‘ಕೈ’ ಕೋಟೆಯಲ್ಲಿ ಕಮಲ ಕಮಾಲ್‌

ಎರಡನೇ ಬಾರಿಗೆ ಕೇಸರಿ ಪಡೆ ಸಂಭ್ರಮಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲಿ ಐತಿಹಾಸಿಕ ಫ‌ಲಿತಾಂಶ

Team Udayavani, May 24, 2019, 10:59 AM IST

Udayavani Kannada Newspaper

ಕಲಬುರಗಿ: ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಕಲಬುರಗಿ ಕ್ಷೇತ್ರದ ಜನತೆ ಐತಿಹಾಸಿಕ ತೀರ್ಪು ಕೊಟ್ಟಿದ್ದಾರೆ. ಸೋಲಿಲ್ಲದ ಸರದಾರ ಖ್ಯಾತಿಯ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ| ಉಮೇಶ ಜಾಧವ್‌ ಸೋಲಿನ ರುಚಿ ತೋರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನ ಭದ್ರಕೋಟೆಯಲ್ಲಿ ಎರಡನೇ ಬಾರಿಗೆ ಕಮಲದ ಬಾವುಟ ಹಾರಿದೆ.

ಕ್ಷೇತ್ರದ ಸಂಕ್ಷಿಪ್ತ ಇತಿಹಾಸ: 1957ರಿಂದ ಇದುವರೆಗೆ ಒಟ್ಟು 18 ಸಾರ್ವತ್ರಿಕ
ಚುನಾವಣೆಗಳನ್ನು ಕಲಬುರಗಿ ಕಂಡಿದೆ. 1957ರಿಂದ 1991ರ ವರೆಗೂ ಕಾಂಗ್ರೆಸ್‌
ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. 1957, 1962 ಮತ್ತು 1967ರಲ್ಲಿ
ಸತತ ಮೂರು ಬಾರಿ ಗೆಲುವು ಕಂಡಿದ್ದ ಮಹದೇವಪ್ಪ ಯಶವಂತರಾಯ ಅವರು ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ಇವರ ದಾಖಲೆಯನ್ನು ಇದುವರೆಗೂ
ಯಾರೂ ಸರಿಗಟ್ಟಲು ಅಥವಾ ಮೀರಿಸಲು ಆಗಿಲ್ಲ.

ಕಾಂಗ್ರೆಸ್‌ ಪಾರುಪತ್ಯಕ್ಕೆ ಮೊದಲ ಬಾರಿಗೆ ಜನತಾ ದಳ ತಡೆಯೊಡ್ಡಿತ್ತು. 1996ರ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಖಮರುಲ್‌ ಇಸ್ಲಾಂ
ಜಯಭೇರಿ ಬಾರಿಸಿದ್ದರು. ನಂತರದ 1998ರ ಚುನಾವಣೆಯಲ್ಲಿ ಬಿಜೆಪಿಯ
ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ
ಕೇಸರಿ ಬಾವುಟವನ್ನು ಹಾರಿಸಿದ್ದರು. ಅಂದು ಜೆಡಿಎಸ್‌ನಿಂದ ಖಮರುಲ್‌
ಇಸ್ಲಾಂ ಮತ್ತು ಕಾಂಗ್ರೆಸ್‌ನಿಂದ ಡಾ| ಬಿ.ಜಿ. ಜವಳಿ ಸ್ಪರ್ಧಿಸಿದ್ದರು. ಖಮರುಲ್‌ ಇಸ್ಲಾಂ 1.97 ಲಕ್ಷ ಮತ ಪಡೆದರೆ, ಡಾ| ಜವಳಿ 1.40 ಲಕ್ಷ ಮತಗಳನ್ನು ಪಡೆದಿದ್ದರು. ಬಸವರಾಜ ಪಾಟೀಲ ಸೇಡಂ 3.28 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತ್ಯಧಿಕ 1.31 ಲಕ್ಷ ಮತಗಳ ಅಂತರದಿಂದ ಗೆಲುವು
ಸಾಧಿಸಿದ್ದರು. ಬಸವರಾಜ ಪಾಟೀಲ ಸೇಡಂ ಅವರ ಜಯ ಕ್ಷೇತ್ರದ ಇತಿಹಾಸದಲ್ಲಿ ದಾಖಲಾಗಿದೆ.

1998ರಲ್ಲಿ ಚುನಾವಣೆಯ ಮರು ವರ್ಷವೇ ನಡೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಕಾಂಗ್ರೆಸ್‌ ಕಲಬುರಗಿಯನ್ನು ಮತ್ತೆ ತಕ್ಕೆಗೆ ತೆಗೆದುಕೊಳ್ಳುವಲ್ಲಿ ಸಫಲವಾಗಿತ್ತು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್‌
ಅಹ್ಮದ್‌ ಸರಡಗಿ ಗೆಲುವು ಸಾಧಿಸಿದ್ದರು. ಅಂದಿನಿಂದ 2019ರವರೆಗೂ ಕಾಂಗ್ರೆಸ್‌ ತನ್ನ ಗೆಲುವಿನ ಓಟವನ್ನು ಮುಂದುವರಿಸಿತ್ತು. ಈ ಗೆಲುವಿನ ಓಟಕ್ಕೆ ಬಿಜೆಪಿ ಬ್ರೇಕ್‌ ಹಾಕಿದೆ. ಅದರಲ್ಲೂ 9 ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಂಸದರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಮಕಾಡೆ ಮಲಗಿಸಿದೆ.

ಮಹದೇವಪ್ಪನವರು ಹ್ಯಾಟ್ರಿಕ್‌ ಗೆಲುವಿನ ನಂತರ ಸಿದ್ದರಾಮರೆಡ್ಡಿ, ಡಾ| ಬಿ.ಜಿ.ಜವಳಿ ಮತ್ತು ಇಕ್ಬಾಲ್‌ ಅಹ್ಮದ್‌ ಸರಡಗಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸತತ ಎರಡು ಗೆಲುವು ಸಾಧಿಸಿದ್ದರು. 1974 ಮತ್ತು 1977ರಲ್ಲಿ ಸಿದ್ದರಾಮರೆಡ್ಡಿ, 1989 ಮತ್ತು 1991ರಲ್ಲಿ ಡಾ| ಜವಳಿ ಹಾಗೂ 1999 ಮತ್ತು 2011ರಲ್ಲಿ ಇಕ್ಬಾಲ್‌ ಅಹ್ಮದ್‌ ಸರಡಗಿ ಜಯ ದಾಖಲಿಸಿದ್ದರು. 2009 ಮತ್ತು 2014ರಲ್ಲಿ
ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದರು.

ಸೋತ ಪ್ರಮುಖರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಸೋಲನ್ನು ಕಂಡಿದ್ದಾರೆ. 1971ರ ಸಾರ್ವತ್ರಿಕ
ಚುನಾವಣೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರು ಸ್ಪರ್ಧಿಸಿ ಸೋಲು ಕಂಡಿದ್ದರು. ವೈಜನಾಥ ಪಾಟೀಲರು 1980,
1991ರಲ್ಲಿ ಸೋಲು ಅನುಭವಿಸಿದ್ದರು. 1998ರಲ್ಲಿ ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮುನ್ನ 1991ರಲ್ಲಿ ಸೋತಿದ್ದರು. ಅಲ್ಲದೇ, 1999
ಹಾಗೂ 2004ರ ಚುನಾವಣೆಯಲ್ಲೂ ಬಸವರಾಜ ಪಾಟೀಲ ಸೇಡಂ ಪರಾಭವಗೊಂಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಕೂಡ ಸೋತ ಗಣ್ಯರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.