ಬೀದರ್: ಜಿಲ್ಲೆಯಲ್ಲಿ ಮತ್ತೆ ಕೋವಿಡ್ 19 ಆರ್ಭಟ ಜೋರು; 135 ಪಾಸಿಟಿವ್ ಪತ್ತೆ
2398ಕ್ಕೆ ಏರಿದ ಸೋಂಕಿತರ ಸಂಖ್ಯೆ ; 429 ಜನರ ವರದಿ ಬಾಕಿ
Team Udayavani, Aug 2, 2020, 7:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಗಡಿನಾಡು ಬೀದರ್ ಜಿಲ್ಲೆಯಲ್ಲಿ ರವಿವಾರದಂದು ಒಂದೇ ದಿನ 135 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಆದರೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆ ಇಂದು ಇಳಿಕೆಯಾಗಿರುವುದು ಸಮಾಧಾನದ ವಿಷಯವಾಗಿದೆ.
ಒಂದೇ ದಿನದಲ್ಲಿ 135 ಪಾಸಿಟಿವ್ ಪ್ರಕರಣಗಳು ವರದಿಯಾಗುವ ಮೂಲಕ ಜಿಲ್ಲೆಯಲ್ಲಿ ಎರಡನೇ ಬಾರಿ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಮೂರಂಕಿಯನ್ನು ದಾಟಿದಂತಾಗಿದೆ.
ಇಂದಿನ ಒಟ್ಟು ಸೋಂಕಿತರಲ್ಲಿ ಬೀದರ್ ನಗರ ಹಾಗೂ ತಾಲೂಕಿನ 40 ಜನರು ಸೇರಿದ್ದಾರೆ. ಭಾಲ್ಕಿ ತಾಲೂಕಿನ 30 ಜನ, ಹುಮನಾಬಾದ್ ಹಾಗೂ ಚಿಟಗುಪ್ಪ ತಾಲೂಕಿನ ತಲಾ 27 ಜನ, ಬಸವಕಲ್ಯಾಣ ಹಾಗೂ ಹುಲಸೂರು ತಾಲೂಕಿನ 21 ಜನ, ಔರಾದ ಹಾಗೂ ಕಮಲನಗರ ತಾಲೂಕಿನ 16 ಜನ ಜತೆಗೆ ಅನ್ಯ ರಾಜ್ಯದ ಒಬ್ಬರಲ್ಲಿ ಕೋವಿಡ್19 ಸೋಂಕು ದೃಢಪಟ್ಟಿದೆ.
ಇಂದಿನ 135 ಜನ ಸೋಂಕಿತರು ಸೇರಿ ಈಗ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 2398ಕ್ಕೆ ಏರಿಕೆಯಾಗಿದೆ. ಈ ಪೈಕಿ 79 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ರವಿವಾರ 36 ಜನ ಸೇರಿ ಇದುವರೆಗೆ 1580 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 735 ಸಕ್ರೀಯ ಪ್ರಕರಣಗಳಿವೆ.
ಜಿಲ್ಲೆಯ 50,760 ಜನರ ವರದಿ ತಪಾಸಣೆಯನ್ನು ಇಲ್ಲಿಯತನಕ ಮಾಡಲಾಗಿದ್ದು, ಈ ಪೈಕಿ 47,933 ಮಂದಿಯದ್ದು ನೆಗೆಟಿವ್ ಬಂದಿದೆ. ಇನ್ನೂ 429 ಜನರ ವರದಿ ಬರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ ಖಚಿತಪಡಿಸಿದೆ.
ಜಿಲ್ಲೆಯ ಈವರೆಗಿನ ಒಟ್ಟು 2398 ಸೋಂಕಿತ ಪ್ರಕರಣಗಳಲ್ಲಿ ಅತಿ ಹೆಚ್ಚು ಬೀದರ ತಾಲೂಕಿನಲ್ಲಿ 895 ಕೇಸ್, ನಂತರದಲ್ಲಿ ಬಸವಕಲ್ಯಾಣ – ಹುಲಸೂರು ತಾಲೂಕಿನಲ್ಲಿ 457, ಹುಮನಾಬಾದ್- ಚಿಟಗುಪ್ಪ ತಾಲೂಕಿನಲ್ಲಿ 445, ಔರಾದ್ – ಕಮಲನಗರ ತಾಲೂಕಿನಲ್ಲಿ 306, ಭಾಲ್ಕಿ ತಾಲೂಕಿನಲ್ಲಿ 275 ಮತ್ತು ಅನ್ಯ ರಾಜ್ಯ- ಜಿಲ್ಲೆ 17 ಕೋವಿಡ್ 19 ಪ್ರಕರಣಗಳು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ