ತೊಗರಿ ಖರೀದಿ: ನೋಂದಣಿ ಪ್ರಕ್ರಿಯೆ ಆರಂಭ ವಿಳಂಬ

11 ದಿನಗಳು ಕಳೆದರೂ ಖರೀದಿ ಪ್ರಕ್ರಿಯೆಗೆ ಚಾಲನೆ ಮಾತ್ರ ಸಿಕ್ಕಿಲ್ಲ

Team Udayavani, Jan 2, 2020, 10:40 AM IST

2-January-1

ಬೀದರ: ಮಾರುಕಟ್ಟೆಯಲ್ಲಿ ತೊಗರಿ ದರ ಕುಸಿತದಿಂದ ನಲುಗಿದ್ದ ಅನ್ನದಾತನ ಆಸರೆಗೆ ಕೇಂದ್ರ-ರಾಜ್ಯ ಸರ್ಕಾರಗಳು ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರಗಳನ್ನು ಸ್ಥಾಪಿಸಿವೆ ಆದರೆ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಲು ಆದೇಶಿಸಿ 11 ದಿನ ಕಳೆದರೂ ಈವರೆಗೆ ಪ್ರಕ್ರಿಯೆ ಆರಂಭಗೊಳ್ಳದೇ ಇರುವುದರಿಂದಅನ್ನದಾತ ಆತಂಕದಲ್ಲಿದ್ದಾನೆ  ಪ್ರಸಕ್ತ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ ತೊಗರಿ ಖರೀದಿಗೆ ಕೇಂದ್ರ ಸಕಾರದ ಕನಿಷ್ಠ ಬೆಂಬಲ
5800 ರೂ.ಗಳ ಜತೆ ಪ್ರೋತ್ಸಾಹ ಧನ 300ರೂ. ಸೇರಿ ರೈತರಿಂದ ಪ್ರತಿ ಕ್ವಿಂಟಲ್‌ ತೊಗರಿಯನ್ನು 6100 ರೂ.ಗಳಿಗೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕಳೆದ ಡಿ. 21ರಿಂದ ಜ.10ರವರೆಗೆ ರೈತರು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸುವಂತೆ ಮತ್ತು ನಂತರ 30 ದಿನಗಳ ಕಾಲ ಖರೀದಿ ಪ್ರಕ್ರಿಯೆ ನಡೆಸಲು ಆದೇಶ ಹೊರಡಿಸಿದೆ.

ತೊಗರಿ ಖರೀದಿಗಾಗಿ ನೋಂದಣಿಗೆ ಸರ್ಕಾರ ಕೇವಲ 21 ದಿನಗಳು ಮಾತ್ರ ಕಾಲಾವಕಾಶ ಕಲ್ಪಿಸಿದೆ. ಆದರೆ, ರೈತರು ಹೆಸರು ನೋಂದಣಿ ಆರಂಭಗೊಂಡು 11 ದಿನಗಳು ಕಳೆದರೂ ಇದುವರೆಗೂ ಖರೀದಿ ಪ್ರಕ್ರಿಯೆಗೆ ಚಾಲನೆ ಮಾತ್ರ ಸಿಕ್ಕಿಲ್ಲ. ಈಗ ಉಳಿದಿರುವ 10
ದಿನಗಳಲ್ಲಿ ಎಲ್ಲ ರೈತರ ನೋಂದಣಿ ಕಾರ್ಯ ನಡೆಯುವುದು ಕಷ್ಟ ಸಾಧ್ಯವೆಂಬುದು ರೈತ ಸಮೂಹದ ಅಳಲು.

ಜಿಲ್ಲೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 82 ಸಾವಿರ ಕ್ವಿಂಟಲ್‌ ತೊಗರಿ ಬೆಳೆಯಲಾಗಿದ್ದು, ಎರಡ್ಮೂರು ವಾರಗಳಲ್ಲಿ ಕಟಾವು ಶುರುವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 78 ಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಈ ಬಾರಿ ಉತ್ತಮ ಮಳೆ ಮತ್ತು ಕೀಟ ಬಾಧೆ ಇಲ್ಲವಾದ್ದರಿಂದ ಬಂಪರ್‌ ಇಳುವರಿ ಸಿಗಬಹುದೆಂಬ ನಿರೀಕ್ಷೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿಗೆ ಘೋಷಿಸಿರುವುದು ರೈತರಲ್ಲಿ ಸಂತಸ ಇಮ್ಮಡಿಗೊಳಿಸಿತ್ತು. ಆದರೆ ಇವತ್ತಿಗೂ ನೋಂದಣಿ ಪ್ರಕ್ರಿಯೆ ಆರಂಭಗೊಂಡಿಲ್ಲ. ಇದಕ್ಕೆ ಎನ್‌ಇಎಂಎಲ್‌ ಸಾಫ್ಟವೇರ್‌ನಲ್ಲಿ ತಾಂತ್ರಿಕ ಸಮಸ್ಯೆಯೇ ಕಾರಣವೆಂದು ಹೇಳಲಾಗಿದೆ.

ತೊಗರಿ ಖರೀದಿಗೆ ನಾಫೆಡ್‌ ಹಾಗೂ ಎಫ್‌ಸಿಐ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿ ಮತ್ತು ಮಾರ್ಕ್‌ಫೆಡ್‌, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯನ್ನು ರಾಜ್ಯದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಮಾರ್ಗಸೂಚಿಯನ್ವಯ ಬೀದರ ಸೇರಿ ತೊಗರಿ ಬೆಳೆಯುವ 9 ಜಿಲ್ಲೆಗಳಲ್ಲಿ ಎಕರೆಗೆ 5 ಕ್ವಿಂ. ಮತ್ತು ಪ್ರತಿ ರೈತರಿಂದ ಗರಿಷ್ಠ 10 ಕ್ವಿಂ. ತೊಗರಿ ಖರೀದಿಗೆ ಅವಕಾಶ ನೀಡಲಾಗಿದೆ. ಮಳೆಯಾಶ್ರಿತ ಪ್ರದೇಶವಾಗಿರುವ ಬೀದರ ಜಿಲ್ಲೆಯಲ್ಲಿ ತೊಗರಿ ಬಿತ್ತನೆ ತಡವಾಗಿ ನಡೆಯುವುದರಿಂದ ಬೆಳೆ ಕಟಾವು ಸಹ ವಿಳಂಬ ಆಗುತ್ತದೆ. ಅಲ್ಪ ಅವಧಿಯಲ್ಲಿಯೇ ಎಲ್ಲ
ರೈತರು ನೋಂದಣಿ ಮಾಡಿಸಬೇಕಿರುವುದರಿಂದ ಸರ್ವರ್‌ ಮೇಲೆ ಒತ್ತಡ, ನೂಕು ನುಗ್ಗಲು ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಸರ್ಕಾರ ನೋಂದಣಿ ಪ್ರಕ್ರಿಯೆ ವಿಸ್ತರಿಸಬೇಕೆಂಬುದು ರೈತರ ಒತ್ತಾಸೆಯಾಗಿದೆ.

ಉತ್ತಮ ಮಳೆ ಹಿನ್ನೆಲೆಯಲ್ಲಿ ಬಂಪರ್‌ ಬೆಳೆ ಬರುವ ನಿರೀಕ್ಷೆ ಇದೆ. ಸರ್ಕಾರದಿಂದ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಮುಂದಾಗಿರುವುದರಿಂದ ಖುಷಿಯಲ್ಲಿದ್ದೆವು. ತೊಗರಿ ಖರೀದಿ ನೋಂದಣಿ ಪ್ರಕ್ರಿಯೆಗೆ ಕೇವಲ 21 ದಿನಗಳ ಅಲ್ಪ ಸಮಯ
ನೀಡಲಾಗಿದೆ. ಆದರೆ ಇವತ್ತಿಗೂ ನೋಂದಣಿ ಆರಂಭಿಸಿಲ್ಲ. ಇದಕ್ಕಾಗಿ ನಾವು ಕಾಯ್ದು ಕುಳಿತಿದ್ದೇವೆ. ಇನ್ನೂ ಖರೀದಿ ಯಾವಾಗ
ಮಾಡುತ್ತಾರೆಂಬ ಆತಂಕ ಮೂಡಿದೆ.
ಸಿದ್ರಾಮ ಬೇಲೂರೆ, ರೈತ

ಬೀದರ ಜಿಲ್ಲೆಯಲ್ಲಿ ತೊಗರಿ ಖರೀದಿಸಲು ಒಟ್ಟು 78 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಡಿ.21ರಿಂದಲೇ ನೋಂದಣಿ ಆರಂಭಗೊಳ್ಳಬೇಕಿತ್ತು. ಆದರೆ, ಎನ್‌ ಇಎಂಎಲ್‌ ಸಾಫ್ಟವೇರ್‌ನಲ್ಲಿನ ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗಿದೆ. ಇಂದು ಅಥವಾ ನಾಳೆ ಪ್ರಕ್ರಿಯೆ ಶುರುವಾಗಲಿದೆ. ನೋಂದಣಿ ದಿನಾಂಕ ವಿಸ್ತರಿಸುವ ಕುರಿತಂತೆ ಈಗಾಗಲೇ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ.
ಪ್ರಭಾಕರ, ಶಾಖಾ ವ್ಯವಸ್ಥಾಪಕರು,
ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ,
ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.