ಮಿತ ಮಾತಿನಿಂದ ಸುಂದರ ಬದುಕು: ಸಂಗಮೇಶ್ವರ ಶ್ರೀ

ನಮ್ಮ ನುಡಿಗಳು ಲಿಂಗದ ನುಡಿಗಳಾಗಬೇಕು

Team Udayavani, May 13, 2019, 4:21 PM IST

may-26

ಬೀದರ: ನಗರದ ಪ್ರಸಾದ ನಿಲಯದಲ್ಲಿ 104ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಜರುಗಿತು.

ಬೀದರ: ಪ್ರಚಲಿತ ಸಂದರ್ಭದಲ್ಲಿ ಮಾತುಗಳು ಚಲಾವಣೆಯಲ್ಲಿ ಇಲ್ಲದ ನಾಣ್ಯಗಳಾಗಿದ್ದು, ನಿತ್ಯದ ಬದುಕು ಸುಂದರವಾಗಬೇಕಾದರೆ ನಮ್ಮ ಮಾತುಗಳು ಬೇರೆಯವರಿಗೆ ಸುಖ-ಶಾಂತಿ ಮತ್ತು ಸಂತೋಷ ನೀಡುವಂತಿರಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ನುಡಿದರು.

ನಗರದ ಪ್ರಸಾದ ನಿಲಯದಲ್ಲಿ ನಡೆದ 104ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ ನೂರಾರು ಶರಣರು, ಸಂತರು ವಿಶ್ವದ ಮೂಲೆ ಮೂಲೆಯಿಂದ ಕಲ್ಯಾಣಕ್ಕೆ ಪಯಣ ಬಯಸಿ ಬಂದರು. ಶರಣರ ವಚನಗಳು ಅಂತರಂಗದ ಮಹಾ ಬೆಳಕಾಗಿದ್ದು, ಮಾನವ ಜನಾಂಗದ ಕಲ್ಯಾಣ ವಚನಗಳಲ್ಲಿ ಅಡಗಿದೆ. ನಮ್ಮ ನುಡಿಗಳು ಲಿಂಗದ ನುಡಿಗಳಾಗಬೇಕು. ಲೋಕದ ಅನುಭಾವದ ಜೊತೆಗೆ ಲಿಂಗದ ಅನುಭಾವವಾಗಬೇಕು. ಮಾತು ಮುತ್ತಿನಂತೆ, ಸ್ಪಟಿಕದಂತೆ, ಪ್ರಕಾಶಿಸುವಂತಿರಬೇಕು. ಈ ದಿಶೆಯಲ್ಲಿ ನಮ್ಮ ನುಡಿಗಳು ಜ್ಯೋತಿರ್ಲಿಂಗದಂತೆ ಹೊಳೆಯುತ್ತ ಇರಬೇಕು. ಆಗ ಮಾತ್ರ ಮಾನವ ಜೀವನ ಸ್ವರ್ಗವಾಗುತ್ತದೆ ಎಂದು ಪ್ರತಿಪಾದಿಸಿದರು.

ಔರಾದನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಸೂರ್ಯಕಾಂತ ಚಿದ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಾದಿ ಶರಣರ ವಚನಗಳಲ್ಲಿ ಬದುಕಿನ ಮೌಲ್ಯ ಅಡಗಿದೆ. ಬದುಕನ್ನು ಸಾರ್ಥಕ ಮಾಡಿಕೊಳ್ಳಲು ಬಸವ ತತ್ವವನ್ನು ಆಚರಣೆಯಲ್ಲಿ ತರಬೇಕು. ಯುವಜನಾಂಗದವರು ಉತ್ತಮ ಸಂಸ್ಕೃತಿ, ಸಂಸ್ಕಾರ ಪಡೆದುಕೊಂಡು ಹಿರಿಯರ, ತಂದೆ-ತಾಯಿಯವರ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಾನವೀಯ ಮೌಲ್ಯ, ಆಧಾತ್ಮಿಕ ಮೌಲ್ಯದಿಂದ ಮಾನವ ಜನ್ಮದ ಶ್ರೇಷ್ಠತೆಯನ್ನು ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಬೆಳಕಾಗಬೇಕು ಎಂದು ಸಲಹೆ ನೀಡಿದರು.

ಬೀದರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ| ರಾಜಕುಮಾರ ಅಲ್ಲೂರೆ ಮಾತನಾಡಿ, ಭಾರತೀಯ ಸಂಸ್ಕೃತಿ ಮತ್ತು ಸಾಹಿತ್ಯದಲ್ಲಿ 12ನೇ ಶತಮಾನದ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯವು ವಿಶ್ವ ಸಾಹಿತ್ಯದಲ್ಲಿ ಶ್ರೇಷ್ಠ ಸ್ಥಾನ ಪಡೆಯಬೇಕಾದರೆ ಪ್ರತಿಯೊಬ್ಬರು ವಚನಗಳ ಪಠಣ ಮಾಡಬೇಕು. ವಚನಗಳ ಸಾರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಉತ್ತಮ ಮಾತುಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತವೆ. ಬಸವಣ್ಣನವರು ಸಮಾಜಕ್ಕೆ ನಡೆ-ನುಡಿ-ಉಣ್ಣಲಿಕ್ಕೆ ಮತ್ತು ಬದುಕು ಯಾವ ರೀತಿ ಮಾಡಬೇಕೆಂಬುವುದನ್ನು ಕಲಿಸಿದ ಆದರ್ಶ ಗುರುಗಳಾಗಿದ್ದರು. ಬಹುರೂಪಿ ಚೌಡಯ್ಯನವರು ತಮ್ಮ ವಚನದಲ್ಲಿ ಮಿತ ಭೋಜನ, ಮಿತ ಮಾತು ಮತ್ತು ಮಿತ ನಿದ್ರೆ ಇದ್ದರೆ ವ್ಯಕ್ತಿ ಶಾರೀರಕವಾಗಿ, ಮಾನಸಿಕವಾಗಿ ಆರೋಗ್ಯವಂತನಾಗಿರುತ್ತಾನೆ ಎಂದು ತಿಳಿಸಿದ್ದಾರೆ. ವ್ಯಕ್ತಿಯ ಮನಸ್ಸು ಅರಳಬೇಕಾದರೆ ಮಾತುಗಳು ಮಾಣಿಕ್ಯದಂತಿರಬೇಕು ಎಂದು ವಿವರಿಸಿದರು.

ಪ್ರೊ| ಎಸ್‌.ಬಿ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ದೇಶಾಂಶ ಹುಡಗಿ, ಪಂಚಾಕ್ಷರಿ ಪುಣ್ಯಶೆಟ್ಟಿ, ಚನ್ನಬಸಪ್ಪ ನೌಬಾದೆ, ಶಿವಲಿಂಗ ಯರಗಲ್, ಶಕುಂತಲಾ ಕಾಶೀನಾಥ, ಪ್ರೊ| ಉಮಾಕಾಂತ ಮೀಸೆ, ಶ್ರೀಕಾಂತ ಸ್ವಾಮಿ, ಗುರುನಾಥ ಬಿರಾದಾರ, ಮಲ್ಲಿಕಾರ್ಜುನ ಹುಡಗಿ, ಶಿವಕುಮಾರ ಭಾಲ್ಕೆ, ಸೂರ್ಯಕಾಂತ ಮಾಳಗೆ, ಲಕ್ಷ್ಮೀಬಾಯಿ ಮಾಳಗೆ, ಅಶೋಕ ಮಾನಕೇರಿ, ಶ್ರೀಕಾಂತ ಸ್ವಾಮಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.