ಬೀದರನಲ್ಲಿ 11ಕ್ಕೂ ಹೆಚ್ಚು ಗೋ ಶಾಲೆ; ಸೌಲಭ್ಯ ಕೊರತೆ

ಅಶಕ್ತ ಗೋವು ಹಾಗೂ ದನ-ಕರುಗಳಿಗೆ ಹೊಸ ಬದುಕು ನೀಡಲಾಗುತ್ತಿದೆ.

Team Udayavani, Jan 11, 2021, 3:37 PM IST

ಬೀದರನಲ್ಲಿ 11ಕ್ಕೂ ಹೆಚ್ಚು ಗೋ ಶಾಲೆ; ಸೌಲಭ್ಯ ಕೊರತೆ

ಬೀದರ: ಗೋವುಗಳ ರಕ್ಷಣೆಗೆ ಗಡಿ ಜಿಲ್ಲೆ ಬೀದರನಲ್ಲಿ ಆರಂಭಿಸಿರುವ ಗೋ ಶಾಲೆಗಳು ಜಾನುವಾರುಗಳ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಆದರೆ,
ಕೆಲವು ಗೋ ಶಾಲೆಗಳು ಅಗತ್ಯ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಜಾನುವಾರುಗಳು ಪರದಾಡುವಂತಾಗಿದೆ.

ಬೀದರ ಜಿಲ್ಲೆಯಲ್ಲಿ 11ಕ್ಕೂ ಹೆಚ್ಚು ಗೋ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸಾವಿರಾರು ಜಾನುವಾರುಗಳಿಗೆ ಆಶ್ರಯ ತಾಣಗಳಾಗಿವೆ. ಬಹುತೇಕ ಗೋ ಶಾಲೆಗಳು ಮಠ-ಮಂದಿರದ ಅಧೀನದಲ್ಲಿದ್ದರೆ ಉಳಿದವುಗಳು ಖಾಸಗಿ ಸಂಸ್ಥೆಗಳ ಅಡಿಯಲ್ಲಿವೆ. ದೈವ ಸ್ವರೂಪವಾಗಿ ಕಾಣುವ ಗೋವುಗಳ ರಕ್ಷಣೆ ಮಾಡಲಾಗುತ್ತಿದೆ. ಅದರಲ್ಲೂ ವಯಸ್ಸಾದ, ಅಶಕ್ತ ಗೋವು ಹಾಗೂ ದನ-ಕರುಗಳಿಗೆ ಹೊಸ ಬದುಕು ನೀಡಲಾಗುತ್ತಿದೆ. ಯಾವುದಕ್ಕೂ ಉಪಯುಕ್ತವಲ್ಲದ ಗೋವುಗಳಿಗೂ ಸಹ ಶಾಲೆಗಳಲ್ಲಿ ಮೇವು, ನೀರು ಹಾಕಿ ಸಾಕಲಾಗುತ್ತಿದೆ.

ಜಿಲ್ಲೆಯಲ್ಲಿ ಬೀದರನ ರಾಂಪುರೆ ಕಾಲೋನಿಯ ಲಕ್ಷ್ಮೀ ಸತ್ಯನಾರಾಯಣ ಚಾರಿಟೆಬಲ್‌ ಟ್ರಸ್ಟ್‌ನ ಗೋ ಶಾಲೆ (170 ಜಾನುವಾರು), ಔರಾದನ ಅಮರೇಶ್ವರ ಗೋ ಶಾಲೆ (105), ಸೋನಾಳವಾಡಿಯ ಮಹಾದೇವ ಗೋಶಾಲೆ (120), ಭಾಲ್ಕಿ ತೆಗಣಿ ತಾಂಡಾದ ಸುರಗಾಯಿ ರಾಮಣ್ಣ ಗೋ ಶಾಲೆ (101), ಮಾಣಿಕನಗರ ಗೋ ಶಾಲೆ (160), ಚಾಂಗಲೇರಾದ ವೀರಭದ್ರೇಶ್ವರ ಚಾರಿಟೇಬಲ್‌ ಟ್ರಸ್ಟ್‌ ನ ಗೋ ಶಾಲೆ (165), ಹೊನ್ನಿಕೇರಿಯ ಗೋ ಶಾಲೆ (82), ಪಾತರಪಳ್ಳಿಯ
ಪ್ರಗತಿ ಅಭಿವೃದ್ಧಿ ಸಂಸ್ಥೆ (60) ಹಾಗೂ ಹುಮನಾಬಾದನ ಜಗದ್ಗುರು ಸಿದ್ಧಬಸವೇಶ್ವರ ವಿದ್ಯಾಪೀಠ ಟ್ರಸ್ಟ್‌ ಗೋ ಶಾಲೆ (144)ಗಳು ಜಾನುವಾರು ಪಾಲನೆಯಲ್ಲಿ ತೊಡಗಿಸಿಕೊಂಡಿವೆ.

ಬೇಕಿದೆ ಸರ್ಕಾರದ ಧನಸಹಾಯ:
ಮಠ- ಮಂದಿರದ ಲಭ್ಯ ಜಮೀನು ಇಲ್ಲವೇ ಗುತ್ತಿಗೆ ಜಮೀನು ಪಡೆದು ಜಾನುವಾರುಗಳನ್ನು ಸಾಕಲು ಶೆಡ್‌, ಹುಲ್ಲು ಮೇಯಿಲು ಮತ್ತು ಮೇವು ಉತ್ಪಾದನೆ ಮಾಡಲಾಗುತ್ತಿದೆ. ಮೂಲ ಸೌಲಭ್ಯಕ್ಕಾಗಿ ಗೋ ಶಾಲೆಗಳಿಗೆ 10 ಲಕ್ಷ ರೂ.ಗಳವರೆಗೆ ವಿವಿಧ ಕಂತುಗಳಲ್ಲಿ ಸಹಾಯ ಧನ ಕಲ್ಪಿಸಲಾಗಿದೆ. ಕೆಲವು ಗೋ ಶಾಲೆಗಳಿಗೆ ದಾನಿಗಳಿಂದ ಧನ ಸಹಾಯ, ಮೇವು ಪೂರೈಕೆ ಆಗುತ್ತಿವೆ. ಆದರೆ, ನಿರ್ವಹಣೆ ವೆಚ್ಚ ಹೆಚ್ಚುತ್ತಿರುವುದರಿಂದ ಸರ್ಕಾರದ ನೆರವಿನ ಹಸ್ತಕ್ಕಾಗಿ ಎದುರು ನೋಡುವಂತಾಗಿದೆ.

ಆರ್ಥಿಕವಾಗಿ ಸದೃಢವಾಗಿರುವ ಟ್ರಸ್ಟ್‌ಗಳು ಸುಸಜ್ಜಿತ ಗೋ ಶಾಲೆಗಳನ್ನಾಗಿ ರೂಪಿಸಿದ್ದು, ಸಕಾಲಕ್ಕೆ ಮೇವು, ನೀರು ಪೂರೈಸುವುದರ ಜತೆಗೆ ಬೇಸಿಗೆಯಲ್ಲಿ ತಂಪು ಹವೆಗಾಗಿ ಫ್ಯಾನ್‌ಗಳನ್ನು ಅಳವಡಿಸಿ ಗಮನ ಸೆಳೆದಿವೆ. ಬಹುತೇಕ ಗೋ ಶಾಲೆಗಳು ಬೇಸಿಗೆ ಸಂದರ್ಭದಲ್ಲಿ ಮೇವು ಮತ್ತು ನೀರಿನ ಕೊರತೆ ಎದುರಿಸುತ್ತಿವೆ. ಸುತ್ತು ತಂತಿ ಬೇಲಿ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ಮುಖ್ಯವಾಗಿ ಪಶುಗಳ ಆರೋಗ್ಯ ರಕ್ಷಣೆಗಾಗಿ ವಾರಕ್ಕೊಮ್ಮೆ ಆಯಾ ಗೋ ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕಾದ ಪಶು ವೈದ್ಯರು ನಿರ್ಲಕ್ಷ್ಯ ತೋರುತ್ತಿರುವ ಆರೋಪಗಳೂ ಕೇಳಿ ಬಂದಿವೆ. ಮೂಲ ಸೌಲತ್ತುಗಳ ಕೊರತೆ ಎದುರಿಸುತ್ತಿರುವ ಗೋ ಶಾಲೆಗಳತ್ತ ಆಡಳಿತ ಚಿತ್ತಹರಿಸಿ ಮೂಕ ಪ್ರಾಣಿಗಳ ರೋದನೆಯನ್ನು ತೀರಿಸಬೇಕಾಗಿದೆ.

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.