ಲಿಂಗಾನುಪಾತದಿಂದ ಸಮಸ್ಯೆ ಉಲ್ಬಣ

ತಾಯಿಗೆ ಬೆಲೆ ಕೊಡದ ಸಮಾಜ ಇದ್ದೂ ಸತ್ತಂತೆ ಶರಣೆಯರು ವಚನ ಬರೆದಿರುವುದು ಐತಿಹಾಸಿಕ ಪರಂಪರೆ

Team Udayavani, Dec 22, 2019, 11:31 AM IST

22-Decemebrer-3

ಬೀದರ: ಸಂತಸಕ್ಕಾಗಿ ಈಗ ಕೇವಲ ಗಂಡು ಮಗು ಪಡೆಯುವುದು ಎಷ್ಟು ಸಮಂಜಸ? ಮಾನವ ಸಂತಾನ ಬೆಳೆಯಬೇಕಾದರೆ ತಾಯಿ ಅನಿವಾರ್ಯ. ಈಗ ಲಿಂಗಾನುಪಾತ ವ್ಯತ್ಯಾಸವಾಗಿರುವುದರಿಂದಲೇ ಅನೇಕ ಜಟಿಲ ಸಮಸ್ಯೆ ಉಲ್ಬಣಗೊಳ್ಳುತ್ತಿವೆ ಎಂದು ಚಿತ್ರದುರ್ಗದ ಡಾ| ಶಿವಮೂರ್ತಿ ಮುರಘಾ ಶರಣರು ಕಳವಳ ವ್ಯಕ್ತಪಡಿಸಿದರು.

ನಗರದ ಬಿವಿಬಿ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಗ್ಗೆ ಶರಣ ಸಂಸ್ಕೃತಿ ಉತ್ಸವ ನಿಮಿತ್ತ ನಡೆದ ಸಹಜ ಶಿವಯೋಗದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. ನಮ್ಮ ಭಾವನೆ ತುಂಬಾ ಸಂಕುಚಿತಗೊಂಡು ಅನೇಕ ಹಿಂಸೆಗಳಿಗೆ ನಾವೇ ಎಡೆಮಾಡಿಕೊಡುತ್ತಿದ್ದೇವೆ. ಹೆಣ್ಣು ಹೆಣ್ಣಲ್ಲ, ಹೆಣ್ಣು ರಕ್ಕಸಿಯಲ್ಲ. ಹೆಣ್ಣು ಸಾಕ್ಷಾತ ಕಪಿಲಸಿದ್ದ ಮಲ್ಲಿಕಾರ್ಜುನ ಎಂದು ಹೇಳಿ ತಾಯಿಗೆ ಅತ್ಯುನ್ನತವಾದ ಸ್ಥಾನ ಕೊಟ್ಟಿರುವುದು ಇಡೀ ಜಗತ್ತಿನ ಇತಿಹಾಸದಲ್ಲಿ ವಚನ ಸಾಹಿತ್ಯ ಮಾತ್ರ. ತಾಯಿಗೆ ಬೆಲೆ ಕೊಡದ ಸಮಾಜ ಇದ್ದು ಸತ್ತಂತೆ ಎಂದು ಹೇಳಿದರು.

12ನೇ ಶತಮಾನದ ಅನುಭವ ಮಂಟಪದಲ್ಲಿ ಸೂಳೆ ಸಂಕವ್ವೆ, ಹಡಪದ ಲಿಂಗಮ್ಮ, ಕಸಗೂಡಿಸುವ ಸತ್ಯಕ್ಕ ತಾನೂ ಬದುಕಿ ಇಡೀ ಸಮಾಜಕ್ಕೆ ಆದರ್ಶ ಪ್ರಾಯವಾಗಿರುವುದಲ್ಲದೇ 36 ಶರಣೆಯರು ವಚನ ಬರೆದಿರುವುದು ಒಂದು ಐತಿಹಾಸಿಕ ಪರಂಪರೆ. ಇವರೆಲ್ಲರೂ ಜೀವ ಕಾರುಣ್ಯದ ಮಹಾ ಶರಣರು. ಇಂದಿನ ಸಮಾಜದಲ್ಲಿ ಅನೇಕ ಮಕ್ಕಳು ಬೀದಿ ಪಾಲಾಗಿ ತಿಪ್ಪೆಗುಂಡಿಯಲ್ಲಿ ಬೀಳುತ್ತಿರುವುದು ಅತ್ಯಂತ ನೋವಿನ ಸಂಗತಿ. ನಮ್ಮ ಮಠ ನೂರಾರು ನಿರ್ಗತಿಕ, ದಲಿತ ಮಕ್ಕಳಿಗೆ ಸಾಂತ್ವನ ನೀಡುವುದಲ್ಲದೇ ಆಶ್ರಯ ತಾಣವಾಗಿದೆ ಎಂದು ಹೇಳಿದರು.

ವ್ಯಕ್ತಿಯೂ ತಮ್ಮ ಜೀವನದ ಕ್ಷಣಗಳನ್ನು ಆಸ್ವಾಧಿಸಿಕೊಂಡು ಮಾನವ ಸಂತಸಕ್ಕೆ ಕಾರಣಿಭೂತರಾಗಲೂ ದಿನಾಲೂ ಶಿವಯೋಗ ಮಾಡಬೇಕು ಎಂದು ಹೇಳಿದರು.

ಸಾಯಗಾಂವನ ಶ್ರೀ ಶಿವಾನಂದ ದೇವರು, ಇಂಜಿನಿಯರರಾದ ಹಾವಶೆಟ್ಟಿ ಪಾಟೀಲ, ಡಾ| ಎಸ್‌.ಆರ್‌. ಮಠಪತಿ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಜೈಶ್ರೀ ಸಕಾಲೆ, ಸಾಹಿತಿ ಮೇನಕಾ ಪಾಟೀಲ, ಜಿಪಂ ಸದಸ್ಯೆ ಶಕುಂತಲಾ ಬೆಲ್ದಾಳೆ, ಶಕುಂತಲಾ ವಾಲಿ, ಮಹಾನಂದಾ ಹಿರೇಮಠ, ಸಿದ್ರಾಮ ಸೀತಾ, ಗುತ್ತಿಗೆದಾರ ಭೀಮರಾವ್‌ ಮರಕಲ್‌, ವಿಜಯಲಕ್ಷ್ಮೀ ಕೌಠಗೆ, ಕಸ್ತೂರಿ ಪಟಪಳ್ಳಿ, ನೀಲಮ್ಮ ರೋಗನ್‌, ಡಾ| ವಿಜಶ್ರೀ ಬಶೆಟ್ಟಿ, ಸಿ.ಎಸ್‌. ಗಣಾಚಾರಿ, ಡಾ| ಜಗದೀಶ ಜಾಬಾ, ಭಾರತಿ ಪಾಟೀಲ ಇದ್ದರು.

ತೋಟಪ್ಪ ಉತ್ತಂಗಿ, ನವಲಿಂಗ ಪಾಟೀಲ ವಚನ ಗಾಯನ ನಡೆಸಿಕೊಟ್ಟರು. ಮಹಿಳಾ ಬಸವ ಕೇಂದ್ರದ ಗೌರವಾಧ್ಯಕ್ಷೆ ಕರುಣಾ ಶೆಟಕಾರ ಸ್ವಾಗತಿಸಿದರು. ಶಿಲ್ಪಾ ಮಜಗೆ ವಂದಿಸಿದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.