ನ್ಯಾಯಾಧೀಶರಿಂದ ಅಲೆಮಾರಿಗಳ ಸ್ಥಿತಿಗತಿ ಪರಿಶೀಲನೆ

ಇರಲು ಮನೆ ಇಲ್ಲದೇ 30 ವರ್ಷದಿಂದ ಜೋಪಡಿಯಲ್ಲಿ ವಾಸ

Team Udayavani, Jul 12, 2019, 2:44 PM IST

12-JUly-23

ಬೀದರ: ಅಲೆಮಾರಿ ಸಮುದಾಯದವರು ವಾಸ್ತವ್ಯ ಮಾಡಿದ ನೌಬಾದ್‌ ಬಳಿಯ ಕೆಎಸ್‌ಆರ್‌ಪಿ ಕ್ವಾರ್ಟರ್ಸ್‌ ಸ್ಥಳಕ್ಕೆ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಭೇಟಿ ನೀಡಿ ಅವರ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಬೀದರ: ಅಲೆಮಾರಿ ಸಮುದಾಯದವರು ವಾಸ್ತವ್ಯ ಮಾಡಿದ ನೌಬಾದ್‌ ಬಳಿಯ ಕೆಎಸ್‌ಆರ್‌ಪಿ ಕ್ವಾರ್ಟರ್ಸ್‌ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನ್ಯಾಯಾಧೀಶರಾದ ಪ್ರೇಮಾವತಿ ಮನಗೂಳಿ ಅವರು ಗುರುವಾರ ಭೇಟಿ ನೀಡಿ ಅವರ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ನ್ಯಾಯಾಧೀಶರ ಎದುರು, ಅಲೆಮಾರಿ ಸಮುದಾಯದ ಜನರು ತಮ್ಮ ಕಷ್ಟಗಳನ್ನು ಹೇಳಿಕೊಂಡರು. ನಾವು 30 ವರ್ಷದಿಂದ ಇಂತಹ ಜೋಪಡಿಯಲ್ಲಿದ್ದೇವೆ. ನಮಗೆ ಇರಲು ಮನೆ ಕೊಟ್ಟರೆ ಸಾಕು ಮನವಿ ಮಾಡಿದರು. ನ್ಯಾಯಾಶರು ಮಾತನಾಡಿ, ತಾವು ಎಲ್ಲಿಂದ ಬಂದಿದ್ದೀರಿ? ಯಾವ ಕೆಲಸ ಮಾಡುತ್ತೀರಿ? ಸರ್ಕಾರದಿಂದ ಏನೇನು ಸೌಲಭ್ಯ ಸಿಕ್ಕಿದೆ? ತಮ್ಮ ಮಕ್ಕಳು ಏನು ಮಾಡುತ್ತಾರೆ? ಎಂದು ಪ್ರಶ್ನಿಸಿದರು. ಹುಮನಾಬಾದ, ಕಲಬುರಗಿ ಸೇರಿದಂತೆ ಬೇರೆ ರಾಜ್ಯದಿಂದಲೂ ಇಲ್ಲಿಗೆ ಬಂದಿರುವುದಾಗಿ ಅಲೆಮಾರಿಗಳು ಮಾಹಿತಿ ನೀಡಿದರು. ಪಾತ್ರೆ ಸಾಮಾನು, ಬಟ್ಟೆ, ಡ್ರಮ್‌ ಮಾರಾಟ, ಕುಲುಮೆ, ಪಂಚಾಂಗ ಹೇಳುವುದು, ಪೇಪರ್‌ ಆಯುವುದು ಸೇರಿದಂತೆ ಇನ್ನಿತರ ಕೆಲಸ ಮಾಡುತ್ತಿದ್ದೇವೆ. ಶಾರದಾ ಅನ್ನುವವರು ನಮಗೆ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮಾಡಿಸಿಕೊಟ್ಟು ಸಹಾಯ ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ನಮ್ಮ ಮಕ್ಕಳಿಗಿಲ್ಲ ಅಂಗನವಾಡಿ: ನಮ್ಮ ಮಕ್ಕಳನ್ನು ಕಳುಹಿಸಲು ಹತ್ತಿರದಲ್ಲಿ ಅಂಗನವಾಡಿ ಇಲ್ಲ. ದೊಡ್ಡ ಮಕ್ಕಳನ್ನು ಕಳುಹಿಸಲು ಹತ್ತಿರದಲ್ಲಿ ಸರ್ಕಾರಿ ಶಾಲೆ ಇಲ್ಲ ಎಂದು ಅವರು ಅಳಲು ತೋಡಿಕೊಂಡರು. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಭಿಕ್ಷಾಟನೆಗೆ ಕಳುಹಿಸಬಾರದು. ಇದು ಅವಮಾನದ ವಿಷಯ ಎಂದು ಅವರಲ್ಲಿ ಮನವಿ ಮಾಡಿದ ನ್ಯಾಯಾಧೀಶರು, 30 ವರ್ಷವಾದರೂ ಇಲ್ಲಿ ಅಂಗನವಾಡಿಯನ್ನೇಕೆ ತೆರೆದಿಲ್ಲ? ಯಾಕೆ ವಿಳಂಬ ಮಾಡಿದ್ದೀರಿ? ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಸಮೀಕ್ಷೆ ಮಾಡಿದ್ದೇವೆ: ಇಲ್ಲಿನ ಮಕ್ಕಳಿಗೆ ಅಂಗನವಾಡಿ ವ್ಯವಸ್ಥೆ ಕಲ್ಪಿಸಲಾಗುವುದು. ಎಷ್ಟು ಮಕ್ಕಳು ಮತ್ತು ಗರ್ಭಿಣಿಯರು ಇದ್ದಾರೆ ಎಂದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ತಾತ್ಕಾಲಿಕವಾಗಿ ಹತ್ತಿರದ ದೇವಾಲಯದಲ್ಲಿ ಅಂಗನವಾಡಿ ಆರಂಭಿಸಲು ಯೋಜಿಸಲಾಗಿದೆ. ಈ ಬಗ್ಗೆ ದೇವಾಲಯದ ಅರ್ಚಕರ ಜೊತೆಗೆ ಮಾತನಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ, ಬೀದರ ಸಿಡಿಪಿಒ ಮಚೇಂದ್ರ ವಾಗಮೋರೆ ನ್ಯಾಯಾಧೀಶರಿಗೆ ತಿಳಿಸಿದರು.

ವರದಿ ಸಲ್ಲಿಸಲು ಗಡುವು: ಇಲ್ಲಿ ಕೂಡಲೇ ಅಂಗನವಾಡಿ ತೆರೆಯಬೇಕು. ಇಲ್ಲಿನ ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಕೊಡುವುದಕ್ಕೆ ಕೂಡಲೇ ಕ್ರಮ ವಹಿಸಬೇಕು. ಇಲ್ಲಿನ ಮಕ್ಕಳು ಭಿಕ್ಷೆ ಬೇಡದಂತೆ ನೋಡಿಕೊಳ್ಳಬೇಕು. ತೆಗೆದುಕೊಂಡ ಕ್ರಮದ ಬಗ್ಗೆ ಒಂದು ತಿಂಗಳಲ್ಲಿ ಕಾನೂನು ಸೇವೆ ಪ್ರಾಧಿಕಾರಕ್ಕೆ ವರದಿ ಮಾಡಬೇಕು ಎಂದು ನ್ಯಾಯಾಧೀಶರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಶೌಚಾಲಯ ವ್ಯವಸ್ಥೆ ಮಾಡಿ: ಇಲ್ಲಿನ ಜನರಿಗೆ ಇದುವರೆಗೆ ಶೌಚಾಲಯದ ವ್ಯವಸ್ಥೆಯನ್ನೇ ಮಾಡಿಲ್ಲ. ಬೆಳಗ್ಗೆ ಎಲ್ಲರೂ ಹತ್ತಿರದ ಬಯಲಲ್ಲಿ ಶೌಚ ಮಾಡುತ್ತಾರೆ. ಇದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂದು ಸುತ್ತಲಿನ ಕೆಲವು ನಿವಾಸಿಗಳು ತಿಳಿಸಿದರು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ, ವಕೀಲರ ಸಂಘದ ಅಧ್ಯಕ್ಷ ಜಗದೀಶ ಜಗತಾಪ ಇದ್ದರು. ಸಮಾಜ ಸೇವಾಕಾರ್ಯಕರ್ತೆ ಶಾರದಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶಂಕ್ರಪ್ಪ ಇದ್ದರು.

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.