ರಾಜಯೋಗದಿಂದ ದುಶ್ಚಟಗಳಿಗೆ ಕಡಿವಾಣ

ದುಶ್ಚಟಗಳಿಂದ ಕುಟುಂಬದ ಮೇಲೆ ಆರ್ಥಿಕ ಹೊರೆ •ದುರಾವಸ್ಥೆ ವಿಮುಕ್ತಿಗೆ ಮನಸ್ಸು-ಬುದ್ಧಿ ಜೋಡಣೆ ಅಗತ್ಯ

Team Udayavani, Jun 2, 2019, 12:51 PM IST

2-June-20

ಬೀದರ: ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ತಂಬಾಕು ನಿಷೇಧ ದಿನಾಚರಣೆ ನಿಮಿತ್ತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ನಡೆದ ವ್ಯಸನಮುಕ್ತಿ ಶಿಬಿರದಲ್ಲಿ ಬಿ.ಕೆ. ಪ್ರತಿಮಾ ಮಾತನಾಡಿದರು.

ಬೀದರ: ದುಷ್ಟ ಚಟಗಳು ನಮ್ಮ ಸುಂದರ ಶರೀರವನ್ನು ವಿದ್ರುಪಗೊಳಿಸುತ್ತವೆ. ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿ, ಆಯುಷ್ಯ ಕ್ಷೀಣಿಸುತ್ತದೆ. ರಾಜಯೋಗ ಶಿಬಿರದಿಂದ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಕಡಿವಾಣ ಹಾಕಲು ಸಾಧ್ಯವಿದೆ ಎಂದು ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ. ಪ್ರತಿಮಾ ಹೇಳಿದರು.

ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ನಿಮಿತ್ತ ನಡೆದ ವ್ಯಸನಮುಕ್ತಿ ಶಿಬಿರದಲ್ಲಿ ಅವರು ಮಾತನಾಡಿದರು. ದುಶ್ಚಟಗಳಿಗೆ ಬಲಿಯಾಗಿ, ಜೀವ ಕಳೆದುಕೊಳ್ಳುವ ವ್ಯಕ್ತಿಯ ಕುಟುಂಬದ ಮೇಲೆ ಆರ್ಥಿಕ ಪರಿಣಾಮ ಬೀರುತ್ತದೆ. ಭಾವಿ ಪೀಳಿಗೆಯ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಮೂಲಕ ಇಡೀ ಸುಂದರ ಸಮಾಜ ನಶ್ವರದತ್ತ ಸಾಗುತ್ತದೆ. ಮನುಷ್ಯ ಒತ್ತಡಕ್ಕೆ ಸಿಲುಕಿ, ವ್ಯಸನಕ್ಕೆ ಜಾರುವುದು ಸಹಜ. ಜೀವನಕ್ಕೆ ದಿಕ್ಕು ತೋಚದೆ, ಬೀಡಿ, ಸಿಗರೇಟು, ತಂಬಾಕು, ಗುಟಕಾ, ಗಾಂಜಾ, ಮದ್ಯಪಾನಕ್ಕೆ ಬಲಿಯಾಗಿ ಸುಂದರ ಬದುಕನ್ನು ನರಕದ ಬಾಗಿಲಿಗೆ ತಂದು ನಿಲ್ಲಿಸುತ್ತದೆ. ಇಂಥ ದುರಾವಸ್ಥೆಯಿಂದ ವಿಮುಕ್ತನಾಗಲು ಮನಸ್ಸು ಹಾಗೂ ಬುದ್ಧಿ ಜೋಡಣೆ ಅಗತ್ಯವಾಗಿದೆ ಎಂದರು.

ಜೀವನದಲ್ಲಿ ಉತ್ತಮ ಗುಣಗಳು ಪ್ರಾಪ್ತವಾಗಲು ನಿತ್ಯ ಧ್ಯಾನ, ಯೋಗಾದಿ ಕ್ರಿಯೆಗಳನ್ನು ಮಾಡಬೇಕು. ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ರಾಜಯೋಗದ ಮೂಲಕ ದುಷ್ಟ ಆತ್ಮಗಳನ್ನು ಮತ್ತೆ ಪವಿತ್ರ ಆತ್ಮಗಳಾಗಿ ಪರಿವರ್ತಿಸುವ, ಕಳೆದು ಹೋದ ಸುಂದರ ಬದುಕನ್ನು ಮತ್ತೆ ಮರಳಿ ಪಡೆಯು ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು.

ಪಾವನಧಾಮದ ಬಿ.ಕೆ. ಗುರುದೇವಿ ಮಾತನಾಡಿ, ಮನುಷ್ಯ ಚಟಕ್ಕೆ ಜಾರಿದರೆ ಮುಂದೊಂದು ದಿನ ಆತನಿಗೆ ಚಟ್ಟ ಕಟ್ಟುವುದು ಗ್ಯಾರಂಟಿ. ಮೂಢ ನಂಬಿಕೆಗಳಿಗೆ ವಸಿಭೂತರಾಗಿ ಆಹಾರ ಪದಾರ್ಥಗಳ ತ್ಯಾಗ ಮಾಡುವ ಮೂರ್ಖ ಮನುಷ್ಯ ತನ್ನಲ್ಲಿನ ದುಷ್ಚಟಗಳನ್ನು ತ್ಯಾಗ ಮಾಡಿ, ಶಿಷ್ಟನಾಗಿ ಬದುಕಬೇಕು. ಪವಿತ್ರ ವಾತಾವರಣಕ್ಕಾಗಿ ಪ್ರತಿಯೊಬ್ಬರು ಸಂಸ್ಕಾರಿಗಳಾಗಿ ಸಂಸ್ಕೃತಿದತ್ತ ಜೀವನಕ್ಕೆ ಮಾರು ಹೋಗಬೇಕು. ಈ ಕಾರ್ಯ ಬ್ರಹ್ಮಾಕುಮಾರಿ ಈಶ್ವರೀಯ ಸಹೋದರ, ಸಹೋದರಿಯರು ನಿತ್ಯ ಮಾಡುತ್ತಾರೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಂದ ವ್ಯಸನಮುಕ್ತ ಶಿಬಿರದ ಕುರಿತು ನಾಟಕ ಪ್ರದರ್ಶನಗೊಂಡಿತು. ದುಷ್ಚಟಗಳ ದುಷ್ಪರಿಣಾಮ ಕುರಿತು ಹಾಕಲಾದ ಭಿತ್ತಿಚಿತ್ರಗಳ ಕುರಿತು ವಿವರಿಸಿಸಲಾಯಿತು. ಇಡೀ ದಿನಪೂರ್ತಿ ಕೇಂದ್ರ ಬಸ್‌ ನಿಲ್ದಾಣ, ರೈಲು ನಿಲ್ದಾಣ ಹಾಗೂ ನೌಬಾದ್‌ ಬಸ್‌ ಘಟಕಗಳಲ್ಲಿ ವ್ಯಸನಮುಕ್ತಿ ಜಾಗೃತಿ ಕಾರ್ಯಕ್ರಮ ಜರುಗಿತು.

ಪಾವನಧಾಮ ಕೇಂದ್ರದ ಪ್ರವರ್ತಕ ಬಿ.ಕೆ. ಪ್ರಭಾಕರ ಕೋರವಾರ ಮಾತನಾಡಿದರು. ಬಸ್‌ ಘಟಕ ವ್ಯವಸ್ಥಾಪಕ ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿದರು. ರವಿಂದ್ರ ಸ್ವಾಮಿ, ನಿವೃತ್ತ ವೈದ್ಯಾಧಿಕಾರಿ ಗುಂಡಪ್ಪ ಚಿಲ್ಲರ್ಗಿ, ಬಿ.ಕೆ. ಮಂಗಲಾ, ಬಿ.ಕೆ. ಶಿಲ್ಪಾ, ಬಿ.ಕೆ. ವಿಜಯಲಕ್ಷ್ಮೀ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.