38 ಸಾವಿರ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ
•ಜಿಲ್ಲೆಯಲ್ಲಿ ತೀರಾ ತೂಕ ಕಡಿಮೆಯಿರುವ ಮಕ್ಕಳಿದ್ದಾರೆ 54 •ಹುಡುಕಬೇಕಿದೆ ಅಪೌಷ್ಟಿಕತೆಗೆ ಕಾರಣ
Team Udayavani, May 31, 2019, 9:52 AM IST
ಸಾಂದರ್ಭಿಕ ಚಿತ್ರ
ಬೀದರ: ಜಿಲ್ಲೆಯಲ್ಲಿ 38 ಸಾವಿರ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅಧಿಕಾರಿಗಳು ಅಪೌಷ್ಟಿಕತೆ ನಿವಾರಣೆಗೆ ಶ್ರಮಿಸಬೇಕಿದೆ.
ಸದ್ಯ ಜಿಲ್ಲೆಯಲ್ಲಿ ತೀರಾ ತೂಕ ಕಡಿಮೆ ಹೊಂದಿದ 54 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಯಾವ ಕಾರಣಕ್ಕೆ ಜಿಲ್ಲೆಯ ಮಕ್ಕಳು ಅಪೌಷ್ಟಿಕತೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ನಿವಾರಣೆಗೆ ಮುಂದಾಗಬೇಕಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ರೋಟಿನ್ ಹಾಗೂ ನ್ಯೂಟ್ರಿಮಿಕ್ಸ್ ಆಹಾರ ವಿತರಿಸಲಾಗುತ್ತಿದೆ. ಆದರೆ, ವಿತರಿಸುತ್ತಿರುವ ಆಹಾರ ಪದಾರ್ಥಗಳನ್ನು ಎಷ್ಟು ಮಕ್ಕಳು ಸೇವಿಸುತ್ತಿದ್ದಾರೆ. ಸೇವಿಸಿದರೂ ಅಪೌಷ್ಟಿಕತೆ ಎದುರಾಗುವುದು ಯಾಕೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ಅಲ್ಲದೆ, ಆಯಾ ತಾಲೂಕುಗಳಲ್ಲಿ ವಿತರಿಸುತ್ತಿರುವ ಆಹಾರ ಪ್ಯಾಕ್ಗಳ ಗುಣಮಟ್ಟ ಪರಿಶೀಲನೆ ನಡೆಸಬೇಕಿದೆ. ನಿಗದಿತ ಪ್ರಮಾಣದ ಪ್ರೋಟಿನ್, ವಿಟಾಮಿನ್, ಕ್ಯಾಲೋರಿ ಇದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವುದು ಮುಖ್ಯವಾಗಿದೆ. ಆರೋಗ್ಯ ಅಧಿಕಾರಿಗಳ ತಂಡ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಯಾವ ಕಾರಣಕ್ಕೆ ಮಕ್ಕಳು ಅಪೌಷ್ಟಿಕತೆಗೆ ಒಳಗಾಗುತ್ತಿದ್ದಾರೆ. ಯಾವ ಕೊರತೆಗಳು ಮಕ್ಕಳನ್ನು ಕಾಡುತ್ತಿದೆ ಎಂಬುದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಿದರೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.
ಸದ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಕಳೆದ ಕೆಲ ತಿಂಗಳಿಂದ ಅಂಗನವಾಡಿ ಕೇಂದ್ರಗಳ ಆಹಾರ ಪದಾರ್ಥಗಳ ಗುಣಮಟ್ಟ ಣಕುರಿತು ಸರ್ಕಾರಿ ಆಹಾರ ತಪಾಸಣೆ ಕೇಂದ್ರಕ್ಕೆ ಮಾದರಿ ಕಳುಹಿಸಿದ್ದಾರೆ.
ಜಿಲ್ಲೆಯಲ್ಲಿನ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಇಲಾಖೆ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಯಾವ ಕಾರಣಕ್ಕೆ ಅಪೌಷ್ಟಿಕತೆ ಕಂಡು ಬರುತ್ತಿದೆ ಎಂಬುದನ್ನು ತಿಳಿಯುವ ಕಾರ್ಯ ಮಾಡಲಾಗುತ್ತಿದೆ.
•ಮಂಜುನಾಥ, ಡಿ.ಡಿ.,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಪ್ರತಿವರ್ಷ ಜಿಲ್ಲೆಯ ಎಲ್ಲಾ ಎಂಎಸ್ಪಿಟಿಸಿ ಕೇಂದ್ರಗಳ ಆಹಾರ ತಪಾಸಿಸಲಾಗುತ್ತಿದೆ. ಮಕ್ಕಳ ಅಪೌಷ್ಟಿಕತೆಗೆ ಅನೇಕ ಕಾರಣಗಳು ಇರುತ್ತವೆ. ಯಾವ ಕಾರಣಕ್ಕೆ ಮಕ್ಕಳಿಗೆ ಸಮಸ್ಯೆ ಇದೆ ಎಂದು ತಿಳಿದು ಅಂತಹ ಆಹಾರ ಪದಾರ್ಥಗಳ ವಿತರಣೆಗೆ ಮುಂದಾಗುವ ಕೆಲಸವಾಗಬೇಕು. ಇದೀಗ ಆಹಾರ ಪದಾರ್ಥ ಬೇರೆಕಡೆಗೆ ಪರಿಶೀಲನೆಗೆ ಕಳುಹಿಸಲಾಗುತ್ತಿದೆ.
•ಡಾ|ಶಿವಶಂಕರ,
ಆಹಾರ ಸುರಕ್ಷತಾ ಅಧಿಕಾರಿಗಳು
ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ