ಬೆಂಬಲ ಬೆಲೆ ಸಮಸ್ಯೆ ನಿವಾರಣೆಗೆ ಯತ್ನ
'ಯುವಜನ, ಮಹಿಳಾ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಸ್ಥೆಗಳು' ಕಾರ್ಯಕ್ರಮ
Team Udayavani, Nov 20, 2019, 4:37 PM IST
ಬೀದರ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರಿಗೆ ಸ್ವಲ್ಪಮಟ್ಟಿಗೆ ಇದರಿಂದ ತೊಂದರೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಇಂತಹ ತೊಂದರೆಗಳನ್ನು ನಿವಾರಣೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಎಪಿಎಂಸಿ ಅಧ್ಯಕ್ಷ ಅನೀಲಕುಮಾರ ಪನ್ನಾಳೆ ಹೇಳಿದರು.
ನಗರದ ಜಿಲ್ಲಾ ತೋಟಗಾರಿಕೆ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘದಲ್ಲಿ ಸಹಕಾರ ಸಪ್ತಾಹದ 6ನೇ ದಿನ ಹಮ್ಮಿಕೊಂಡಿದ್ದ “ಯುವಜನ, ಮಹಿಳಾ ಮತ್ತು ಅಬಲವರ್ಗಕ್ಕಾಗಿ ಸಹಕಾರ ಸಂಸ್ಥೆಗಳು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರಿಯಾದ ಮಾರ್ಗವನ್ನು ಹುಡುಕಿ ರೈತರಿಗೆ ಸಹಾಯಮಾಡಲು ಪ್ರಯತ್ನಿಸುತ್ತೇವೆ ಎಂದರು.
ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ, ಜವಾಹರಲಾಲ್ ನೆಹರು ಅವರು ಸಹಕಾರ ಚಳುವಳಿಯ ಬೆಳವಣಿಗೆಗೆ ನೀಡಿದ ಪ್ರೋತ್ಸಾಹಕ್ಕಾಗಿ ಅವರಿಗೆ ಕೃತಜ್ಞತೆ ಅರ್ಪಿಸುವ ಸಂಕೇತವಾಗಿ ಅವರು ಜನ್ಮದಿನದಂದು ಸಪ್ತಾಹದ ಉದ್ಘಾಟನೆ ಮಾಡಲಾಗುತ್ತಿದೆ. ಸ್ವಸಹಾಯ ಗುಂಪಿನ ಮೂಲಕ ಎಲ್ಲ ವರ್ಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳುಸುವುದು ಮತ್ತು ನಿರುದ್ಯೋಗಿಗಳಿಗೆ, ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಮಾಡಿಕೊಳ್ಳಲು ತರಬೇತಿ ಸಂಸ್ಥೆಗಳನ್ನು ಡಿಸಿಸಿ ಬ್ಯಾಂಕ್ ಮೂಲಕ ನಡೆಸುತ್ತಾ ಬರಲಾಗಿದೆ. ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು. ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.
ಪ್ರಧಾನ ವ್ಯವಸ್ಥಾಪಕ ವಿಠಲರೆಡ್ಡಿ ಎಡಮಲ್ಲೆ ಮಾತನಾಡಿ, ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಎಲ್ಲ ರಂಗದಲ್ಲೂ ಶೇ. 33 ಸ್ಥಾನ ಮಹಿಳೆಯರಿಗೆ ಮೀಸಲಾತಿ ಇದೆ. ಮಹಿಳೆಯರ ಉನ್ನತೀಕರಣಕ್ಕೆ ಚಿಂತನೆ ಮಾಡಬೇಕಾಗಿದೆ. ಪ್ರತಿಯೊಂದು ಸಹಕಾರ ಸಂಘದಲ್ಲಿ 2 ಸ್ಥಾನ ಮಹಿಳೆಯರಿಗೆ ಮಿತವಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯ ಸಿಗಬೇಕು ಹಾಗೂ ಆ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಅಶೋಕರಾವ್ ಮುಳೆ, ಸಂಘದ ಮಾಜಿ ಅಧ್ಯಕ್ಷ ಶಾಲಿವಾಹ ಶಂಕ್ರೆಪ್ಪ ಮಾತನಾಡಿದರು. ಸಹಾರ್ದ ನಿರ್ದೇಶಕ ಸುಬ್ರಮಣ್ಯಂ ಪ್ರಭು ಇದ್ದರು. ಉಮಾಕಾಂತ ಮಲ್ಲಿಕಾರ್ಜುನ, ಪರಮೇಶ್ವರ ಮುಗಟೆ, ನೀಲಾಂಜನ ಮತ್ತಿತರರು ಇದ್ದರು. ಎಚ್.ಆರ್. ಮಲ್ಲಮ್ಮ ನಿರೂಪಿಸಿದರು. ಮಲ್ಲಿಕಾರ್ಜುನ ಸದಾಶಿವ ವಂದಿಸಿದರು. ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಜಿಲ್ಲಾ ತೋಟಗಾರಿಕೆ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್