ತುರ್ತು ಸೇವೆಗೆ 112 ಸಹಾಯವಾಣಿ


Team Udayavani, Nov 27, 2021, 4:04 PM IST

22emergency

ಹುಮನಾಬಾದ: ಯಾವುದೇ ಭಾಗದಲ್ಲಿ ಸಮಸ್ಯೆ ಕಂಡುಬಂದ ಕೂಡಲೇ ತುರ್ತು ಸೇವೆಗಾಗಿ 112ಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಸಿಪಿಐ ಮಲ್ಲಿಕಾರ್ಜುನ ಯಾತನೂರ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆ ವತಿಯಿಂದ ಪಟ್ಟಣದ ಥೇರ್‌ ಮೈದಾನ, ಬಸ್‌ ನಿಲ್ದಾಣ ಸೇರಿದಂತೆ ವಿವಿಧೆಡೆ ಏರ್ಪಡಿಸಿದ್ದ 112 ಜನಜಾಗೃತಿ ಹಾಗೂ ಕಬ್ಬಿನ ಲಾರಿಗಳಿಗೆ ರೇಡಿಯಂ ಅಳವಡಿಸುವ ಮೂಲಕ ಜನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಈ ಹಿಂದೆ ಅಗ್ನಿ ಅವಘಡಕ್ಕೆ ಪೊಲೀಸ್‌, ಆರೋಗ್ಯ ಇಲಾಖೆಗಳಿಗೆ ಪ್ರತ್ಯೇಕ ಕರೆ ಸಂಖ್ಯೆಗಳಿದ್ದವು. ಆದರೆ ಇದೀಗ ಸರ್ಕಾರ 112 ಸಹಾಯವಾಣಿ ಆರಂಭಿಸಿದ್ದು, ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ಇತರೆ ತುರ್ತು ಸೇವೆ ತ್ವರಿತಗತಿಯಲ್ಲಿ ಸಾರ್ವಜನಿಕರು ಪಡೆಯಬಹುದು. ಪ್ರತಿಯೊಬ್ಬರೂ 112 ಸಹಾಯವಾಣಿಗೆ ದಿನದ 24 ಗಂಟೆಗಳಲ್ಲಿ ಕರೆ ಮಾಡಿ ಲಾಭ ಪಡೆದುಕೊಳ್ಳಬಹುದು ಎಂದರು.

ಪಿಎಸ್‌ಐ ರವಿಕುಮಾರ ನಾಯ್ದೊಡಿ ಮಾತನಾಡಿ, 112ಗೆ ಕರೆ ಮಾಡುವ ಮೂಲಕ ಕಡಿಮೆ ಅವಧಿಯಲ್ಲಿ ಸರ್ಕಾರಿ ಇಲಾಖೆ ಸೇವೆ ಲಭ್ಯವಾಗುತ್ತದೆ. ಈಗಾಗಲೇ ಎಲ್ಲೆಡೆ 112 ಪೊಲೀಸ್‌ ವಾಹನಗಳು ಸಂಚರಿಸುತ್ತಿದ್ದು, ದೂರು ಬರುವ ಕಡೆಗೆ ಕೂಡಲೇ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ನೀಡುತ್ತಿದ್ದಾರೆ. ಎಲ್ಲ ತುರ್ತು ಸೇವೆಗಳಿಗೆ 112 ಎಂಬುದು ಎಲ್ಲರೂ ನೆನಪಿಸಿಕೊಳ್ಳುವ ಮೂಲಕ ಇತರರಿಗೂ ಜಾಗೃತಿ ಮೂಡಿಸಿ ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿನ ಆಟೋ, ಬಸ್‌ ಸೇರಿದಂತೆ ಇತರೆ ವಾಹನಗಳಿಗೆ 112 ಭಿತ್ತಿಪತ್ರ ಅಂಟಿಸಿದರು. ಪಟ್ಟಣದ ಹೊರವಲಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಸಾಗುವ ಲಾರಿ ತಡೆದು ರೇಡಿಯಂ ಅಳವಡಿಸುವ ಮೂಲಕ ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ವಾಹನ ಚಾಲಕರಿಗೆ ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಬಸವರಾಜ ತಿಳಿವಳಿಕೆ ನೀಡಿದರು. ಈ ವೇಳೆ ಪೊಲೀಸ್‌ ಸಿಬ್ಬಂದಿಗಳಾದ ವಿಜಯಕುಮಾರ ಮೇಟಿ, ಮಲ್ಲು ಮಳ್ಳಿ, ಆಕಾಶ ಸಿಂಧೆಮ ಭಗವಾನ, ಶಿವಾನಂದ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.