ಅಂಗಡಿಗಳ ತೆರವಿಗೆ ಗ್ರಾಪಂನಿಂದ ಗಡುವು
ಗ್ರಾಮ ಪಂಚಾಯತ್ ಆಸ್ತಿ ಉಳಿಸಿಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯ: ಅರುಣ್ಕುಮಾರ್
Team Udayavani, Sep 19, 2019, 1:09 PM IST
ಭೀಮಸಮುದ್ರ: ಗ್ರಾಪಂ ಜಾಗದಲ್ಲಿರುವ ಬೀದಿಬದಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಲಾಯಿತು.
ಭೀಮಸಮುದ್ರ: ಇಲ್ಲಿನ ಗ್ರಾಮ ಪಂಚಾಯತ್ ವತಿಯಿಂದ ರಸ್ತೆ ಅಗಲೀಕರಣ ಮಾಡಲು ನಿರ್ಧರಿಸಲಾಗಿದ್ದು, ಗ್ರಾಪಂ ಜಾಗದಲ್ಲಿರುವ ಬೀದಿಬದಿಯ ಅಂಗಡಿಗಳ ಮಾಲೀಕರಿಗೆ ಬಗ್ಗೆ ಬುಧವಾರ ಗ್ರಾಪಂನಿಂದ ನೋಟಿಸ್ ನೀಡಲಾಯಿತು. ಇನ್ನು ನಾಲ್ಕೈದು ದಿನಗಳಲ್ಲಿ ಅಂಗಡಿಗಳನ್ನು ತೆರವುಗೊಳಿಸುವಂತೆ ಅಂಗಡಿ ಮಾಲೀಕರಿಗೆ ಗ್ರಾಪಂ ಅಧ್ಯಕ್ಷ ಟಿ.ಜಿ. ಅರುಣ್ಕುಮಾರ್ ಗಡುವು ನೀಡಿದರು.
ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷರು, ಸುಮಾರು 10-15 ವರ್ಷಗಳಿಂದ ಗ್ರಾಪಂ ಬೊಕ್ಕಸಕ್ಕೆ ಹಣ ಸಂಗ್ರಹವಾಗುತ್ತಿಲ್ಲ. ಗ್ರಾಮ ಪಂಚಾಯತ್ ಜಾಗದಲ್ಲಿ ತಮಗೆ ತಿಳಿದಂತೆ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಕಳೆದ 2-3 ವರ್ಷದಿಂದ ಅಂಗಡಿ ವ್ಯಾಪಾರಿಗಳು ಹಾಗೂ ರಸ್ತೆ ಪಕ್ಕದಲ್ಲಿ ಅಂಗಡಿಗಳನ್ನು ಇಟ್ಟಿರುವ ಅಂಗಡಿಕಾರರಿಗೆ ನೋಟಿಸ್ ನೀಡುತ್ತಾ ಬರಲಾಗಿದೆ. ಆದರೂ ಅಂಗಡಿ ಖಾಲಿ ಮಾಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದು ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ಗೆ ಸೇರಿದ ಜಾಗಗಳು ಇರುವುದಿಲ್ಲ. ಹಾಗಾಗಿ ಅಂಗಡಿ ತೆರವು ಕಾರ್ಯಾಚರಣೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಲಂಬಾಣಿಹಟ್ಟಿಯಲ್ಲಿರುವ ಗೊಲ್ಲರಹಟ್ಟಿಯಲ್ಲಿ ಜಾಗದ ಸಮಸ್ಯೆ ಇದ್ದು, ರಸ್ತೆ ಅಗಲೀಕರಣ ಮಾಡುವ ಉದ್ದೇಶವಿದೆ. ಆದರೆ ಇಲ್ಲಿ 3-4 ಜನರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರು ವ್ಯಕ್ತವಾಗಿತ್ತು. ತೊಂದರೆ ನೀಡುತ್ತಿರುವವರಿಗೆ ನೋಟಿಸ್ ನೀಡಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಪಿಡಿಒ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಎಚ್.ವಿ. ಲೋಕೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…