ತಂತ್ರಜ್ಞಾನ ಬೆಳೆದಂತೆ ದುರುಪಯೋಗ ಹೆಚ್ಚಳ

ಸೈಬರ್‌ ಅಪರಾಧ-ವಂಚನೆ ತಡೆಗಟ್ಟುವಿಕೆ; ಬ್ಯಾಂಕ್‌ ಅಧಿ ಕಾರಿಗಳ ತರಬೇತಿ ಸಮಾರೋಪ

Team Udayavani, Dec 13, 2019, 3:34 PM IST

13-December-17

ಬೀದರ: ಬ್ಯಾಂಕ್‌ಗಳನ್ನು ಶಾಖೆಗಳಿಂದ ಮನೆಬಾಗಿಲಿಗೆ ತಂದು ನಿಲ್ಲಿಸುವಲ್ಲಿ ತಂತ್ರಜ್ಞಾನದ ಉಪಯೋಗ ವ್ಯಾಪಿಸಿದೆ. ಆದರೆ, ಬ್ಯಾಂಕ್‌ ವ್ಯವಹಾರದಲ್ಲಿ ಸರಳತೆ ಹೆಚ್ಚಿದಂತೆ ಅದರ ದುರುಪಯೋಗವೂ ಹೆಚ್ಚಾಗಿದೆ ಎಂದು ಡಿಸಿಸಿ ಬ್ಯಾಂಕಿನ ನಿರ್ದೇಶಕ ವಿಜಯಕುಮಾರ ಪಾಟೀಲ ಹೇಳಿದರು.

ನಗರದ ನೌಬಾದ್‌ನ ಡಾ| ಗುರುಪಾದಪ್ಪಾ ನಾಗಮಾರಪಳ್ಳಿ ಸಹಕಾರ ಗ್ರಾಮೀಣಾಭಿವೃದ್ಧಿ ಅಕಾಡೆಮಿಯಲ್ಲಿ ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ಶಿರಸಿ ಕಾರವಾರ ಮತ್ತು ಬೀದರ ಜಿಲ್ಲೆಗಳ ಡಿಸಿಸಿ ಬ್ಯಾಂಕಿನ ಅಧಿಕಾರಿಗಳಿಗಾಗಿ ನಡೆದ ಸೈಬರ್‌ ಅಪರಾಧ ಮತ್ತು ವಂಚನೆ ತಡೆಗಟ್ಟುವಿಕೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ವಂಚಕರಿಗೆ ಸುಲಭವಾಗಿ ಹಣ ವಂಚಿಸುವ ದಾರಿಯಾಗಿ ಇದು ಮಾಪಾರ್ಡಡಾಗಿದ್ದು, ಗ್ರಾಹಕರು ಎಚ್ಚರ ವಹಿಸಬೇಕಿದೆ ಎಂದರು. ಕಂಪ್ಯೂಟರ್‌ ಬಳಕೆಯನ್ನು ಸುರಕ್ಷಿತವಾಗಿ ಮಾಡಲು ಆರ್ಥಿಕ ವ್ಯವಹಾರಗಳನ್ನು ಭದ್ರವಾಗಿಡಲು ಮತ್ತು ಬ್ಯಾಂಕಿಂಗ್‌ ಅನ್ನು ವಿಶ್ವಾಸಾರ್ಹವಾಗಿಡಲು ತಂತ್ರಜ್ಞಾನದ ಬಗ್ಗೆ ತರಬೇತಿಗಳು ಆವಶ್ಯಕವಾಗಿವೆ. ಬ್ಯಾಂಕ್‌ಗಳಿಗೆ ತಂತ್ರಜ್ಞಾನದ ಮೂಲಕ ವಂಚಿಸಲು ಹೊರಗಿನ ಹ್ಯಾಕರ್ ಅಥವಾ ಒಳಗಿನ ಸಿಬ್ಬಂದಿಗಳ ದುರಾಸೆಗಳಿಂದ ಮಾತ್ರ ಸಾಧ್ಯವಿದೆ. ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್‌ ವ್ಯವಹಾರ ಅತ್ಯಂತ ಸುರಕ್ಷಿತವಾಗಿದ್ದು ಗ್ರಾಹಕರು ತಮ್ಮ ಖಾಸಗಿ ವಿವರಗಳನ್ನು ಹಂಚಿಕೊಂಡಾಗ ಮಾತ್ರ ವಂಚಿಸಲು ಸಾಧ್ಯವಿದೆ. ಇದನ್ನು ತಡೆಯಲು ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿಗಳು ಅರಿವು ಮೂಡಿಸಬೇಕೆಂದರು.

ಡಿಸಿಸಿ ಬ್ಯಾಂಕಿನ ಸಿಇಒ ಮಹಾಜನ ಮಲ್ಲಿಕಾರ್ಜುನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಬ್ಯಾಂಕಿನಲ್ಲಿ ಕಂಪ್ಯೂಟರ್‌ ಅಳವಡಿಸಿದ ಹೆಮ್ಮೆ ಬೀದರದ್ದಾಗಿದೆ. ಎಲ್ಲಾ ಬ್ಯಾಂಕ್‌ ಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಆದರೆ, ಕಂಪ್ಯೂಟರ್‌ ಬಳಕೆಯಿಂದ ಬ್ಯಾಂಕ್‌ ವ್ಯವಹಾರ ಸುಲಭವಾಗಿದೆ. ಆದರೆ, ಗ್ರಾಹಕರಲ್ಲಿ ತಿಳಿವಳಿಕೆಯ ಕೊರತೆ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯಗಳಿಂದ ವಂಚನೆ ಪ್ರಕರಣಗಳು ನಡೆಯುತ್ತಿದ್ದು ಎಲ್ಲರೂ ಜಾಗೃತರಾದಾಗ ಇದನ್ನು ತಡೆಯಬಹುದು ಎಂದು ತಿಳಿಸಿದರು.

ತರಬೇತಿ ಕೇಂದ್ರದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, ಬ್ಯಾಂಕ್‌ ಸಿಬ್ಬಂದಿಗಳಲ್ಲಿ ಗ್ರಾಹಕ ಸ್ನೇಹಿ ನಡುವಳಿಕೆಗೆ ತರಬೇತಿ ಆವಶ್ಯಕವಾಗುತ್ತದೆ. ಇದಕ್ಕಾಗಿ ನಬಾರ್ಡ್‌ ಉತ್ತಮ ವ್ಯವಸ್ಥೆ ನಿರ್ಮಾಣಕ್ಕಾಗಿ ತರಬೇತಿಗಳನ್ನು ಆಯೋಜಿಸುತ್ತಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಎಸ್‌.ಜಿ. ಕುಲಕರ್ಣಿ ಡಿಸಿಸಿ ಬ್ಯಾಂಕಿನ ಸಾಧನೆಗಳನ್ನು ತಿಳಿಸಿದರು. ಡಿಸಿಸಿ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಯಡಮಲ್ಲೆ ಅವರು ಬ್ಯಾಂಕಿನ ಪ್ರಗತಿಯ ಪಕ್ಷಿನೋಟ ನೀಡಿದರು.

ಪ್ರೊ| ರವೀಂದ್ರ ಪಾಟೀಲ, ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಾಮರಾವ್‌ ಏಕಬೋಟೆ ಉಪಸ್ಥಿತರಿದ್ದರು. ತನ್ವೀರ ರಜಾ ಸ್ವಾಗತಿಸಿದರು. ನಾಗಶಟ್ಟಿ ಘೋಡಂಪಳ್ಳಿ ನಿರೂಪಿಸಿದರು. ಮಹಾಲಿಂಗ ಕಟಗಿ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.