು ಅನುಭವಿಸಿದ್ದಾರೆ. ಅನೇಕ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅದೇಷ್ಟೊ ಸೈನಿಕರು ಗಾಯಗೊಂಡು ಕೈ ಕಾಲು ಕಳೆದುಕೊಂಡಿದ್ದಾರೆ. ಆದರೂ ಕೂಡ ಇಂದಿಗೂ ಅವರು ದೇಶ ಸೇವೆ ಮಾಡಿರುವ ಬಗ್ಗೆ ಗೌರವ ವ್ಯಕ್ತಪಡಿಸುತ್ತಾರೆ. ಗಡಿಯಲ್ಲಿ ಕೆಲಸ ಮಾಡುವುದು ಎಂದರೆ ಅದು ನಮ್ಮ ಭಾಗ್ಯ ಎಂದು ತಿಳಿಯಬೇಕು ಎಂದು ಹೇಳಿದರು. ಸಿದ್ದು ಬಿರಾದಾರ, ಮಹಾದೇವ ದೇಶಮುಖ, ಸಂಜು ನೇಳಗೆ, ದೀಪಕ ಬೀರಾದಾರ, ಕರುಣಾಕರ, ಮಂಜುಸ್ವಾಮಿ, ಸಂತೋಷ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!