ಬೆಳೆ ಸಾಲ ವಿತರಣೆಗೆ ಒತ್ತು ನೀಡಿ
ಶೇ.70 ಗುರಿ ಸಾಧನೆ ಮಾಡಲು ಪ್ರಯತ್ನಿಸುವಂತೆ ಸೂಚನೆ
Team Udayavani, Jul 11, 2019, 10:30 AM IST
ಬೀದರ: ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ) ಮತ್ತು ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ (ಡಿಎಲ್ಆರ್ಸಿ) ಸಭೆಯಲ್ಲಿ ಜಿಪಂ ಸಿಇಒ ಮಹಾಂತೇಶ ಬೀಳಗಿ ಮಾತನಾಡಿದರು.
ಬೀದರ: ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಸಮರ್ಪಕ ರೀತಿಯಲ್ಲಿ ಬೆಳೆ ಸಾಲ ವಿತರಣೆಗೆ ಒತ್ತು ಕೊಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಖ ಅಧಿಕಾರಿ ಮಹಾಂತೇಶ ಬೀಳಗಿ ವಿವಿಧ ಬ್ಯಾಂಕ್ಗಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ) ಮತ್ತು ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ (ಡಿಎಲ್ಆರ್ಸಿ) ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳೆ ಸಾಲ ಗುರಿ ಸರಿಯಾದ ರೀತಿಯಲ್ಲಿ ತಲುಪಲು ಆಗಿಲ್ಲ. ಇಲ್ಲಿವರೆಗೆ ಅರ್ಧ ಮಾತ್ರ ಸಾಧನೆಯಾಗಿದೆ. ಮುಂದಿನ ವರ್ಷ ಶೇ.70ರಷ್ಟು ಗುರಿ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಬೆಳೆ ಸಾಲ ಹೆಚ್ಚಿಗೆ ಮಾಡಿ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವ ರೈತರಿಗೆ ಬ್ಯಾಂಕ್ಗಳಿಂದ ಸರಿಯಾದ ರೀತಿಯಲ್ಲಿ ಸಾಲ ವಿತರಣೆಯಾಗಬೇಕು. ಈ ನಿಟ್ಟಿನಲ್ಲಿ ಸಾಲ ಕೊಡಿ ಎಂದು ಕೇಳಿ ಬ್ಯಾಂಕ್ಗೆ ಬರುವ ರೈತರಿಗೆ ಸರಿಯಾದ ಮಾಹಿತಿ ನೀಡಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.
ಬೆಳೆಸಾಲ ಮನ್ನಾ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ಒಟ್ಟು 53,500 ರೈತರು ಅರ್ಹ ಫಲಾನುಭವಿಗಳಾಗಿದ್ದಾರೆ. ಈ ಪೈಕಿ ಇಲ್ಲಿವರೆಗೆ 11,785 ರೈತರ 43.20 ಕೋಟಿ ರೂ.ನಷ್ಟು ಸಾಲ ಮನ್ನಾ ಮಾಡಲಾಗಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಎಂ. ಕಮತಗಿ ಸಭೆಗೆ ಮಾಹಿತಿ ನೀಡಿದರು.
ಡಿಸಿಸಿ ಬ್ಯಾಂಕ್ ಬೀದರ, ಶಾರದಾ ಆರ್ಸೆಟಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆಯವರು ನಿರುದ್ಯೋಗಿಗಳಿಗೆ ಹಲವಾರು ತರಬೇತಿ ಅವಕಾಶ ಕಲ್ಪಿಸುತ್ತಾರೆ. ಆ ತರಬೇತಿಯನ್ನು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡುತ್ತಾರೆ. ನಿಜಕ್ಕೂ ಇದು ಒಳ್ಳೆಯ ಪ್ರಯತ್ನ. ಈ ವಿಷಯಕ್ಕೆ ವಾರ್ತಾ ಇಲಾಖೆಯಿಂದ ಉತ್ತಮ ರೀತಿಯಲ್ಲಿ ಪ್ರಚಾರ ಆಗಬೇಕು. ಅವರು ನೀಡುವ ತರಬೇತಿ ಮಾಹಿತಿ ಜಿಲ್ಲೆಯ ನಿರುದ್ಯೋಗಿಗಳಿಗೆ ತಲುಪುವಂತಾಗಬೇಕು ಎಂದು ಸಿಇಒ ವಾರ್ತಾಧಿಕಾರಿಗೆ ಸೂಚಿಸಿದರು.
ಆರ್ಬಿಐ ಬೆಂಗಳೂರಿನ ಬಾಲಚಂದ್ರ ಎ.ವಿ., ನಬಾರ್ಡ್ನ ರಾಮರಾವ್ ಏಕಬೋಟೆ, ಕೃಷ್ಣ ಪ್ರಗತಿ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಸಾಹೇಬಗೌಡ ಮೂಲಿಮನಿ, ಬೀದರ ಡಿಸಿಸಿ ಬ್ಯಾಂಕ್ ಸಿಇಒ ಮಲ್ಲಿಕಾರ್ಜುನ ಮಹಾಜನ್ ಹಾಗೂ ವಿವಿಧ ಬ್ಯಾಂಕ್ಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು