ಬೀದರ-ನಾಂದೇಡ ಹೊಸ ರೈಲು ಮಾರ್ಗ ಆರಂಭಿಸಿ
ಬೀದರ-ಹುಬ್ಬಳ್ಳಿ ಹೊಸ ರೈಲು ಸಂಚಾರಕ್ಕೆ ಪ್ರಸ್ತಾವನೆ
Team Udayavani, Sep 27, 2019, 4:03 PM IST
ಬೀದರ: ಬೀದರ-ನಾಂದೇಡ ಮಧ್ಯೆ ಹೊಸ ರೈಲು
ಮಾರ್ಗ ಕಾರ್ಯಾರಂಭಕ್ಕೆ ಅಧಿಕಾರಿಗಳು ಕ್ರಮ
ವಹಿಸಬೇಕು ಎಂದು ಸಂಸದ ಭಗವಂತ ಖೂಬಾ
ಸೂಚಿಸಿದರು.
ಸಿಕಂದ್ರಾಬಾದನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ಸಭೆಯಲ್ಲಿ ಮಾತನಾಡಿದ ಅವರು, ಬೀದರ ಮೂರು ರಾಜ್ಯಗಳಿಗೆ ಸಂಪರ್ಕ ಸಾಧಿಸುವ ಜಿಲ್ಲೆಯಾಗಿದೆ. ಎಲ್ಲ ರೈಲ್ವೆಗಳು ಬೀದರ ನಗರದಿಂದ ತೆರಳುತ್ತವೆ. ಆದ್ದರಿಂದ ಈ ಭಾಗದ ಜನರಿಗೆ ಹೆಚ್ಚಿನ ಅನೂಕುಲಕರವಾಗಲಿದೆ.
ಹಾಗಾಗಿ ಬೀದರ-ನಾಂದೇಡ ಹೊಸ ರೈಲು ಮಾರ್ಗಕ್ಕೆ ಎರಡು ಸಾವಿರ ಕೋಟಿ ರೂ. ಯೋಜನೆ ಇದ್ದು, ಈ ಬಗ್ಗೆ ಅಧಿಕಾರಿಗಳು ಕಾಮಗಾರಿ ಆರಂಭಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.
ಬೀದರ-ಹುಬ್ಬಳ್ಳಿ ಮಧ್ಯೆ ಹೊಸ ರೈಲು ಸಂಚಾರ ಪ್ರಾರಂಭಿಸುವ ಕುರಿತು ಚರ್ಚೆ ನಡೆದಿದೆ. ಬೀದರ ವಾಯಾ ಸಿಕಂದ್ರಾಬಾದ ಮೂಲಕ ಹುಬ್ಬಳ್ಳಿಗೆ ತೆರಳುವ ಹೊಸ ರೈಲು ಪ್ರಾರಂಭಕ್ಕೆ ಅಧಿಕಾರಿಗಳು ಹೆಚ್ಚಿನ ಮುತ್ತುವರ್ಜಿ ವಹಿಸಬೇಕು ಎಂದು ಸಂಸದ ಖೂಬಾ ಸೂಚಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಈ ಯೋಜನೆ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಲಬುರಗಿ ಮಾರ್ಗವಾಗಿ ಬೀದರ-ಯಶವಂತಪುರ ರೈಲನ್ನು ಕೂಡಲೇ ಆರಂಭಿಸಲು ಅಧಿಕಾರಿಗಳು ಮುಂದಾಗಬೇಕು. ಈ ರೈಲು ಕಳೆದ ಲೋಕಸಭೆ ಚುನಾವಣೆ ಹಾಗೂ ಗಣೇಶ ಹಬ್ಬದಲ್ಲಿ ಯಶಸ್ವಿಯಾಗಿ ಸಂಚಾರ ನಡೆಸಿದೆ. ಯಾವ ಕಾರಣಕ್ಕೆ ಈ ರೈಲು ಸಂಚಾರಕ್ಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಕೆಲ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿವೆ. ಕೂಡಲೇ ಎಲ್ಲ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಬೀದರ-ಯಶವಂತಪುರ ರೈಲು ಸಂಚಾರ ಆರಂಭ ಆಗುವ ನಿಟ್ಟಿನಲ್ಲಿ ಕ್ರಮ ವಹಿಸಿ ಈ ಕುರಿತು ವರದಿ ನೀಡುವಂತೆ ಸಂಸದ ಖೂಬಾ ಅಧಿಕಾರಿಗಳಿಗೆ ಸೂಚಿಸಿದರು.
ಬೀದರ ಜಿಲ್ಲೆಯ ವಿವಿಧಡೆ ರೈಲ್ವೆ ಸೇತುವೆಗಳ ಕೆಳಗೆ ಮಳೆ ನೀರಿನ ಸಮಸ್ಯೆ ಉಂಟಾಗುತ್ತಿದೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಜನರಿಗೆ ಆಗುತ್ತಿರುವ ಸಮಸ್ಯೆಗೆ ಬಗೆಹರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕಲಬುರಗಿ ಸಂಸದ ಡಾ| ಉಮೇಶ ಜಾಧವ ಸೇರಿದಂತೆ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ