ಮತದಾನ ಶೇ. 2.65 ಜಿಗಿತ
•17,73,911 ಮತದಾರರ ಪೈಕಿ 11,10,035 ಮಂದಿಯಿಂದ ಹಕ್ಕು ಚಲಾವಣೆ
Team Udayavani, Apr 25, 2019, 4:04 PM IST
ಬೀದರ: ಬೀದರ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ 1,72,949 ಮತದಾರರ ಸಂಖ್ಯೆ ಹೆಚ್ಚಿದರೂ ಕೂಡ ನಿಗದಿತ ಪ್ರಮಾಣದಲ್ಲಿ ಮತದಾನ ನಡೆದಿಲ್ಲ. ಅಲ್ಲದೆ, ಹೆಚ್ಚಿನ ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಜಿಲ್ಲೆಯಾದಂತ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ನಡೆಸಿದರೂ ನಿಗದಿತ ಫಲ ನೀಡಿಲ್ಲ.
ಭಾರೀ ಪ್ರಮಾಣದ ಏರಿಕೆ ಇಲ್ಲ: ಕಳೆದ ಲೊಕಸಭೆ ಚುನಾವಣೆಯಲ್ಲಿ ಅಂಚೆ ಮತದಾನ ಬಿಟ್ಟು 9,59,045 ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಅದೇ ರೀತಿ 2019 ಲೋಕಸಭೆ ಚುನಾವಣೆಯಲ್ಲಿ ಒಟ್ಟು, 11,10,035 ಮತದಾರರು ಹಕ್ಕು ಚಲಾಯಿಸಿದ್ದು, ಕಳೆ ಚುನಾವಣೆಗೆ ಹೋಲಿಕೆ ಮಾಡಿದರೆ ಬರೋಬ್ಬರಿ 1,50,990 ಹೆಚ್ಚಿನ ಮತದಾರರು ಮತ ಚಲಾಯಿಸಿದ್ದಾರೆ. ಹಾಗಂತ ಶೇಕಡಾವಾರು ಮತದಾನದಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿಲ್ಲ.
6,63,876 ದೂರ ಉಳಿದ ಮತದಾರರು: ಕಳೆದ ಚುನಾವಣೆಗೆ ಹೋಲಿಸಿದರೆ ಶೇ. 2.65 ಹೆಚ್ಚಿನ ಮತದಾನ ಆಗಿದೆ. ಆದರೂ ಕೂಡ 6,63,876 ಮತದಾರರು ಮತದಾನದಿಂದ ದೂರ ಉಳಿದಿದ್ದಾರೆ.
ಚಿಂತನೆ ಮೂಡಿಸಿದ ಮತದಾನ:ಪುರುಷ 5,75,199, ಮಹಿಳಾ 5,34,825 ಮತ್ತು ಇತರೆ 11 ಜನ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಈ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಿಸಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವುದು ಅತ್ಯಗತ್ಯ ಎಂಬುವುದು ಜನ ಸಾಮಾನ್ಯರಲ್ಲಿ ಮತದಾನ ಮಹತ್ವ ಜನ ಜಾಗೃತಿಯ ವಿವಿಧ ಕಾರ್ಯಕ್ರಮ ನಡೆಸಿದರೂ ಹೆಚ್ಚಿನ ಮತದಾನ ಆಗದಿರುವುದು ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ಯಾವ ಕಾರಣಕ್ಕೆ ಹೆಚ್ಚಿನ ಮತದಾನ ನಡೆದಿಲ್ಲ ಎಂಬುವುದು ತಿಳಿದುಕೊಳ್ಳಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಿದೆ. ಇನ್ನೂ ಹೆಚ್ಚಿನ ಮತದಾನವಾಗುತ್ತೆ ಎಂಬ ನಿರೀಕ್ಷೆ ಇತ್ತು. ಕಡಿಮೆ ಮತದಾನಕ್ಕೆ ಬೇಸಿಗೆ ಬಿಸಿಲು ಹಾಗೂ ದೂರದ ಉರುಗಳಲ್ಲಿ ಉಳಿದುಕೊಂಡ ಮತದಾರರು ಬಂದು ಮತದಾನ ಮಾಡದಿರುವುದೇ ಕಾರಣವಾಗಿರಬಹುದು. ಸ್ವೀಪ್ ತಂಡಗಳಿಂದ ನಡೆಸಿದ ಜನ ಜಾಗೃತಿ ಮೂಲಕ ಈ ಬಾರಿ ವಿಕಲಚೇತನರು ಶೇ.93 ಮತದಾನ ಮಾಡಿದ್ದಾರೆ. ಒಟ್ಟಾರೆ ಶೇ.2ಕ್ಕೂ ಅಧಿಕ ಪ್ರಮಾಣ ಮತದಾನ ಹೆಚ್ಚಾಗಿರುವುದು ಸಂತಸ ತಂದಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಮತದಾನವಾಗಿದೆ.
•ಮಹಾಂತೇಶ ಬೀಳಗಿ,
ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್