ಬೀದರ ಭಾಷೆಯಲ್ಲಿದೆ ದೇಶಿ ಸೊಗಡು

ಗಡಿನಾಡು ಕನ್ನಡಿಗರ ಸ್ಥಿತಿ-ಗತಿ ವಿಚಾರ ಸಂಕಿರಣ ಕರುನಾಡು ಸಾಹಿತ್ಯ-ಸಾಂಸ್ಕೃತಿಕ ವೇದಿಕೆ ಆಯೋಜನೆ

Team Udayavani, Dec 29, 2019, 1:21 PM IST

29-December-13

ಬೀದರ: ಗಡಿ ಭಾಗದ ಕನ್ನಡ ಭಾಷೆಗೆ ತುಂಬಾ ವೈವಿಧ್ಯತೆಯಿದೆ. ಅದರಲ್ಲಿಯೂ ಬೀದರ ಭಾಷೆಗೆ ದೇಶಿಯತೆಯ ಸೊಗಡು ದಟ್ಟವಾಗಿದೆ. ಆ ಮೂಲಕ ನಿಜವಾದ ಕನ್ನಡ ನೆಲದ ಭಾಷೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘ-ಸಂಸ್ಥೆಗಳ ಪ್ರತಿನಿಧಿ ಸುಬ್ರಹ್ಮಣ್ಯ ಪ್ರಭು ಹೇಳಿದರು.

ನಗರದ ಕೃಷ್ಣಾ ರೆಜೆನ್ಸಿ ಸಭಾಂಗಣದಲ್ಲಿ ಶನಿವಾರ ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಗಡಿನಾಡು ಕನ್ನಡಿಗರ ಸ್ಥಿತಿ-ಗತಿ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಭಾಷೆಯ ಬೆಳವಣಿಗೆಗೆ ಕರ್ನಾಟಕದ ದಕ್ಷಿಣ ಗಡಿಯಲ್ಲಿ ಹೆಚ್ಚು ಸಮಸ್ಯೆಯಿಲ್ಲ. ಉತ್ತರ, ಮಧ್ಯ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಮರಾಠಿ, ಉರ್ದು, ತೆಲುಗು ಹಿಂದಿ, ಮೋಡಿ, ತುಳು, ಕೊಂಕಣಿ, ಮುಂತಾದ ಭಾಷೆಗಳ ಪ್ರಭಾವದ ಮಧ್ಯೆಯೂ ಕನ್ನಡ ಭಾಷೆಯು ನಿರಂತರವಾಗಿ ಉಳಿದು, ಬೆಳೆದುಕೊಂಡು ಬರುತ್ತಿದೆ ಎಂದರು.

ಸಾಹಿತಿ ಪ್ರಕಾಶ ದೇಶಮುಖ “ಗಡಿನಾಡು ಕನ್ನಡಿಗರ ಔದ್ಯೋಗಿಕ ಸ್ಥಿತಿ ಗತಿ’ ಕುರಿತು ಮಾತನಾಡಿ, ಗಡಿ ಭಾಗದ ಜನರಿಗೆ ಬದುಕಿನ ಆಧಾರವೆಂದರೆ ಮೂಲ ಕಸುಬಾಗಿದೆ. ಕೈಗಾರಿಕೆಗಳ ಬೆಳವಣಿಗೆಯಿಂದ ಹಿಂದಿನ ಕಾಲದಿಂದಲೂ ಬೆಳೆದು ಬಂದಿರುವ ಗುಡಿ ಕೈಗಾರಿಕೆಗಳು ಅಳಿವಿನ ಅಂಚಿಗೆ ಬಂದಿವೆ. ಅವುಗಳಿಗೆ ಪುನಃಶ್ಚೇತನ ನೀಡಬೇಕಾದ ಅವಶ್ಯಕತೆಯಿದೆ ಎಂದು ಸಲಹೆ ನೀಡಿದರು.

ಸಾಹಿತಿ ಸುನೀತಾ ಕೂಡ್ಲಿಕರ “ಗಡಿ ನಾಡು ಕನ್ನಡಿಗರ ಸಾಹಿತ್ಯಿಕ-ಸಾಂಸ್ಕೃತಿಕ ಸ್ಥಿತಿಗತಿ’ ಕುರಿತು ಮಾತನಾಡಿ, ಗಡಿ ಭಾಗಗಳು ಸಾಂಸ್ಕೃತಿಕವಾಗಿ ಅಷ್ಟೊಂದು ಪ್ರಗತಿ ಹೊಂದದೆ ಇರಲು ಕಾರಣವೆಂದರೆ ಅವಕಾಶದ ಕೊರತೆಯಾಗಿದೆ. ಸಾಕಷ್ಟು ಸಾಹಿತಿಗಳು, ಕಲಾವಿದರು ಇದ್ದಾಗೂ ಕೂಡ ಅವರನ್ನು ಸರ್ಕಾರ ಹೆಚ್ಚು ಪ್ರಮಾಣದಲ್ಲಿ ಗುರುತಿಸದೇ ನಿರ್ಲಕ್ಷ್ಯಕ್ಕೊಳಗಾಗಿದ್ದು, ನೋವಿನ ಸಂಗತಿಯಾಗಿದೆ. ರಾಜಧಾನಿಯಿಂದ ತುಂಬಾ ದೂರ ಇರುವ ಕಾರಣಕ್ಕೂ ಹೆಚ್ಚು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಅಕಾಡೆಮಿ, ಪ್ರಾ ಧಿಕಾರಗಳಿಗೆ, ಈ ಭಾಗದ ಸಾಹಿತಿ, ಕಲಾವಿದರನ್ನು ನೇಮಿಸುವ ಮೂಲಕ ಗಡಿಭಾಗದಲ್ಲಿ ಕನ್ನಡದ ಕಲರವ ಸದಾ ಕಾಲ ಪಸರಿಸುವಂತೆ ಸಹಕರಿಸಬೇಕಾಗಿದೆ ಎಂದು ಹೇಳಿದರು.

ಭಾರತೀಯ ದಂತ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ| ಡಿ.ಎ. ಪಾಟೀಲ ಮಾತನಾಡಿ, ಕನ್ನಡ ಭಾಷೆಯು ಅನ್ನ ಕೊಡುವ ಭಾಷೆಯಾಗಿ ಪರಿವರ್ತನೆಯಾಗಬೇಕಾಗದದ್ದು ತೀರಾ ಅವಶ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಬೇಕಾದರೆ ಇಂಗ್ಲಿಷ್‌ ಅನಿವಾರ್ಯ ಎಂಬ ತಪ್ಪು ಕಲ್ಪನೆಯಿಂದಾಗಿ ಕನ್ನಡದ ನಿರ್ಲಕ್ಷ್ಯವಾಗುತ್ತಿದೆ. ಇಂಗ್ಲಿಷ್‌ ಒಂದು ಭಾಷೆಯಾಗಿ ಮಾತೃ ಭಾಷೆಯ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಅನೇಕರು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಕಸಾಪ ತಾಲೂಕಾಧ್ಯಕ್ಷ ಎಂ.ಎಸ್‌. ಮನೋಹರ ಮಾತನಾಡಿ, ಬಂಡವಾಳಶಾಹಿಗಳ ಒತ್ತಡದಿದಾಗಿ ಆಳುವ ಸರ್ಕಾರ ನಮ್ಮ ರಾಜ್ಯದಲ್ಲಿ ಇಂಗ್ಲಿಷ್‌ ಮಾಧ್ಯಮಗಳ ಶಾಲೆಗಳನ್ನು ತೆರೆಯಲು ಅನುಮತಿ ನೀಡುತ್ತಿರುವುದು ಖಂಡನೀಯ. ಕನ್ನಡ ಮಾಧ್ಯಮ ಶಾಲೆಗಳು ಉಳಿದಾಗ ಮಾತ್ರ ನಮ್ಮಕನ್ನಡ ಭಾಷೆ, ಸಂಸ್ಕೃತಿ ಉಳಿಯಲು, ಬೆಳೆಯಲು ಸಾಧ್ಯ ಎಂದು ಹೇಳಿದರು.

ವೇದಿಕೆಯ ಗೌರವಾಧ್ಯಕ್ಷ ಡಾ| ಸಂಜೀವಕುಮಾರ ಅತಿವಾಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಡಿ ಭಾಗದಲ್ಲಿ ಕನ್ನಡ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಯ ಯೋಜನೆ ರೂಪಿಸಬೇಕು, ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರಗಳನ್ನು ನೀಡಬೇಕು. ಆಗ ಮಾತ್ರ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಉಳಿಸಲು ಸಾಧ್ಯವಾಗುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ರವೀಂದ್ರ ಬೋರಂಚೆ, ಬಸವರಾಜ ಹಳ್ಳೆ ಮಾತನಾಡಿದರು. ಅಧ್ಯಕ್ಷ ಡಾ| ಶಾಮರಾವ್‌ ನೆಲವಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಯಕರಾದ ಶಂಭುಲಿಂಗ ವಾಲ್ಡೊಡ್ಡಿ, ವೈಜನಾಥ ಬಾಬಶೆಟ್ಟೆ, ಆಶಾರಾಣಿ ನೆಲವಾಡೆಕನ್ನಡ ಗೀತೆಗಳನ್ನು ಹಾಡಿದರು. ಡಾ| ರವೀಂದ್ರ ಲಂಜವಾಡಕರ್‌ ಸ್ವಾಗತಿಸಿದರು. ಸೃಜನ್ಯ ಅತಿವಾಳೆ ನಿರೂಪಿಸಿ ಅಜಿತ ಎನ್‌.ವಂದಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.