ಬೀದರ್: 119 ಹೊಸ ಪಾಸಿಟಿವ್ ಪ್ರಕರಣ ಪತ್ತೆ ; ಒಂದು ಸಾವು
ಒಟ್ಟು 108ಕ್ಕೆ ಏರಿದ ಸೋಂಕಿತರ ಸಾವಿನ ಸಂಖ್ಯೆ ; ಜಿಲ್ಲೆಯಲ್ಲಿ 960 ಸಕ್ರಿಯ ಪ್ರಕರಣ
Team Udayavani, Aug 16, 2020, 10:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸತತ ಎರಡನೇ ದಿನವೂ ಕೋವಿಡ್ 19 ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
ರವಿವಾರದಂದು ಜಿಲ್ಲೆಯಲ್ಲಿ 119 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದೂ ಸಹ ಜಿಲ್ಲೆಯಲ್ಲಿ ಓರ್ವ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 3577 ಮತ್ತು ಮೃತರ ಸಂಖ್ಯೆ 108ಕ್ಕೆ ಏರಿಕೆ ಆಗಿದೆ.
ಹುಮನಾಬಾದ ಪಟ್ಟಣದ 50 ವರ್ಷದ ನಿವಾಸಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ತೊಂದರೆ ಲಕ್ಷಣ ಹೊಂದಿದ್ದ ವ್ಯಕ್ತಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇಂದಿನ ಹೊಸ ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈಗ ಪಾಸಿಟಿವ್ ಕೇಸ್ಗಳ ಸಂಖ್ಯೆ 3577ಕ್ಕೇರಿದೆ. ರವಿವಾರ 71 ಜನ ಸೇರಿ ಈವರೆಗೆ 2505 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 960 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಈವರೆಗೆ ಜಿಲ್ಲೆಯ 57,069 ಜನವರ ಗಂಟಲ ಮಾದರಿ ತಪಾಸಣೆ ಮಾಡಲಾಗಿದ್ದು, ಈ ಪೈಕಿ 53,001 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 491 ಜನರ ವರದಿ ಬರುವುದು ಬಾಕಿ ಇದೆ.
ತಾಲೂಕುವಾರು ಪಾಸಿಟಿವ್: ಬೀದರ್ ನಗರ- ತಾಲೂಕಿನಲ್ಲಿ 42 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸಂಖ್ಯೆ 1267ಕ್ಕೆ ತಲುಪಿದೆ. ಭಾಲ್ಕಿ ತಾಲೂಕಿನಲ್ಲಿ 34 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 516ಕ್ಕೆ ಏರಿಕೆಯಾಗಿದೆ.
ಔರಾದ- ಕಮಲನಗರ ತಾಲೂಕಿನಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 531ಕ್ಕೆ ಏರಿದೆ. ಹುಮನಾಬಾದ್- ಚಿಟಗುಪ್ಪ ತಾಲೂಕಿನಲ್ಲಿ 14 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 680ಕ್ಕೆ ಏರಿಕೆ ಆಗಿದೆ.
ಬಸವಕಲ್ಯಾಣ- ಹುಲಸೂರು ತಾಲೂಕಿನ 561 ಜನರಿಗೆ ಸೋಂಕು ತಗುಲಿದೆ. ಅನ್ಯ ಜಿಲ್ಲೆ ಮತ್ತು ರಾಜ್ಯಗಳ ಮೂವರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 22ಕ್ಕೆ ಹೆಚ್ಚಳವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ