ಬಸವದಳ ಬಲಪಡಿಸುವಲ್ಲಿ ಗುಂಪುಗಾರಿಕೆ ಸಲ್ಲ


Team Udayavani, Oct 31, 2020, 5:23 PM IST

bidara-tdy-1

ಬಸವಕಲ್ಯಾಣ: ರಾಷ್ಟ್ರೀಯ ಬಸವ ದಳ ಬಲಪಡಿಸಬೇಕು. ದೇಶಾದ್ಯಂತ ಸಂಘಟನೆಗಳನ್ನು ಅಧಿಕ ಮಾಡಬೇಕು ವಿನಃ ಬಸವ ದಳ ಬಲಪಡಿಸುವ ನೆಪದಲ್ಲಿ ಗುಂಪುಗಾರಿಕೆ ಮಾಡಿದರೆ, ವಿಶ್ವಗುರು ಬಸವಣ್ಣನವರ ಅವಕೃಪೆಗೆ ನಾವೆಲ್ಲ ಪಾತ್ರರಾಗಬೇಕಾಗುತ್ತದೆ ಎಂದು ಕೂಡಲ ಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಶ್ರೀ ಜಗದ್ಗುರು ಡಾ.ಮಾತೆ ಗಂಗಾದೇವಿ ಹೇಳಿದರು.

ನಗರದ ಬಸವ ಮಹಾಮನೆ ಆವರಣದಲ್ಲಿ ಹಮ್ಮಿಕೊಂಡ 19ನೇ ಕಲ್ಯಾಣ ಪರ್ವ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಬಸವದಳ ಮತ್ತು ಬಸವ ಧರ್ಮ ಪೀಠ ಎರಡು ನಮಗೆ ಬೇಕು. ಆದರೆ ರಾಷ್ಟ್ರೀಯ ಬಸವ ದಳದಲ್ಲಿ ಇದ್ದುಕೊಂಡು ಗುಂಪುಗಾರಿಕೆ ಮಾಡುತ್ತೆನೆ ಎಂಬ ಭ್ರಮೆಯಲ್ಲಿದ್ದರೆ ಮೊದಲು ಅದನ್ನು ತೆಗೆದು ಹಾಕಿ ಎಂದರು. ನಿಮ್ಮ ನಿಮ್ಮ ವೈಯಕ್ತಿಕ ದ್ವೇಷಗಳು ಸಂಘಟನೆಯಲ್ಲಿ ತರಬಾರದು ಎಂದರು. ಸಂಪ್ರದಾಯ ವಾದಿಗಳು ವಚನ ಸಾಗಿತ್ಯ ಸಹಿಸಿಕೊಳ್ಳಲಿಲ್ಲ. ವಚನ ಸಾಹಿತ್ಯ ಸುಟ್ಟು ಹಾಕಿದ್ದರು ಹೀಗಾಗಿ ಕಲ್ಯಾಣದಲ್ಲಿ ಕ್ರಾಂತಿ ಆಯಿತು. ನಂತರ ಮತ್ತೆ ಶ್ರೀ ಲಿಂಗಾನಂದ ಅಪ್ಪಾಜಿ ಹಾಗೂ ಲಿಂ.ಜಗದ್ಗುರು ಮಾತೆ ಮಹಾದೇವಿ ಅವರ ಸಂಘಟನೆ ಮಾಡಿ ಹೋಗಿದ್ದಾರೆ. ಹೀಗಾಗಿ ನಾವೆಲ್ಲರು ಒಗ್ಗಟ್ಟಿನಿಂದ ಇದ್ದಾಗ ಮಾತ್ರ ಜಗತ್ತಿಗೆ ಏನಾದರೂ ಸಂದೇಶ ನೀಡಲು ಸಾಧ್ಯ ಎಂದರು.

ಬೆಂಗಳೂರು ಶ್ರೀ ಚನ್ನಬಸಬೇಶ್ವರ ಜ್ಞಾನಪೀಠದ ಶ್ರೀ ಜಗದ್ಗುರು ಚನ್ನಬಸವನಾಂದ ಸ್ವಾಮೀಜಿ ಮಾತನಾಡಿ, ಮಾತಾಜಿ ಅವರು ತ್ರಿವಿಧ ದಾಸೋಹ ಜತೆಗೆ, ಸಮಯ, ಪ್ರಾಣ ಮತ್ತು ಅಭಿಮಾನ ತೋರಿಸಿಕೊಟ್ಟು ಹೋಗಿದ್ದಾರೆ. ಹೀಗಾಗಿ ಪ್ರಾಣದ ಹಂಗು ತೊರೆದು ಇಷ್ಟೊಂದು ಸಂಖ್ಯೆಯಲ್ಲಿ ಕಲ್ಯಾಣ ಪರ್ವದಲ್ಲಿ ಭಾಗವಹಿಸಿರುವುದಕ್ಕೆ ತುಂಬಾ ಸಂತೋಷ ಎಂದರು.

ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ಜಗತ್ತಿಗೆ ಲೆಸನ್ನೆ ಬಯಿಸಿದ್ದ ಭೂಮಿ ಬಸವಕಲ್ಯಾಣವಾಗಿದೆ. ಕೋವಿಡ್ ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದ್ದರು, ಅದನ್ನು ಮರೆತು 19ನೇ ಕಲ್ಯಾಣ ಪರ್ವಕ್ಕೆ ನಿರೀಕ್ಷೆಗೆ ಮೀರಿ ಬಸವ ಭಕ್ತರು ಆಗಮಿಸಿರುವುದು ನೋಡಿದರೆ ಕಲ್ಯಾಣದ ಶಕ್ತಿ ಗೊತ್ತಾಗುತ್ತದೆ ಎಂದು ಹೇಳಿದರು.

ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವಲ್ಲಿ ಉತ್ಸಾಹ ತೋರಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೆಲಸ ಆರಂಭಿಸುವಲ್ಲಿ ತೋರಬೇಕು ಎಂದರು. ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಈಗಾಗಲೇ ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ರಾಜ್ಯಗಳಲ್ಲಿ ಹೋರಾಟ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಾಯಿಸಲಾಗುತ್ತದೆ ಎಂದರು.

ಗೀತಾ ಚಿದ್ರಿ ಹಾಗೂ ಗೌರಮ ಬಿ.ನಾರಾಯಣರಾವ್‌ ಮಾತನಾಡಿದರು. ಶ್ರೀ ಜಗದ್ಗುರು ಮಾತೆ ಜ್ಞಾನೇಶ್ವರಿ ಮತ್ತು ದಾನೇಶ್ವರಿ ಧರ್ಮಗುರು ಪೂಜೆ ನೆರವೇರಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂಗೇರಿ ಅಧ್ಯಕ್ಷತೆ ವಹಿಸಿದ್ದರು. ಬಸವಕಲ್ಯಾಣ ಅಲ್ಲಮಪ್ರಭು ಶೂನ್ಯಪೀಠದ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಸ್ವಾಮೀಜಿ, ಬಸವ ಮಹಾಮನೆ ಬಸವ ಪ್ರಭು ಸ್ವಾಮೀಜಿ, ಮಾಲಾ ಬಿ.ನಾರಾಯಣರಾವ್‌, ಶಿವರಾಜ ಪಾಟೀಲ ಅತಿವಾಳ, ಬಸವರಾಜ ಪಾಟೀಲ ಶಿವಪೂರ,

ಶಿವರಾಜ ನರಶೆಟ್ಟಿ, ಶಾಂತಾ ಎಸ್‌.ಬಿರಾದಾರ್‌, ಶೀಲಾ ಸೋಮಶೇಕರ ಪಾಟೀಲ, ಮೇನಕಾ ನರೇಂದ್ರ ಪಾಟೀಲ, ಸರಸ್ವತಿ ಖಂಡ್ರೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.