ಅಕ್ರಮ ಲೇಔಟ್ ವಿರುದ್ಧ ಕಠಿಣ ಕ್ರಮ

ಬೀದರ್‌ ತಾಲೂಕಿನಲ್ಲೇ ಇದೆ 230 ಅನಧಿಕೃತ ಲೇಔಟ್•ಖಾಲಿ ಭೂಮಿಯಲ್ಲಿ ಕಲ್ಲು ಹೂಳಿ ಮೋಸ

Team Udayavani, Aug 18, 2019, 10:21 AM IST

18-Agust-5

ಸಾಂದರ್ಭಿಕ ಚಿತ್ರ

ಬೀದರ: ಜಿಲ್ಲೆಯಲ್ಲಿ ಅಕ್ರಮ ಲೇಔಟ್‌ಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಅಕ್ರಮ ಲೇಔಟ್‌ನಲ್ಲಿ ನಿವೇಶ ಪಡೆದವರ ಖಾತೆ ನಕಲು ಪ್ರತಿ ರದ್ದುಗೊಳ್ಳಲಿವೆ.

ಬೀದರ್‌ ತಾಲೂಕಿನಲ್ಲಿ 230 ಲೇಔಟ್‌ಗಳು ಅನಧಿಕೃತ ಲೇಔಟ್‌ಗಳು ಎಂದು ಗುರುತಿಸಲಾಗಿದೆ. ಅಸಮರ್ಪಕ ದಾಖಲೆ, ಭೂ ಪರಿವರ್ತನೆ (ಎನ್‌ಎ)ಆದೇಶ ಇಲ್ಲದೆ ನಿವೇಶನ ಹಂಚಿಕೆ ಮಾಡುತ್ತಿರುವುದ್ದು, ಜಿಲ್ಲಾಡಳಿತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲೆಯ ಐದು ತಾಲೂಕಿನಲ್ಲಿ ಈ ರಿಯಲ್ ಎಸ್ಟೇಟ್ ಧಂದೆ ಜೋರಾಗಿ ನಡೆಯುತ್ತಿದ್ದು, ಖಾಲಿ ಭೂಮಿಯಲ್ಲಿ ಕಲ್ಲುಗಳನ್ನು ಹೂಳಿ ನಿವೇಶನ ಎಂದು ಜನರಿಗೆ ನಂಬಿಸಿ ಮಾರಾಟ ಮಾಡುವ ಕೆಲಸ ನಡೆಯುತ್ತಿದೆ. ಜಿಲ್ಲೆಯ ಪೈಕಿ ಬೀದರ್‌ ತಾಲೂಕಿನ ಒಂದರಲ್ಲಿಯೇ 230 ಅಕ್ರಮ ಲೇಔಟ್‌ಗಳನ್ನು ಪತ್ತ್ತೆ ಹಚ್ಚಲಾಗಿದೆ ಎಂದು ಜಿಲ್ಲಾಡಳಿತವೇ ಹೇಳುತ್ತಿದ್ದು, ಇತರೆ ತಾಲೂಕುಗಳಲ್ಲಿನ ಅನಧಿಕೃತ ಲೇಔಟ್‌ಗಳ ಕುರಿತು ಪರಿಶೀಲನೆ ನಡೆದರೆ ಸಾವಿರಾರೂ ಲೇಔಟ್‌ಗಳ ಬಣ್ಣ ಬಯಲಾಗಲಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಜಿಲ್ಲಾಡಳಿತ ಈಗಾಗಲೇ ಇತರೆ ತಾಲೂಕುಗಳಲ್ಲಿನ ತಹಶೀಲ್ದಾರ್‌ರಿಗೆ ಅಕ್ರಮ ಲೇಔಟ್‌ಗಳ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಜಿಲ್ಲಾಡಳಿತ ಅಕ್ರಮ ಲೇಔಟ್ ನಿರ್ಮಿಸಿದ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿ ದಾಖಲೆ ಸಲ್ಲಿಸುವಂತೆ ಸೂಚಿಸಿದೆ, ಜಿಲ್ಲಾಡಳಿತದ ನೋಟೀಸ್‌ಗೆ ಯಾರು ಸೂಕ್ತ ದಾಖಲೆಗಳನ್ನು ನೀಡುವುದಿಲ್ಲವೋ ಅಂತಹ ಲೇಔಟ್‌ಗಳ ಭೂಮಿಯನ್ನು ಕರ್ನಾಟಕ ಸರ್ಕಾರ ಎಂದು ಪರಿವರ್ತಿಸಲು ಜಿಲ್ಲಾಡಳಿತ ಕಂದಾಯ ಅಧಿಕಾರಿಗಳಿಗೆ ಸೂಚಿಸಿದೆ.

ದಾಖಲೆ ನೋಡಿ ನಿವೇಶನ ಖರೀದಿಸಿ: ಜಿಲ್ಲೆಯ ಸಾರ್ವಜನಿಕರು ಯಾವುದೇ ನಿವೇಶನ ಖರೀದಿಸಬೇಕಾದರೆ ಮೊದಲು ಲೇಔಟ್‌ಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಬೇಕು. ಅಧಿಕೃತ ಅಥವಾ ಅನಧಿಕೃತ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಸರ್ಕಾರದ ಪರವಾನಗಿ ಎಲ್ಲವೂ ಸೂಕ್ತವಾಗಿ ಇದ್ದರೆ ಮಾತ್ರ ನಿವೇಶನ ಖರೀದಿಗೆ ಮುಂದಾಗಬೇಕು.

ನೋಟರಿ ಮಾಡಿಸಿಕೊಂಡು ನಿವೇಶನ ಖರೀದಿಸುವುದು ಸೂಕ್ತವಲ್ಲ. ಕಡ್ಡಾಯವಾಗಿ ಆನ್‌ಲೈನ್‌ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳುವುದು ಸೂಕ್ತ ಎನ್ನುತ್ತಾರೆ ಅಧಿಕಾರಿಗಳು. ಅಕ್ರಮ ಲೇಔಟ್‌ಗಳಲ್ಲಿ ನಿವೇಶನ ಪಡೆದು ಮನೆ ನಿರ್ಮಿಸಿಕೊಂಡ ಆ ಮಾಲೀಕರೆ ಜವಾಬ್ದಾರರಾಗುತ್ತಾರೆ. ಸರ್ಕಾರ ಆ ಭೂಮಿ ಸ್ವಾಧೀನ ಪಡೆಸಿಕೊಂಡಲ್ಲಿ ಅಲ್ಲಿನ ಎಲ್ಲಾ ಆಸ್ತಿ ಸರ್ಕಾರದ್ದಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸರಕಾರಿ ಭೂಮಿಯಲ್ಲೂ ನಿವೇಶನ: ಜಿಲ್ಲೆಯ ವಿವಿಧೆಡೆ ಸರ್ಕಾರಿ ಭೂಮಿಯಲ್ಲಿ ಕೂಡ ಕಲ್ಲುಗಳನ್ನು ಹೂಳಿ ನಿವೇಶನ ಹಾಕಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ವಕೀಲರ ಮೂಲಕ ನೋಟರಿ ಮಾಡಿಸಿಕೊಂಡು ವ್ಯವಹಾರ ಮಾಡಲಾಗುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಅಲ್ಲದೆ ಸರ್ಕಾರದ ಸಿ ಫಾರಂ ಹೊಂದಿದ ಭೂಮಿಯಲ್ಲೂ ಕೂಡ ನಿವೇಶನ ಹಾಕಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾಗಿದೆ.

ಅಧಿಕಾರಿಗಳು ಶಾಮೀಲು: ಜಿಲ್ಲೆಯ ವಿವಿಧೆಡೆ ಅಕ್ರಮ ಲೇಔಟ್‌ಗಳ ನಿರ್ಮಾಣಕ್ಕೆ ಕೆಲ ಅಧಿಕಾರಿಗಳು ಕೂಡ ಸಾಥ್‌ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಜಿಲ್ಲೆಯಲ್ಲಿ ಸಾವಿರಾರು ಲೇಔಟ್‌ಗಳು ನಿರ್ಮಾಣಗೊಳ್ಳುತ್ತಿರುವುದು ಅಧಿಕಾರಿಗಳ ಗಮನದಲ್ಲಿದ್ದರು ಕೂಡ ಯಾವುದೇ ಕಾನೂನು ಕ್ರಮಕ್ಕೆ ಯಾಕೆ ಮುಂದಾಗಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.ಬಹುತೇಕ ಲೇಔಟ್‌ಗಳ ಮಾಲೀಕರು ಸಾರ್ವಜನಿಕರಿಗೆ ಭೂಮಿ ಮಾರಾಟ ಮಾಡಿದ್ದಾರೆ. ಇದೀಗ ಜಿಲ್ಲಾಡಳಿತ ಲೇಔಟ್ ಆದೇಶ ರದ್ದು ಮಾಡುವುದರಿಂದ ನಿವೇಶನ ಪಡೆದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗುತ್ತಿದೆ.

ಕಂದಾಯ ಇಲಾಖೆ, ಗ್ರಾಮ ಪಂಚಾಯತ್‌, ಪುರಸಭೆ, ನಗರ ಸಭೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಯಾಕೆ ಮೌನವಹಿಸಿದ್ದಾರೆ. ತಪ್ಪಿಸ್ಥರ ವಿರುದ್ಧ ಮೊದಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.