ಸೌರ ವಿದ್ಯುತ್‌ ಪಾರ್ಕ್‌ಗೆ ಬೇಕು ಭೂಮಿ

ಜಿಲ್ಲೆಯಲ್ಲಿರುವುದು ಕೃಷಿ ಯೋಗ್ಯ ಭೂಮಿಅಗತ್ಯವಿರುವುದು 10 ಸಾವಿರ ಎಕರೆ

Team Udayavani, Nov 8, 2019, 4:00 PM IST

8-November-15

ಬೀದರ: ಜಿಲ್ಲೆಯಲ್ಲಿ ಸೌರ ವಿದ್ಯುತ್‌ ಪಾರ್ಕ್‌ ನಿರ್ಮಾಣಕ್ಕೆ ಜಮೀನು ಗುರುತಿಸುವ ಸಂಬಂಧ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆಆರ್‌ ಇಡಿಎಲ್‌) ಮತ್ತು ತಹಶೀಲ್ದಾರ್‌ ಅವರನ್ನು ಒಳಗೊಂಡ ಜಿಲ್ಲಾಡಳಿತದ ಜಂಟಿ ಸಭೆ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಧಿಕಾರಿ ಡಾ|ಎಚ್‌.ಆರ್‌. ಮಹಾದೇವ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಬಸವರಾಜು ಸೇರಿದಂತೆ ಬೀದರ, ಬಸವಕಲ್ಯಾಣ, ಹುಮನಾಬಾದ್‌, ಔರಾದ, ಭಾಲ್ಕಿ ಹಾಗೂ ಇನ್ನುಳಿದ ತಾಲೂಕುಗಳ ತಹಶೀಲ್ದಾರ್‌ ಅವರನ್ನೊಳಗೊಂಡ ಸಭೆಯಲ್ಲಿ ಜಮೀನು ಗುರುತಿಸುವ ಬಗ್ಗೆ ಚರ್ಚೆ ನಡೆಯಿತು.

ಜಿಲ್ಲೆಯಲ್ಲಿ ಬಹುತೇಕ ಕೃಷಿ ಯೋಗ್ಯ ಭೂಮಿಯೇ ಇದೆ. ಅರಣ್ಯ ಪ್ರದೇಶ ಹೆಚ್ಚು ಪ್ರಮಾಣದಲ್ಲಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬರಡು ಭೂಮಿ ಲಭ್ಯವಾಗುವ ಸಾಧ್ಯತೆ ಕಡಿಮೆ ಇದೆ ಎಂದು ಜಿಲ್ಲಾಧಿಕಾರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು. ಎಲ್ಲ ತಹಸೀಲ್ದಾರರು ಕೂಡ ಇದೆ ರೀತಿ
ಅಭಿಪ್ರಯ ವ್ಯಕ್ತಪಡಿಸಿದರು.

10,000 ಎಕರೆ ಜಮೀನು: ಈ ವೇಳೆ ಮಾತನಾಡಿದ ಕೆಆರ್‌ಇಡಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಬಸವರಾಜು ಅವರು, ಸೌರ ವಿದ್ಯುತ್‌ ಪಾರ್ಕ್‌ ನಿರ್ಮಿಸಲು ಅಂದಾಜು 10,000 ಎಕರೆಗಳಷ್ಟು ಖಾಸಗಿ ಜಮೀನನ್ನು 28 ರ್ವಗಳ ಕಾಲ ಗುತ್ತಿಗೆ ಆಧಾರದ ಮೇಲೆ ಪಡೆಯಲಾಗುವುದು. ಪ್ರತಿ ಎಕರೆಗೆ ವಾರ್ಷಿಕ 21,500 ರೂ. ಮೊತ್ತವನ್ನು ರೈತರಿಗೆ ನೇರವಾಗಿ ನೀಡಲಾಗುವುದು. 2 ವರ್ಷಕ್ಕೊಮ್ಮೆ ಗುತ್ತಿಗೆ ದರವನ್ನು ಶೇ.5ರಷ್ಟು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಪಾರ್ಕ್‌ ನಿರ್ಮಾಣ ಹಂತದಲ್ಲಿ ರೈತರು ಮತ್ತು ಅವರ ಕುಟುಂಬದವರಿಗೆ ನೇರ ಅಥವಾ ಪರೋಕ್ಷವಾಗಿ ಅಂದಾಜು 8,000 ಉದ್ಯೋಗಗಳು ದೊರೆಯಲಿವೆ. ಪಾರ್ಕ್‌ ನಿರ್ಮಾಣದ ನಂತರ ಅಂದಾಜು 12,000 ಹುದ್ದೆಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.

ಈ ಯೋಜನೆಗೆ ಒಂದೇ ಕಡೆ ಭೂಮಿ ನೀಡಲು ಆಸಕ್ತಿಯುಳ್ಳ ರೈತರು ತಮ್ಮ ಒಪ್ಪಿಗೆಯನ್ನು ಲಿಖೀತವಾಗಿ ದಾಖಲೆಗಳೊಂದಿಗೆ ವಿವರಗಳನ್ನು ಕೆಆರ್‌ಇಡಿಸಿ ಅಥವಾ ಕೆಎಸ್‌ ಪಿಡಿಸಿಎಲ್‌ ಕಚೇರಿಗೆ ನೀಡಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.

ರೈತರೊಂದಿಗೆ ಸಭೆ ನಡೆಸಿ: ಜಿಲ್ಲಾಧಿಕಾರಿ ಡಾ|ಎಚ್‌.ಆರ್‌. ಮಹಾದೇವ ಮಾತನಾಡಿ, ಎಲ್ಲ ತಹಶೀಲ್ದಾರರು ಈ ಬಗ್ಗೆ ಗಮನ ಹರಿಸಬೇಕು. ಸಮೀಕ್ಷೆ ನಡೆಸಿ ಬಂಜರು ಭೂಮಿಯನ್ನು ಗುರುತಿಸಬೇಕು. ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರ ಸಭೆ ಕರೆದು ಅವರೊಂದಿಗೆ ಈ ಬಗ್ಗೆ ಚರ್ಚಿಸಬೇಕು. ಜಿಲ್ಲೆಯಲ್ಲಿ ಯಾವ ಕಡೆಗಳಲ್ಲಿ ಬರಡು ಭೂಮಿ ಇದೆ ಎಂಬುದನ್ನು ಗುರುತಿಸಬೇಕು. ಈ ಬಗ್ಗೆ ಕಡ್ಡಾಯವಾಗಿ ರೈತರ ಸಭೆ ಕರೆದು ಅವರೊಂದಿಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದೇ ಜಮೀನು ನೀಡುವ ಬಗ್ಗೆ ಖಾತ್ರಿ ಪಡಿಸಬೇಕು ಎಂದು ತಹಶೀಲ್ದಾರರಿಗೆ ತಿಳಿಸಿದರು.

ತಮ್ಮ ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಯಾವ ಯಾವ ಕಡೆಗಳಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬಂಜರು ಭೂಮಿ ಇದೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ತಿಳಿಸುವುದಾಗಿ ತಹಶೀಲ್ದಾರರು ಪ್ರತಿಕ್ರಿಯಿಸಿದರು.

ಸಭೆಯಲ್ಲಿ ತಹಶೀಲ್ದಾರರಾದ ಚಂದ್ರಶೇಖರ ಎಂ., ಕೀರ್ತಿ ಚಾಲಕ್‌, ಸಾವಿತ್ರಿ ಸಲಗರ್‌, ಅಣ್ಣಾರಾವ್‌ ಪಾಟೀಲ, ನಾಗಯ್ಯ ಹಿರೇಮಠ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.