ಬೀದರ್ ನಲ್ಲಿ 136 ಅನ್ನದಾತರ ಆತ್ಮ ಹತ್ಯೆ

2018-19ರಲ್ಲಿ 57, 2019-20ರಲ್ಲಿ 42, 2020-21ರಲ್ಲಿ 37 ರೈತರು ಮೃತ

Team Udayavani, Dec 26, 2020, 6:05 PM IST

ಬೀದರ್ ನಲ್ಲಿ 136 ಅನ್ನದಾತರ ಆತ್ಮ ಹತ್ಯೆ

ಸಾಂದರ್ಭಿಕ ಚಿತ್ರ

ಬೀದರ್ : ಪ್ರಕೃತಿ ವಿಕೋಪ, ಬೆಳೆಗೆ ಸೂಕ್ತ ಬೆಲೆ ಸಿಗದೆ ಕೃಷಿಕರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮನುಕುಲಕ್ಕೆ ಅನ್ನ ನೀಡುವ ಅನ್ನದಾತರೇ ಸಂತ್ರಸ್ತರಾಗುತ್ತಿದ್ದಾರೆ. ಅಷ್ಟೇ ಅಲ್ಲ ಸಾಲದ ಸುಳಿಯಿಂದಾಗಿ ನೇಣಿಗೆ ಕೊರಳೊಡುತ್ತಿದ್ದಾರೆ. ಗಡಿ ನಾಡಲ್ಲಿ ಕಳೆದ ಮೂರು ವರ್ಷದಲ್ಲಿ 136 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಳೆಯಾಶ್ರಿತ ಪ್ರದೇಶವಾಗಿರುವ ಬೀದರ ರೈತರಿಗೆ ಸಮಸ್ಯೆಗಳು ಬೆಂಬಿಡದೆ ಕಾಡುತ್ತಿವೆ. ಜಿಲ್ಲೆಯಲ್ಲಿ ಮಂಡಿಯೂರುವ ತೀವ್ರ ಬರಗಾಲದ ಜತೆಗೆ ಒಮ್ಮೊಮ್ಮೆ ಅತಿವೃಷ್ಟಿ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ. ಆರಂಭದ ಮುಂಗಾರು ಮಳೆಯನ್ನು ನಂಬಿ ಭೂಮಿಯ ಒಡಲಿಗೆ ಕಾಳನ್ನು ತುಂಬುವ ರೈತರಿಗೆ ಮೇಘರಾಜ ಮಾತ್ರ ಕರುಣೆ ತೋರುತ್ತಿಲ್ಲ.

ಮಳೆ ಕೈಕೊಟ್ಟು ಹಾಕಿದ ಬೀಜವನ್ನೇ ಸುಟ್ಟು ಹೋಗುವಂತೆ ಮಾಡಿದ್ದರೆ, ಅತಿಯಾದ ಮಳೆ ಸುರಿದು ಕಟಾವಿಗೆ ಬರುವ ಫಸಲನ್ನು ಕೊಚ್ಚಿ ಹೋಗುವಂತೆ ಮಾಡುತ್ತಿದೆ. ಹೀಗೆ ಸಾಲ ಸೂಲ ಮಾಡಿ ಕೃಷಿ ಮಾಡುವ ರೈತ ಕೊನೆಗೆ ಆರ್ಥಿಕ ಸಮಸ್ಯೆಗೆ ಒಳಗಾಗುತ್ತಿದ್ದು, ಆತ್ಮಹತ್ಯೆಯಂಥ ಕಠಿಣ ನಿರ್ಧಾರದ ಹಾದಿ ತುಳಿಯುತ್ತಿದ್ದಾನೆ. ಕಡಿಮೆ ಬಡ್ಡಿ ದರದಲ್ಲಿ ಸಾಲ, ಬಡ್ಡಿ ಮನ್ನಾ, ರಿಯಾಯಿತಿ ದರದಲ್ಲಿ ಬೀಜ ಮತ್ತು ಕೃಷಿ ಪರಿಕರ ವಿತರಣೆಯಂಥ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದರೂ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಮಾತ್ರ ಇಳಿಕೆ ಕಂಡು ಬರುತ್ತಿಲ್ಲ. ಇದಕ್ಕೆ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿನ ಕೊರತೆಯೇ ಕಾರಣ.

ಸರ್ಕಾರದ ಸಹಾಯಹಸ್ತ ರೈತರನ್ನು ತಲುಪಿಲ್ಲ ಎಂಬುದಕ್ಕೆ ಆತ್ಮಹತ್ಯೆಗಳು ಸರಣಿ ರೂಪದಲ್ಲಿ ಮುಂದುವರಿದಿರುವುದೇ ಸಾಕ್ಷಿ. ಜಿಲ್ಲೆಯಲ್ಲಿ ಕಾರಂಜಾ ಜಲಾಶಯ ಹೊರತುಪಡಿಸಿದರೆ ಯಾವುದೇ ನೀರಾವರಿ ಸೌಲಭ್ಯಗಳಿಲ್ಲ. ಮಳೆ ನೀರಿನ ಮೇಲೆ ರೈತರು ಹೆಚ್ಚು ಅವಲಂಬಿತರು. ಬರಗಾಲ ಇಲ್ಲವೆ ಅತಿ ಹೆಚ್ಚಿನ ಮಳೆ ಇಲ್ಲಿನ ರೈತರ ಬದುಕಿಗೆ ಮಾರಕವಾಗುತ್ತಿವೆ.

ಅಂತರ್ಜಲ ಕುಸಿತ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದಿರುವುದು ರೈತರನ್ನು ಸಾಲದ ಸುಳಿಗೆ ಸಿಲುಕುವಂತೆ ಮಾಡುತ್ತಿದೆ. ಆದರೂ, ರೈತರಲ್ಲಿ ವಿಶ್ವಾಸ ಮೂಡಿಸುವಂತ ಯಾವುದೇ ಕಾರ್ಯಕ್ರಮ, ಪೂರಕ ಯೋಜನೆಗಳು ಜಾರಿಯಾಗದಿರುವುದು ವಿಪರ್ಯಾಸ. ಕೃಷಿ ಇಲಾಖೆ ಅಂಕಿ-ಅಂಶಗಳ ಪ್ರಕಾರ 2018-19ರಿಂದ 2020-21ರವರೆಗೆ ಜಿಲ್ಲೆಯಲ್ಲಿ 136 ರೈತರು ಜೀವ ಕಳೆದುಕೊಂಡಿದ್ದಾರೆ.

ಈ ಪೈಕಿ ಅತಿ ಹೆಚ್ಚು ಭಾಲ್ಕಿ ತಾಲೂಕಿನಲ್ಲಿ 31, ಬಸವಕಲ್ಯಾಣದಲ್ಲಿ 30, ಔರಾದನಲ್ಲಿ 27, ಹುಮನಾಬಾದನಲ್ಲಿ 26 ಮತ್ತು ಬೀದರ ತಾಲೂಕಿನಲ್ಲಿ 22 ರೈತ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. 2018-19ರಲ್ಲಿ 57, 2019-20ರಲ್ಲಿ 42 ಮತ್ತು 2020-21ರಲ್ಲಿ ಈವರೆಗೆ 37 ಪ್ರಕರಣಗಳು ನಡೆದಿವೆ.

ಇದನ್ನೂ ಓದಿ:ದತ್ತು ಶಾಲೆಗಳ ಅಭಿವೃದ್ಧಿಗೆ ಯೋಜನೆ ಸಿದ್ಧ

3 ಪ್ರಕರಣಕ್ಕೆ ಸಿಕ್ಕಿಲ್ಲ ಪರಿಹಾರ

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರ ನೀಡುವ ಪರಿಹಾರಧನ ಸಿಗುವ ಗ್ಯಾರಂಟಿಯೂ ಇಲ್ಲ. ಅದನ್ನು ಪಡೆಯಲು ಕಠಿಣ ನಿಯಮ ರೂಪಿಸಿರುವುದು, ಆತ್ಮಹತ್ಯೆಗೆ ಒಳಗಾಗುವ ರೈತ ಕುಟುಂಬಕ್ಕೆ ಕಂಟಕವಾಗುತ್ತಿದೆ. ಕಳೆದ 3 ವರ್ಷದಲ್ಲಿ ವರದಿಯಾದ ಒಟ್ಟು 136 ಆತ್ಮಹತ್ಯೆ ಕೇಸ್‌ ಗಳಲ್ಲಿ 39 ಪಕ್ರರಣಗಳನ್ನು ವಿವಿಧ ಕಾರಣಕ್ಕೆ ತಿರಸ್ಕೃತಗೊಂಡಿದ್ದು, 94 ಪ್ರಕರಣಗಳಿಗೆ ಪರಿಹಾರ ವಿತರಣೆ ಆಗಿದೆ. ಇನ್ನೂ 3 ರೈತ ಕುಟುಂಬಕ್ಕೆ ಪರಿಹಾರ ವಿತರಣೆ ಬಾಕಿ ಇದೆ.

ಸರ್ಕಾರ ಬೆಲೆ ಕುಸಿದಾಗ ಕೇವಲ ಬೆಂಬಲ ಬೆಲೆ ಪ್ರಕಟಿಸಿ ಕಣ್ಣೊರೆಸುವ ಬದಲು ಮಾರುಕಟ್ಟೆಯಲ್ಲಿ ಖರೀದಿಗೆ ಮುಂದಾಗಬೇಕು. ಆದರೆ, ಸರ್ಕಾರ ಕೇವಲ ಬೆಂಬಲ ಬೆಲೆ ಪ್ರಕಟಿಸಿ ಸುಮ್ಮನಾಗುವುದರಿಂದ ಮಾರುಕಟ್ಟೆ ಮೇಲೆ ಯಾವುದೇ ರೀತಿಯ ನಿಯಂತ್ರಣ ಇಲ್ಲದಂತಾಗಿದೆ. ವೈಜ್ಞಾನಿಕ ಬೆಲೆಯಿಂದ ವಂಚಿತರಾಗಿ ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾನೆ.

 ವೈಜಿನಾಥ ಕನಕಟ್ಟೆ, ರೈತ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.