ಮೂಲೆ ಸೇರಿದ ಎಂಆರ್‌ಐ ಸ್ಕ್ಯಾನ್‌ಯಂತ್ರ!

ಬ್ರಿಮ್ಸ್‌ ಅಧಿ ಕಾರಿಗಳ ನಿಷ್ಕಾಳಜಿನಿಷ್ಕ್ರಿಯವಾದ 8 ಕೋಟಿ ರೂ. ವೆಚ್ಚದ ಯಂತ್ರ

Team Udayavani, Oct 18, 2019, 12:04 PM IST

18-October-6

„ಶಶಿಕಾಂತ ಬಂಬುಳಗೆ
ಬೀದರ: ರೋಗಗಳ ಕ್ಲಿಷ್ಟಕರ ಪರಿಸ್ಥಿತಿಯನ್ನು ಪತ್ತೆ ಹಚ್ಚಲು ಅನುಕೂಲವಾಗುವಂತೆ ಬೀದರ ಬ್ರಿಮ್ಸ್‌ ಆಸ್ಪತ್ರೆಗೆ ಸರ್ಕಾರ ಎಂಆರ್‌ಐ ಸ್ಕ್ಯಾನ್
ಯಂತ್ರ ಒದಗಿಸಿದೆ. ಆದರೆ, ಯಂತ್ರದ ಸದ್ಬಳಕೆ ಮಾಡಿಕೊಳ್ಳಬೇಕಾದ ಬ್ರಿಮ್ಸ್‌ ಅಧಿಕಾರಿಗಳ ನಿಷ್ಕಾಳಜಿತನದಿಂದಾಗಿ ರೋಗಿಗಳಿಗೆ ವರದಾನ ಆಗಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಎಂಆರ್‌ಐ ಯಂತ್ರ ಧೂಳು ತಿನ್ನುತ್ತಿದೆ.

ಸರ್ಕಾರ ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಇದಕ್ಕಾಗಿ ಕೋಟಿ ಕೋಟಿ ರೂ. ಖರ್ಚು ಮಾಡಿ ಅಗತ್ಯ ಯಂತ್ರೋಪಕರಣಗಳನ್ನು ಪೂರೈಸುತ್ತಿದೆ. ಅದೇ ರೀತಿ ಬ್ರಿಮ್ಸ್‌ ಆಸ್ಪತ್ರೆಗೆ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರ ಒದಗಿಸಿದೆ. ಆದರೆ, ತಾಂತ್ರಿಕ ಸಮಸ್ಯೆಗಳ ಕಾರಣಕ್ಕಾಗಿ ಅಧಿಕಾರಿಗಳು ಯಂತ್ರೋಪಕರಣಗಳನ್ನು ಮೂಲೆ ಸೇರುವಂತೆ ಮಾಡುತ್ತಿರುವುದು ವಿಪರ್ಯಾಸ.

ಶಸ್ತ್ರಚಿಕಿತ್ಸೆ ಇಲ್ಲದೆ ದೇಹ ಅಥವಾ ಮೆದುಳಿನ ಒಳಭಾಗದ ಸಮಸ್ಯೆಗಳನ್ನು ಪತ್ತೆಹಚ್ಚಲು ಎಂಆರ್‌ಐ ಯಂತ್ರ ಬಹುಮುಖ್ಯ ಪಾತ್ರ ವಹಿಸುತ್ತದೆ. ಅತಿ ದುಬಾರಿ ವೆಚ್ಚದ ಪರೀಕ್ಷೆ ಆಗಿರುವುದರಿಂದ ಇದರ ಸೇವೆ ಬಡ ರೋಗಿಗಳ ಪಾಲಿಗೆ ಗಗನ ಕುಸುಮ ಆಗಿದೆ. ಹಾಗಾಗಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಕೆಲ ವರ್ಷಗಳ ಹಿಂದೆ ಬ್ರಿಮ್ಸ್‌ ಆಸ್ಪತ್ರೆಗೆ ಯಂತ್ರವನ್ನು ಮಂಜೂರು ಮಾಡಿದೆ. ಎಂಆರ್‌ಐ ಘಟಕ ಸ್ಥಾಪಿಸಿ ಹಲವು ತಿಂಗಳುಗಳು ಕಳೆದರೂ ವಿದ್ಯುತ್‌ ಸಂಪರ್ಕದ ಕೊರತೆಯಿಂದಾಗಿ ರೋಗಿಗಳಿಗೆ ಸೇವೆ ಸಿಗದಂತಾಗಿದೆ.

ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಿ 8 ಕೋಟಿ ರೂ. ವೆಚ್ಚದಲ್ಲಿ ಫಿಲಿಫ್ಸ್ ಕಂಪನಿಯ ಎಂಆರ್‌ಐ ಸ್ಕ್ಯಾನ್‌ ಯಂತ್ರಗಳ ಅಳವಡಿಕೆಗಾಗಿ ಸಿವಿಲ್‌ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಎಕ್ಸ್‌-ರೇ ಘಟಕದ ಟೆಕ್ನಿಷಿಯನ್‌, ವೈದ್ಯರು, ಸ್ಟಾಫ್‌ ನರ್ಸ್‌ಗಳನ್ನೇ ಸದ್ಯಕ್ಕೆ ಎಂಆರ್‌ಐ ಸ್ಕ್ಯಾನಿಂಗ್‌ ಗೆ ಬಳಸಿಕೊಳ್ಳಲು ಉದ್ದೇಶಸಲಾಗಿದೆ. ಆದರೆ, ಯಂತ್ರ ಕಾರ್ಯಾರಂಭಕ್ಕೆ ವಿದ್ಯುತ್‌ ಸಂಪರ್ಕ ಕೊಡದೇ ಇರುವುದು ಸೇವೆ ಅಲಭ್ಯಕ್ಕೆ ಕಾರಣವಾಗಿದೆ.

ಬೀದರ ಜಿಲ್ಲಾ ಆಸ್ಪತ್ರೆಯೊಂದರಲ್ಲೇ ಪ್ರತಿ ನಿತ್ಯ ಕನಿಷ್ಠ 30 ಜನ ರೋಗಿಗಳಿಗೆ ಎಂಆರ್‌ಐ ಸ್ಕ್ಯಾನಿಂಗ್‌ನ ಅಗತ್ಯವಿದೆ. ಆದರೆ, ಬ್ರಿಮ್ಸ್‌ನಲ್ಲಿ ಎಂಆರ್‌ಐ ಯಂತ್ರ
ಇದ್ದರೂ ಸಹ ಅಪ್ರಯೋಕ ಆಗಿದ್ದು, ರೋಗಿಗಳು ಸ್ಕ್ಯಾನಿಂಗ್‌ ಮಾಡಿಸುವ ಸಲುವಾಗಿ ಖಾಸಗಿ ಸ್ಕ್ಯಾನ್‌ ಸೆಂಟರ್‌ಗಳ ಬಾಗಿಲು ತಟ್ಟಬೇಕಾಗಿದೆ. ಪ್ರತಿ ಎಂಆರ್‌ ಐಗೆ 3ರಿಂದ 5 ಸಾವಿರ ರೂ. ತಗಲುತ್ತದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಲ್ಲಿ ಬಡವರ ಸಂಖ್ಯೆಯೇ ಹೆಚ್ಚಾಗಿರುವುದರಿಂದ ದುಬಾರಿ ಬೆಲೆಯ ಪರೀಕ್ಷೆ ಅವರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸುತ್ತಿದೆ.

ಇತ್ತೀಚೆಗೆ ಸಂಸದ ಭಗವಂತ ಖೂಬಾ ಆಸ್ಪತ್ರೆಗೆ ಭೇಟಿ ನೀಡಿ ಎಂಆರ್‌ಐ ಸೇವೆ ಆರಂಭಕ್ಕೆ ಕ್ರಮ ವಹಿಸುವಂತೆ ಖಡಕ್‌ ಎಚ್ಚರಿಕೆ ನೀಡಿದ್ದರೂ ಸಹ ಈವರೆಗೆ ಯಾವುದೇ ಕ್ರಮ ಆಗಿಲ್ಲ. ಈಗಾಗಲಾದರೂ ಜಿಲ್ಲಾಡಳಿತ ಬ್ರಿಮ್ಸ್‌ನತ್ತ ಗಮನ ಹರಿಸಿ ಎಂಆರ್‌ಐ ಘಟಕದಲ್ಲಿನ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ ಬಡ ರೋಗಿಗಳಿಗೆ ಕೈಗುಟುವ ದರದಲ್ಲಿ ಯಂತ್ರದ ಸೌಲಭ್ಯ ದೊರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.