ಇಡೀ ಊರಿಗೆ ಕೇವಲ 10 ಅಡಿ ಜಾಗ!

ಬೋರಾಳ ಗ್ರಾಮದಲ್ಲಿಲ್ಲ ಸ್ಮಶಾನ ಭೂಮಿಖಾಸಗಿ ವ್ಯಕ್ತಿಗಳ ಹೊಲದ ಅಂಚು ಬಳಕೆ

Team Udayavani, Jan 6, 2020, 1:21 PM IST

6-Jnauary-13

ಔರಾದ: ಬೋರಾಳ ಗ್ರಾಮದಲ್ಲಿ ಯಾರಾದರೂ ಮೃತಪಟ್ಟಾಗ, ಖಾಸಗಿ ವ್ಯಕ್ತಿಗಳು ನೀಡಿದ ಹೊಲದ ಅಂಚಿನ ಕಾಲುವೆ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡುವುದೇ ಸವಾಲಿನ ಕೆಲಸವಾಗಿ ಪರಿಣಮಿಸಿದೆ.

ಗ್ರಾಮದಲ್ಲಿ 120ಕ್ಕೂ ಹೆಚ್ಚು ಎಸ್‌ಸಿ ಸಮುದಾಯದ ಕುಟುಂಬಗಳಿವೆ. ಆದರೆ ಇಲ್ಲಿ ಜನರು ಮೃತಪಟ್ಟಾಗ ಅಂತ್ಯಕ್ರಿಯೆ ಮಾಡಲು ಖಾಸಗಿ ವ್ಯಕ್ತಿಗಳು ನೀಡಿದ ಕೇವಲ ಹತ್ತು ಅಡಿ ಕಾಲುವೆಯ ಜಾಗವೇ ಗತಿಯಾಗಿದೆ. ಮಳೆಗಾಲದಲ್ಲಿ ಅದು ನೀರು ಹರಿಯುವ ಸ್ಥಳವಾಗಿದ್ದು, ಇಬ್ಬರು ಸಹೋದರರ ಹೊಲದ ಅಂಚಿನ ಸ್ಥಳ ಆದಾಗಿದೆ. ಹಾಗಾಗಿ ಮಳೆಗಾಲದಲ್ಲಿ ಅಲ್ಲಿ ಮಳೆಯ ನೀರು ಹರಿದು ಹೋವುದರಿಂದ, ಶವ ಹೂಳಲು ಭೂಮಿ ಅಗಿಯುವಾಗ ಗುಂಡಿಯಲ್ಲಿ ತುಂಬಿಕೊಳ್ಳುವ ನೀರು ತೆಗೆಯುವುದೇ ದೊಡ್ಡ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಈ ಕುರಿತು ತಾಲೂಕು ಆಡಳಿತಕ್ಕೆ ಸುಮಾರು 45 ಬಾರಿ ಮನವಿ ಸಲ್ಲಿಸಿದ್ದಾರೆ.

ಗ್ರಾಮದ ಮುಖಂಡ ಹಾಗೂ ದಲಿತ ಸಂಘಟನೆ ತಾಲೂಕು ಅಧ್ಯಕ್ಷ ಉಮಕಾಂತ ಸೋನೆ ಅವರು ಈ ವಿಷಯ ಕುರಿತು ತಾಲೂಕು ಆಡಳಿತಾಧಿಕಾರಿ ಕಚೇರಿ ಎದುರು ಆರು ಬಾರಿ ಪ್ರತಿಭಟನೆ, ಎರಡು ಬಾರಿ ಉಪವಾಸ ಸತ್ಯಾಗ್ರಹ ಮತ್ತು ಒಂದು ಬಾರಿ ತಹಶೀಲ್ದಾರ್‌ ಕಚೇರಿ ಎದುರು ಶವ ಇಟ್ಟು ಹೋರಾಟ ಮಾಡಿದಾಗ, ಸ್ಮಶಾನ ಭೂಮಿ ನೀಡುವುದಾಗಿ ಹೇಳಿಕೆ ನೀಡಿದ್ದ ತಾಲೂಕು ಆಡಳಿತ ಇಂದಿಗೂ ಈ ಊರಿಗೆ ಸ್ಮಶಾನ ಭೂಮಿ ನೀಡಿಲ್ಲ. ಇದರಿಂದ ದಲಿತ ಬಡಾವಣೆಯಲ್ಲಿ ಜನರು ಮೃತಪಟ್ಟಾಗ ಸಮಸ್ಯೆಗಳಾಗುತ್ತಿದೆ.

ನಮಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಸರ್ಕಾರ ಪ್ರತಿವರ್ಷ ವಿನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ. ಅದರಂತೆ ಶಾಶ್ವತ ಸ್ಮಶಾನ ಭೂಮಿ ನೀಡಿದರೆ ನಮ್ಮ ತಲತಲಾಂತರದಿಂದ ಬಂದ ಸ್ಮಶಾನ ಭೂಮಿಯ ಸಮಸ್ಯೆ ಈಡೇರುತ್ತದೆ ಎನ್ನುತ್ತಾರೆ ಅಲ್ಲಿನ ಜನರು.

ಬೋರಾಳ ಗ್ರಾಮದಲ್ಲಿ 30 ಎಕರೆ ಸರ್ಕಾರಿ ಗೋಮಾಳ ಭೂಮಿ ಇದೆ. ಅದರಲ್ಲಿನ ಒಂದು ಎಕರೆ ಭೂಮಿ ನೀಡುವಂತೆ ತಹಶೀಲ್ದಾರ್‌ಗೆ, ಜಿಲ್ಲಾ ಧಿಕಾರಿಗಳಿಗೆ, ಶಾಸಕರಿಗೆ ಎರಡು ವರ್ಷಗಳ ಹಿಂದೆಯೇ ಪತ್ರ ಬರೆಯಲಾಗಿದೆ. ಆದರೂ ನಮ್ಮ ಸಮಸ್ಯೆ ಬಗೆ ಹರಿದಿಲ್ಲ. ಗ್ರಾಮದ ಮುಖಂಡರು ನೀಡಿದ 10 ಅಡಿ ಭೂಮಿಯಲ್ಲಿ ಒಬ್ಬರ ಅತ್ಯಕ್ರಿಯೆ ಮಾಡಲು ಹೋದರೆ ಇನ್ನೊಬ್ಬರ ಕುಣಿ ಅಗೆಯುವ ಕೆಲಸವಾಗುತ್ತಿದೆ. ಎರಡು ಮೂರು ದಿನಗಳ ಅಂತರದಲ್ಲಿ ಇನ್ನೊಬ್ಬರು ಮೃತಪಟ್ಟರೆ ಅತ್ಯಕ್ರಿಯೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ಗ್ರಾಮದ ಜನರು.

ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿ ಕುಳಿತುಕೊಂಡು ವೇತನ ಪಡೆದರೆ ಸಾಲದು.
ನಮ್ಮೂರಿನ ಸಮಸ್ಯೆ ಅರಿತುಕೊಂಡು ಬಗೆ ಹರಿಸಬೇಕು. ಇಲ್ಲವಾದಲ್ಲಿ ಊರಿನ ಜನರೆಲ್ಲ ಸೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.