ಕದನ ಕಲಿಗಳ ಮೇಲೆ ಬೆಟ್ಟಿಂಗ್‌


Team Udayavani, Apr 25, 2019, 12:44 PM IST

Udayavani Kannada Newspaper

ಔರಾದ: ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಗಡಿ ತಾಲೂಕಿನಲ್ಲಿ ಇದೀಗ ಮಗ ಗೆಲ್ತಾನಾ? ಅಥವಾ ಮೊಮ್ಮಗ ಗೆಲ್ತಾನಾ ಎನ್ನುವ ರಾಜಕೀಯ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ.

ತಾಲೂಕಿನೊಂದಿಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳ ರಕ್ತ ಸಂಬಂಧವಿದೆ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಔರಾದ ಪಟ್ಟಣದ ಮಗ ಹಾಗೂ ನಿವಾಸಿ. ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆ ತಾಲೂಕಿನ ನಾಗೂರ ಗ್ರಾಮದ ಮೊಮ್ಮಗ. ಹೀಗಾಗಿ ತಾಲೂಕಿನಲ್ಲಿ ಮಗ ಗೆಲ್ತಾನಾ? ಇಲ್ಲವೇ ಮೊಮ್ಮಗ ಗೆಲ್ತಾನಾ ಎಂಬ ರಾಜಕೀಯ ಚರ್ಚೆ ಬಿರುಸುಗೊಂಡಿದೆ.

ಚುನಾವಣೆ ಘೋಷಣೆಯಾದ ದಿನದಿಂದ ಯಾವ ಗ್ರಾಮದಲ್ಲಿ ಎಷ್ಟು ಮತದಾರರು ಇದ್ದಾರೆ?, ಎಷ್ಟು ಮತಗಳು ನಮ್ಮ ಪಕ್ಷಕ್ಕೆ ಬೀಳುತ್ತವೆ? ಮತದಾರರನ್ನು ನಮ್ಮ ಪಕ್ಷದ ಕಡೆಗೆ ಸೆಳೆಯಲು ಏನು ಮಾಡಬೇಕೆಂದು ಬಿಜೆಪಿ-ಕಾಂಗ್ರೆಸ್‌ ಮುಖಂಡರು ಹಾಕುತ್ತಿದ್ದ ಲೆಕ್ಕಾಚಾರಕ್ಕೆ ಮಂಗಳವಾರ ತೆರೆ ಬಿದ್ದಿದ್ದು, ಮತದಾರ ಯಾರಿಗೆ ಮಣೆ ಹಾಕಲಿದ್ದಾನೆ ಎನ್ನುವುದು ಫಲಿತಾಂಶದ ನಂತರವೇ ಗೊತ್ತಾಗಲಿದೆ.

ಮಂಗಳವಾರವಷ್ಟೇ ಮತದಾನ ಮಾಡಿದ ಮತದಾರರು ಹಾಗೂ ತಿಂಗಳಿಂದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಎರಡು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ನಾಯಕರ ಸೋಲು-ಗೆಲುವಿನ ಲೆಕ್ಕಾಚಾರದ ಮೇಲೆ ಟ್ರಬಲ್ ಆಗಿ ಮಾತಾಡುತ್ತಿರುವುದು ಒಂದೆಡೆಯಾದರೆ, ಇನ್ನೊಂದಡೆ ಎರಡೂ ಅಭ್ಯರ್ಥಿಗಳ ಮೇಲೆ ಬೆಟ್ಟಿಂಗ್‌ ಕೂಡ ಜೋರಾಗಿದೆ ಎನ್ನುವ ಸದ್ದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಪಟ್ಟಣ ಸೇರಿದಂತೆ ಗ್ರಾಮೀಣ ಭಾದಗಲ್ಲಿನ ಎರಡು ಪಕ್ಷದ ಮುಖಂಡರು ನಮ್ಮ ನಾಯಕರೇ ಗೆಲ್ಲುತ್ತಾರೆ ಎಂದು ಆತ್ಮವಿಶ್ವಾಸದಿಂದ ಹೇಳುವುದಲ್ಲದೆ ಹೋಟೆಲ್ ಅಂಗಡಿ, ಬಸ್‌ ನಿಲ್ದಾಣ,ಪ್ರಮುಖ ವೃತ್ತಗಳ ಬಳಿ ಹಾಗೂ ಸಾರ್ವಜನಿಕ ಸ್ಥಳದಲ್ಲಿನ ಕಟ್ಟೆಯಲ್ಲಿ ಕುಳಿತು ತಮ್ಮ ವಾರ್ಡ್‌ ಬೂತ್‌ನಲ್ಲಿ ಮತದಾನ ನಡೆದ ಬಗ್ಗೆ ಯಾವ ಪಕ್ಷಕ್ಕೆ ಎಷ್ಟು ಮತಗಳು ಬೀಳುತ್ತದೆ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿವೆ.

ಬೀಗುತ್ತಿರುವ ಉಭಯ ಮುಖಂಡರು: ಬಿಜೆಪಿ ಮುಖಂಡರು ಪ್ರಧಾನಿ ಮೋದಿ ಅಲೆಯಲ್ಲಿ ಗೆಲುವು ನಮ್ಮದೇ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ದಿ. ಧರಂಸಿಂಗ್‌ ಸೋಲಿಸಿದ ನಮ್ಮ ನಾಯಕರು ಈ ಬಾರಿ ಭಾಲ್ಕಿ ತಾಲೂಕಿನ ಶಾಸಕರಿಗೆ ಸೋಲುಣಿಸುವುದರಲ್ಲಿ ಎರಡು ಮಾತಿಲ್ಲವೆಂದು ಬೀಗುತ್ತಿದ್ದಾರೆ.

ಆದರೆ ಇತ್ತ ತಾಲೂಕಿನ ಇತಿಹಾಸದಲ್ಲಿಯೇ ಕೈ ಪಕ್ಷದ ನಾಯಕರು ಕಠಿಣ ಪರಿಶ್ರಮ ಮಾಡಿದ್ದಾರೆ. ಅತಿ ಹೆಚ್ಚು ಶಾಸಕರು ನಮ್ಮ ಪಕ್ಷದವರೇ ಆಗಿದ್ದಾರೆ. ಈಶ್ವರ ಖಂಡ್ರೆ ಉತ್ತಮ ವ್ಯಕ್ತಿತ್ವ ಉಳ್ಳ ನಾಯಕರಾಗಿದ್ದಾರೆ. ತಂದೆ ಭೀಮಣ್ಣ ಖಂಡ್ರೆ ಸಾರಿಗೆ ಸಚಿವರಾಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸ ಹಾಗೂ ಈಶ್ವರ ಖಂಡ್ರೆ ಸಚಿವರಾಗಿದ್ದಾಗ ಮಾಡಿದ ಕೆಲಸಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎನ್ನುತ್ತಿದ್ದಾರೆ.

ಆದರೆ ವಿಜಯಲಕ್ಷ್ಮೀ ಯಾರ ಪಾಲಿಗೆ ಒಲಿಯುತ್ತಾಳೆ ಎನ್ನುವುದು ಮಾತ್ರ ಇನ್ನೂ ಇನ್ನೂ ಒಂದು ತಿಂಗಳ ನಂತರವೇ ತಿಳಿದುಬರಬೇಕಿದೆ.

ಬೆಟ್ಟಿಂಗ್‌ ಹಾವಳಿ: ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರು ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಖಚಿತವಾಗಿದೆ ಎಂದು ಸಾರ್ವಜನಿಕ ಸ್ಥಳದಲ್ಲಿಯೇ ಕುಳಿತು ಬೆಟ್ಟಿಂಗ್‌ ಹಚ್ಚುತ್ತಿರುವುದು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ನಡೆಯುತ್ತಿವೆ. ಇನ್ನೂ ವಿವಿಧ ಪಕ್ಷದ ಮುಖಂಡರು ತಮ್ಮ ನಾಯಕರಿಗೆ ತಮ್ಮ ವಾರ್ಡ್‌ ಹಾಗೂ ಗ್ರಾಮದಲ್ಲಿನ ನಡೆದ ಮತದಾನದ ಪ್ರಮಾಣ ತಿಳಿಸಲು ಅವರಿರುವ ಸ್ಥಳಕ್ಕೆ ಹೋಗಿದ್ದಾರೆ ಎನ್ನುವ ಮಾತುಗಳಿವೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇದೆ. ಈ ಅಲೆಯಲ್ಲಿ ನಮ್ಮ ಅಭ್ಯರ್ಥಿಗೆ ಗೆದ್ದೇ ಗೆಲ್ಲುತ್ತಾರೆ. ಅದರಲ್ಲಿ ಯಾವುದೇ ರೀತಿಯ ಸಂದೇಹ ಬೇಡ.
•ಸತೀಶ ಪಾಟೀಲ,
ಬಿಜೆಪಿ ತಾಲೂಕು ಅಧ್ಯಕ್ಷ

ಬೀದರ ಜಿಲ್ಲೆಯಲ್ಲಿ ಮೋದಿ ಮೋಡಿ ನಡೆಯುವುದಿಲ.್ಲ ಇಲ್ಲಿನ ಜನರು ಉತ್ತಮ ಅಭಿವೃದ್ಧಿ ಕೆಲಸ ಮಾಡುವ ವ್ಯಕ್ತಿ ಆಯ್ಕೆ ಮಾಡುತ್ತಾರೆ. ಬಿಜೆಪಿ ಪಕ್ಷದವರು ಏನೇ ಹೇಳಿದ್ರೂ ಗೆಲುವು ಖಂಡಿತವಾಗಿ ನಮ್ಮದೇ. ಇದರಲ್ಲಿ ಅನುಮಾನವೇ ಬೇಡ.
•ರಾಜಕುಮಾರ ಹಲ್ಬರ್ಗೆ,
ಕಾಂಗ್ರೆಸ್‌ ತಾಲೂಕು ಅಧ್ಯಕ್ಷ

ರವೀಂದ್ರ ಮುಕ್ತೇದಾರ್‌

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.