80 ವರ್ಷದವರಿಗೆ ಶೇ.20 ಹೆಚ್ಚುವರಿ ಪಿಂಚಣಿಗೆ ಆದೇಶ

ವಿವಿಧ ಸಮಸ್ಯೆಗಳನ್ನು ತೋಡಿಕೊಂಡ ಪಿಂಚಣಿದಾರರು

Team Udayavani, Aug 28, 2019, 5:13 PM IST

28-Agust-46

ಬೀದರ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಅದಾಲತ್‌ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿದರು.

ಬೀದರ: 80 ವರ್ಷದ ಪಿಂಚಣಿದಾರರಿಗೆ ಶೇ.20ರಷ್ಟು ಹೆಚ್ಚುವರಿ ಪಿಂಚಣಿ ನೀಡಲು ಬ್ಯಾಂಕ್‌ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಅದಾಲತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳೇ ಸುತ್ತೋಲೆ ಪ್ರಕಾರ ಹುಟ್ಟಿದ ದಿನಾಂಕ, ಮತದಾರರ ಗುರುತಿನ ಚೀಟಿ ನೀಡಬೇಕು. ಒಂದೇ ಬಾರಿ ಎಲ್ಲಾ ದಾಖಲೆಗಳನ್ನು ಪಡೆದುಕೊಂಡು ವಯೋಮಿತಿ ಆಧಾರದ ಮೇಲೆ ಪ್ರತಿ ವರ್ಷ ನಿಗದಿಯಂತೆ ಪಿಂಚಣಿ ನೀಡಬೇಕು ಎಂದು ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

ಪಿಂಚಣಿದಾರ ಪ್ರಭುಲಿಂಗ ಸ್ವಾಮಿ ಮಾತನಾಡಿ, ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಪಿಂಚಣಿ ಪಡೆಯುತ್ತಿದ್ದು, ಲೈಫ್‌ ಸರ್ಟಿಫಿಕೇಟ್ ನವೆಂಬರ್‌ನಲ್ಲಿ ನೀಡಬೇಕಿತ್ತು. ನೆನಪಿನ ಶಕ್ತಿ ಕಡಿಮೆಯಾಗಿರುವ ಪ್ರಯುಕ್ತ ಈ ಪ್ರಮಾಣ ಪತ್ರವನ್ನು ನೀಡಿಲ್ಲ. ಅದಕ್ಕೆ ನನ್ನ ಪಿಂಚಣಿ ಸ್ಥಗಿತಗೊಂಡಿದೆ ಎಂದು ತಮ್ಮ ಸಮಸ್ಯೆ ಹೇಳಿಕೊಂಡರು.

ಈಗಾಗಲೇ ಪಿಂಚಣಿ ಪಡೆಯುತ್ತಿದ್ದೇನೆ. ಆದರೆ 2015ರ ಅಕ್ಟೋಬರ್‌ 9ರಿಂದ 2016ರ ಮೇ 24ರ ವರೆಗೆ ಕಡ್ಡಾಯ ನಿರೀಕ್ಷಣಾ ಅವಧಿ ಸಕ್ರಮಗೊಂಡಿಲ್ಲ ಎಂದು ಶಿವರಾಜ ಸ್ವಾಮಿ ತಿಳಿಸಿದರು.

ಪಂಢರಿನಾಥ ಪೊಲೀಸ್‌ ಪಾಟೀಲ್ ಮಾತನಾಡಿ, ಅಂಗವಿಕಲ ಭತ್ಯೆ ಪಿಂಚಣಿಯಲ್ಲಿ ಸೇರಿಸಿ ಮಂಜೂರು ಮಾಡಬೇಕು ಎಂದು ಕೋರಿದರು. ಶಿವಲಿಂಗಪ್ಪಾ ಬಿರಾದಾರ ಅವರು, ಪಿಪಿಒ ಆದೇಶದಲ್ಲಿ ಹುಟ್ಟಿದ ದಿನಾಂಕ, ನಿವೃತ್ತಿ ದಿನಾಂಕ ಮತ್ತು ಪಿಪಿಒ ಸಂಖ್ಯೆ ತಪ್ಪಾಗಿರುತ್ತದೆ. 1993ರ ಜುಲೈ 1ಕ್ಕೂ ಮುಂಚೆ ನಿವೃತ್ತಿ ಹೊಂದಿದ್ದು, 85 ವರ್ಷದ ಸೌಲಭ್ಯ ನೀಡಿರುವುದಿಲ್ಲ ಎಂಬ ಅಹವಾಲು ಸಲ್ಲಿಸಿದರು.

ಜಿಲ್ಲಾ ಖಜಾನೆ ಅಧಿಕಾರಿ ಅಶೋಕ ವಡಗಾವೆ ಮಾತನಾಡಿ, ಪಿಂಚಣಿ ಪುಸ್ತಕ ಕಳೆದು ಹೋಗಿದೆ ಕೊಡಿ ಎಂದು ಕೆಲವರು ಖಜಾನೆಗೆ ಬಂದು ಕೇಳುತ್ತಾರೆ. ಆದರೆ ಈ ಪುಸ್ತಕದ ಎರಡು ಪ್ರತಿಗಳು ಖಜಾನೆ ಮತ್ತು ಬ್ಯಾಂಕಿನಲ್ಲಿ ಮಾತ್ರ ಇರುತ್ತವೆ. ಆದ್ದರಿಂದ ತಾವೇ ಪಿಂಚಣಿದಾರರು ಎಂದು ದೃಢೀಕರಿಸಿ ಅದರ ನಕಲು ಪ್ರತಿಯನ್ನು ಒಳಗೊಂಡ ಪ್ರಸ್ತಾವನೆಯನ್ನು ಖಜಾನೆ ಇಲಾಖೆಗೆ ನೀಡಿದರೆ ಅದನ್ನು ಎಜಿ ಅವರಿಗೆ ಕಳುಹಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಿಪಿಎಫ್‌ ಪಿಂಚಣಿ ಹೆಚ್ಚಿಸಬೇಕು. ತಾತ್ಕಾಲಿಕ ಪಿಂಚಣಿ ನೀಡಬೇಕು. ಪರಿಷ್ಕೃತ ಪಿಂಚಣಿ ಬಾಕಿ ಮಂಜೂರು ಮಾಡಬೇಕು. ಸ್ವಯಂ ಚಾಲಿತ ವೇತನ ಮಂಜೂರು ಮಾಡಬೇಕು. 6ನೇ ವೇತನ ಆಯೋಗದಲ್ಲಿ ಆದ ತಾರತಮ್ಯ ಸರಿಪಡಿಸಬೇಕು. ಪಿಂಚಣಿಯಲ್ಲಿ ಕಡಿತಗೊಳಿಸಿರುವುದು ಹೀಗೆ ನಾನಾ ರೀತಿಯ ಅಹವಾಲುಗಳು ಸಲ್ಲಿಕೆಯಾದವು.

ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಆನಂದ ಅಸನೂರಕರ್‌, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಬಿ.ಎಂ.ಕಮತಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಶಿವಕುಮಾರ ಸ್ವಾಮಿ, ನಿವೃತ್ತ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಎಸ್‌.ಬಿ. ಕುಚಬಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.