ಕುವೈತ್‌ನಲ್ಲಿ 200 ಕನ್ನಡಿಗರು ಅತಂತ್ರ; ಉದ್ಯೋಗವೂ ಇಲ್ಲ, ಸಂಬಳವೂ ಇಲ್ಲ; ನೆರವಿಗೆ ಮೊರೆ


Team Udayavani, Jul 31, 2020, 7:26 AM IST

ಕುವೈತ್‌ನಲ್ಲಿ 200 ಕನ್ನಡಿಗರು ಅತಂತ್ರ; ಉದ್ಯೋಗವೂ ಇಲ್ಲ, ಸಂಬಳವೂ ಇಲ್ಲ; ನೆರವಿಗೆ ಮೊರೆ

ಬೀದರ: ಕುವೈತ್‌ನಲ್ಲಿ ಸಿಲುಕಿಕೊಂಡಿರುವ ಬೀದರ ಮತ್ತು ಕಲಬುರಗಿ ಜಿಲ್ಲೆಯ ಯುವಕರು.

ಬೀದರ: ಹೆಮ್ಮಾರಿ ಕೋವಿಡ್ ಅಟ್ಟಹಾಸದಿಂದಾಗಿ ಗಲ್ಫ್ ರಾಷ್ಟ್ರದಲ್ಲಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಯಲ್ಲಿ ಉದ್ಯೋಗವೂ ಇಲ್ಲದೆ, ಖರ್ಚಿಗೆ ಹಣವೂ ಇಲ್ಲದೆ
ಪರಿತಪಿಸುತ್ತಿರುವ ಬೀದರ ಮತ್ತು ಕಲಬುರಗಿ ಜಿಲ್ಲೆಯ ಕನ್ನಡಿಗರು ತಾಯ್ನಾಡಿಗೆ ಕರೆಸಿಕೊಳ್ಳುವಂತೆ ಕಣ್ಣೀರು ಹಾಕುತ್ತಿದ್ದಾರೆ.

ಕೋವಿಡ್‌-19 ವಿಶ್ವದಾದ್ಯಂತ ಹಬ್ಬುತ್ತಲೇ ಇದ್ದು ಬಹುತೇಕ ರಾಷ್ಟ್ರಗಳು ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಅರಬ್‌ ದೇಶದ ಕುವೈತ್‌ನಲ್ಲಿ ನೆಲೆಸಿರುವ
ನೂರಾರು ಕನ್ನಡಿಗರು ಈಗ ಕೊರೊನಾ ಸಂಕಷ್ಟದಿಂದ ಕೆಲಸ ಕಳೆದುಕೊಂಡಿದ್ದಾರೆ. ಈ ಪೈಕಿ ಬೀದರ ಜಿಲ್ಲೆಯ ಸುಮಾರು 150 ಮತ್ತು ಕಲಬುರಗಿ ಜಿಲ್ಲೆಯ 50ಕ್ಕೂ ಹೆಚ್ಚು ಕನ್ನಡಿಗರು ಸೇರಿದ್ದಾರೆ. ಅವರೆಲ್ಲರೂ ಈಗ ತವರಿಗೆ ಮರಳಲು ಹವಣಿಸುತ್ತಿದ್ದು, “ದಯವಿಟ್ಟು ನಮ್ಮ ನೆರವಿಗೆ ಬನ್ನಿ’ ಎಂದು ವಿಡಿಯೋ ಸಂದೇಶಗಳ ಮೂಲಕ ಸರ್ಕಾರಕ್ಕೆ
ಮನವಿ ಮಾಡುತ್ತಿದ್ದಾರೆ.

ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಹಾಗೂ ಹೈದ್ರಾಬಾದ್‌ ಮೂಲದ ಮೇಘಾ ಕಂಪನಿಯ ಅವಾಂತರದಿಂದ ಈ ಕನ್ನಡಿಗರು ಕುವೈತ್‌ ನಲ್ಲಿ ಉಳಿದುಕೊಂಡು ಪರಿತಪಿಸುತ್ತಿದ್ದಾರೆ. ಸಣ್ಣ ಕಟ್ಟಡವೊಂದರಲ್ಲೇ ನೆಲೆಸಿರುವ ನೂರಾರು ಜನ ಜೀವ ಭಯದಲ್ಲೇ ಕಾಲ ಕಳೆಯುತ್ತಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ತಮ್ಮನ್ನು ಕರೆದೊಯ್ಯಲು ಕ್ರಮ ವಹಿಸುವಂತೆ ಅಂಗಲಾಗುತ್ತಿದ್ದಾರೆ.

ಮೇಘಾ ಮೋಸ: ಹೈದ್ರಾಬಾದ್‌ನ ಮೇಘಾ ಇನ್ಫ್ರಾಸ್ಟ್ರಕ್ಚರ್‌ ಕಂಪನಿ ಕಳೆದ ಮೂರು ವರ್ಷಗಳ ಹಿಂದೆ ಈ ಕನ್ನಡಿಗರನ್ನು ದುಡಿಮೆಗಾಗಿ ಕುವೈತ್‌ ದೇಶಕ್ಕೆ ಕರೆದೊಯ್ದಿದ್ದು, ಅದರಲ್ಲಿ
ಬೀದರ ಜಿಲ್ಲೆಯ ಹುಮನಾಬಾದ, ಭಾಲ್ಕಿ ಮತ್ತು ಬಸವಕಲ್ಯಾಣ ತಾಲೂಕಿನವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೊರೊನಾ ಸಂದಿಗ್ಧ ಸ್ಥಿತಿಯಲ್ಲಿ ಮೇಘಾ ಕಂಪನಿ ಈ ನೌಕರರನ್ನು ಅರ್ಧದಲ್ಲೇ ಕೈಬಿಟ್ಟಿದೆ. ಆರು ತಿಂಗಳಿಂದ ವೇತನವೂ ಇಲ್ಲ, ಇರಲು ಮನೆಯೂ ಕಲ್ಪಿಸಿಲ್ಲ. ಅಷ್ಟೇ ಅಲ್ಲ ಭಾರತಕ್ಕೆ ತೆರಳಲು ವಿಮಾನ ಟಿಕೆಟ್‌ ಮಾಡಿಸಿರುವುದಾಗಿ ಸುಳ್ಳು ಹೇಳುತ್ತಾ ಬಂದಿದ್ದು, ನಕಲಿ ಟಿಕೆಟ್‌ ಗಳನ್ನು ತೋರಿಸಿ ಮೋಸ ಮಾಡಿದೆ ಎಂದು ಕನ್ನಡಿಗ ನೌಕರರು ಅಳಲು ತೋಡಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿಂದ ಮೇಘಾ ಕಂಪನಿ ಕುವೈತ್‌ನಲ್ಲಿ ತನ್ನ ಕಚೇರಿ ಬಂದ್‌ ಮಾಡಿಕೊಂಡಿದೆ. ಈಗ ನಮ್ಮನ್ನು ರಕ್ಷಿಸುವವರೇ ಇಲ್ಲದಂತಾಗಿ ಅತಂತ್ರಕ್ಕೆ ಸಿಲುಕಿದ್ದೇವೆ. ಬೇರೆ ರಾಷ್ಟ್ರಗಳಲ್ಲಿದ್ದ ಕನ್ನಡಿಗರನ್ನು ವಂದೇ ಭಾರತ್‌ ಮಿಷನ್‌ ನಲ್ಲಿ ಕರೆದುಕೊಂಡು ಬಂದಂತೆ, ನಮ್ಮನ್ನು ಸಹ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಬೀದರನ ಶಿವಕುಮಾರ,
ಬಸವಕಲ್ಯಾಣದ ರಾಜಕುಮಾರ ಇನ್ನಿತರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕುವೈತ್‌ನಲ್ಲಿ ಬೀದರ ಮತ್ತು ಕಲಬುರಗಿ ಯುವಕರು ಸಿಲುಕಿಕೊಂಡಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅವರ ಮಾಹಿತಿ ಪಡೆಯುತ್ತಿದ್ದೇನೆ. ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲಿ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆಯಿಸಿಕೊಳ್ಳಲು ಪ್ರಯತ್ನ ಮಾಡುತ್ತೇನೆ. ಈಶ್ವರ ಖಂಡ್ರೆ, ಭಾಲ್ಕಿ ಶಾಸಕರು, ಮತ್ತು ಕಾರ್ಯಾಧ್ಯಕ್ಷರು, ಕೆಪಿಸಿಸಿ

ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.